ಬ್ರೇಕಿಂಗ್ ನ್ಯೂಸ್
10-08-22 05:50 pm HK News Desk ದೇಶ - ವಿದೇಶ
ಪಾಟ್ನಾ, ಆಗಸ್ಟ್ 10: ಬಿಹಾರದಲ್ಲಿ ಎಂಟನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅತ್ತ ಬಿಜೆಪಿ ಸಖ್ಯ ತೊರೆದು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ಒಂದೇ ದಿನದಲ್ಲಿ ಇತ್ತ ಆರ್ ಜೆಡಿ, ಕಾಂಗ್ರೆಸ್ ಇನ್ನಿತರ ಏಳು ಪಕ್ಷಗಳ ಬೆಂಬಲದೊಂದಿಗೆ ಮತ್ತೆ ಸರಕಾರ ರಚಿಸಿದ್ದಾರೆ.
ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಜಭವನದಲ್ಲಿ ನಿತೀಶ್ ಕುಮಾರ್ ದಾಖಲೆಯ ಎಂಟನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ, ಆರ್ ಜೆಡಿ ನಾಯಕ, ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಡಿಸಿಎಂ ಆಗಿ ಪ್ರಮಾಣ ಸ್ವೀಕರಿಸಿದ್ದಾರೆ. ಒಂದು ವಾರ ಕಾಲ ಬಿಜೆಪಿ ನಾಯಕರ ಜೊತೆಗಿನ ಮುನಿಸಿನ ಬಳಿಕ ಬಿಜೆಪಿ- ಜೆಡಿಯು ಮೈತ್ರಿ ಸರಕಾರವನ್ನೇ ವಿಸರ್ಜಿಸಿ, ಒಂದೇ ದಿನದಲ್ಲಿ ವಿರೋಧ ಪಕ್ಷಗಳಾಗಿದ್ದ ಆರ್ ಜೆಡಿ, ಕಾಂಗ್ರೆಸ್ ಬೆಂಬಲ ಪಡೆದು ಮತ್ತೆ ಅಧಿಕಾರಕ್ಕೇರಿದ್ದು ವಿಶೇಷ.
ಆಮೂಲಕ 71 ವರ್ಷದ ನಿತೀಶ್ ಕುಮಾರ್, ಮತ್ತೆ ಹಳೆಯ ಮಹಾಘಟಬಂಧನ್ ಮೈತ್ರಿಕೂಟವನ್ನು ರಚಿಸುವ ಸುಳಿವು ನೀಡಿದ್ದಾರೆ. ಎನ್ ಡಿಎ ಒಕ್ಕೂಟ ತೊರೆದು ಮರಳಿ ಮಹಾ ಒಕ್ಕೂಟ ಸೇರುತ್ತಿದ್ದಂತೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರೇ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಅನ್ನುವ ರೀತಿ ಬಿಂಬಿತಗೊಂಡಿದ್ದಾರೆ. ಇದೇ ವೇಳೆ, ನಿತೀಶ್ ಕುಮಾರ್ ದ್ರೋಹ ಎಸಗಿದ್ದಾರೆಂದು ಕಿಡಿಕಾರಿರುವ ಬಿಜೆಪಿ ನಾಯಕರು, ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಬಿಹಾರದಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದ್ದು, ಅದಕ್ಕೆ ತಯಾರಿ ನಡೆಸುತ್ತಿದ್ದಾಗಲೇ ಬಿಜೆಪಿ ವಿರುದ್ಧ ಮುನಿಸಿಕೊಂಡು ಪ್ರತ್ಯೇಕ ಸರಕಾರ ರಚಿಸಿದ್ದು ಮಹತ್ವದ ಬೆಳವಣಿಗೆಯಾಗಿದೆ.
Stripped of power in Bihar, the BJP today staged a massive demonstration condemning the "betrayal" of Chief Minister Nitish Kumar, whose similar volte face five years ago had helped it join the government through the proverbial "back door".
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm