ಬ್ರೇಕಿಂಗ್ ನ್ಯೂಸ್
10-08-22 08:24 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 10: ಇತ್ತೀಚೆಗೆ ಮೊಹಮ್ಮದ್ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಮುಸ್ಲಿಮರ ಆಕ್ರೋಶಕ್ಕೆ ಗುರಿಯಾಗಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾ ದೇಶದ ವಿವಿಧೆಡೆ ದಾಖಲಾದ ಎಲ್ಲ ಪ್ರಕರಣಗಳನ್ನು ದೆಹಲಿಯಲ್ಲೇ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಈ ಬಗ್ಗೆ ನೂಪುರ್ ಶರ್ಮಾ ಪರ ವಕೀಲರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
ನ್ಯಾಯಾಧೀಶ ಸೂರ್ಯಕಾಂತ್ ಮತ್ತು ಜೆಬಿ ಪಾರ್ದಿವಾಲಾ ಅವರಿದ್ದ ಪೀಠವು ಈ ಬಗ್ಗೆ ಬುಧವಾರ ಆದೇಶ ನೀಡಿದ್ದು ವಿವಾದಕ್ಕೆ ಸಂಬಂಧಿಸಿ ದೇಶದ ವಿವಿಧೆಡೆ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ದೆಹಲಿಯ ವಿಶೇಷ ಪೊಲೀಸ್ ತಂಡಕ್ಕೆ ಹಸ್ತಾಂತರ ಮಾಡಬೇಕು. ಎಲ್ಲ ಎಫ್ಐಆರ್ ಗಳನ್ನು ಕ್ಲಬ್ ಮಾಡಿ, ದೆಹಲಿ ಪೊಲೀಸರು ತನಿಖೆ ನಡೆಸಬೇಕು ಎಂದು ತಿಳಿಸಿದ್ದಾರೆ.

ಇದಲ್ಲದೆ, ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎಫ್ಐಆರ್ ಗಳನ್ನು ರದ್ದುಪಡಿಸಲು ದೆಹಲಿ ಹೈಕೋರ್ಟ್ ಹೋಗಲು ಅನುಮತಿ ನೀಡಬೇಕೆಂದು ನೂಪುರ್ ಶರ್ಮಾ ಪರ ವಕೀಲರು ಕೇಳಿಕೊಂಡಿದ್ದಾರೆ. ಆ ಬಗ್ಗೆ ಪ್ರತಿಕ್ರಿಯಿಸಿದ ಪೀಠವು, ಯಾವೆಲ್ಲ ರೀತಿಯ ಪ್ರಕರಣಗಳು ದಾಖಲಾಗಿವೆ ಎನ್ನುವುದು ತಮ್ಮ ಗಮನಕ್ಕೆ ಇಲ್ಲ. ನೀವು ಅದರ ಬಗ್ಗೆ ಪ್ರಶ್ನೆ ಮಾಡುವುದಿದ್ದರೆ ದೆಹಲಿ ಹೈಕೋರ್ಟಿನಲ್ಲಿ ಮಾಡಬಹುದು ಎಂದಿದ್ದಾರೆ.
ಇದಕ್ಕೂ ಮುನ್ನ, ಎಲ್ಲ ಎಫ್ಐಆರ್ ಗಳನ್ನು ಕ್ಲಬ್ ಮಾಡಿ ದೆಹಲಿಯಲ್ಲೇ ವಿಚಾರಣೆ ನಡೆಸಬೇಕೆಂಬ ಕೋರಿಕೆಯ ಅರ್ಜಿ ಬಗ್ಗೆ ಗರಂ ಆಗಿದ್ದ ನ್ಯಾಯಪೀಠವು, ಈ ರೀತಿಯ ಹೇಳಿಕೆ ನೀಡುವಾಗ ನಿಮಗೆ ತಿಳಿದಿರಲಿಲ್ಲವೇ.. ಯಾರದ್ದೋ ಭಾವನೆ ಘಾಸಿಗೊಳಿಸಿ, ಇನ್ಯಾರದ್ದೋ ಜೀವ ಹಾನಿಯಾಗುವುದಕ್ಕೆ ಅವಕಾಶ ನೀಡಿದ್ದೀರಿ. ಇದಕ್ಕೆ ಕ್ಷಮೆ ಇಲ್ಲ ಎಂದು ನೂಪುರ್ ಶರ್ಮಾ ಹೇಳಿಕೆಯ ಬಗ್ಗೆ ಖಾರವಾಗಿ ಟೀಕಿಸಿತ್ತು. ಆನಂತರ, ಶರ್ಮಾ ಪರ ವಕೀಲರು ಪದೇ ಪದೇ ಕೋರಿಕೆ ಸಲ್ಲಿಸಿದ ಬಳಿಕ ಮತ್ತು ನೂಪುರ್ ಶರ್ಮಾ ಅವರಿಗೆ ಜೀವ ಬೆದರಿಕೆ ಇರುವುದರಿಂದ ಎಲ್ಲ ಕಡೆಗೂ ವಿಚಾರಣೆಗೆ ತೆರಳಲು ಸಾಧ್ಯವಾಗದು ಎಂದು ಮನವರಿಕೆ ಮಾಡಿದ ಕಾರಣ ಎಫ್ಐಆರ್ ಕ್ಲಬ್ ಮಾಡಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
The Supreme Court on Wednesday clubbed and transferred all FIRs lodged in several states against suspended BJP spokesperson Nupur Sharma over her remarks on the Prophet Mohammad to Delhi Police special cell’s IFSO unit. A special bench headed by Justice Surya Kant and Justice JB Pardiwala was hearing the plea filed by Sharma seeking clubbing and transfer of multiple FIRs filed against her.After hearing the arguments from all sides, the bench said, “Since this court has already taken cognisance of the threat to the life of the petitioner and specific instances have been cited, we direct that all the FIRs be transferred and clubbed to Delhi Police…
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm