ಉತ್ತರ ಪ್ರದೇಶ ಸಿಎಂ ಯೋಗಿಗೆ ಬಾಂಬ್ ಹಾಕುವ ಬೆದರಿಕೆ ; ಪೊಲೀಸರ ತನಿಖೆ 

09-08-22 05:07 pm       HK News Desk   ದೇಶ - ವಿದೇಶ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಾಂಬ್ ಹಾಕಿ‌ ಕೊಲ್ಲುವುದಾಗಿ ಜೀವ ಬೆದರಿಕೆ ಒಡ್ಡಲಾಗಿದೆ. 

ನವದೆಹಲಿ, ಆಗಸ್ಟ್ 9 : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಾಂಬ್ ಹಾಕಿ‌ ಕೊಲ್ಲುವುದಾಗಿ ಜೀವ ಬೆದರಿಕೆ ಒಡ್ಡಲಾಗಿದೆ. 

ಆಗಸ್ಟ್ 2ರಂದು ಪೊಲೀಸ್ ನಿಯಂತ್ರಣ ಕೊಠಡಿಯ ವಾಟ್ಸಾಪ್ ಸಹಾಯವಾಣಿಗೆ ಜೀವ ಬೆದರಿಕೆ ಇರುವ ಸಂದೇಶವನ್ನು  ಕಳುಹಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಜೀವ ಬೆದರಿಕೆ ಬಂದಿರುವುದರಿಂದ ಅವರ ನಿವಾಸ, ಕಚೇರಿಯ ಸುತ್ತಮುತ್ತ ಕಟ್ಟೆಚ್ಚರ ವಹಿಸಲಾಗಿದೆ.

ಇನ್ನು ಮೂರು ದಿನಗಳೊಳಗೆ ಮುಖ್ಯಮಂತ್ರಿಗೆ ಬಾಂಬ್ ಹಾಕುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಯ ಸಹಾಯವಾಣಿಗೆ ವಾಟ್ಸಾಪ್ ಸಂದೇಶದ ಮೂಲಕ ಬೆದರಿಕೆ ಹಾಕಲಾಗಿತ್ತು. ಸಹಾಯವಾಣಿಯ ಕಾರ್ಯ ನಿರ್ವಾಹಕರು ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಸಂದೇಶ ಕಳುಹಿಸಿದವರನ್ನು ಪತ್ತೆಹಚ್ಚಲು ಹುಡುಕಾಟ ನಡೆಸಲಾಗುತ್ತಿದೆ. ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

A WhatsApp message threatening to kill Chief Minister Yogi Adityanath was received on the state police's text helpline following which a case was registered against a man, official here said Tuesday.Police said the message was sent allegedly by a person named Shahid on the WhatsApp number of Dial-112 helpline.