ಬ್ರೇಕಿಂಗ್ ನ್ಯೂಸ್
10-08-22 10:45 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 10: ಸುಪ್ರೀಂ ಕೋರ್ಟ್ ಹಿರಿಯ ನ್ಯಾಯಾಧೀಶ ಜಸ್ಟಿಸ್ ಉದಯ್ ಉಮೇಶ್ ಲಲಿತ್ ಅವರು ಭಾರತದ 49ನೇ ಮುಖ್ಯ ನ್ಯಾಯಾಧೀಶರಾಗಲಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ.ರಮಣ ಅವರಿಂದ ತೆರವಾಗುವ ಸ್ಥಾನಕ್ಕೆ ಯುಯು ಲಲಿತ್ ನೇಮಕಗೊಂಡಿದ್ದಾರೆ. ಆಗಸ್ಟ್ 27ರಂದು ಅವರು ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನವೆಂಬರ್ 8ರಂದು ಯುಯು ಲಲಿತ್ ನಿವೃತ್ತಿಯಾಗಲಿದ್ದು, ಕೇವಲ 74 ದಿವಸಗಳಷ್ಟೇ ಮುಖ್ಯ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಮುಂಬೈನ ಸರಕಾರಿ ಕಾನೂನು ಕಾಲೇಜಿನಲ್ಲಿ ಪದವಿ ಪೂರೈಸಿದ್ದ ಲಲಿತ್ ಅವರು ಕ್ರಿಮಿನಲ್ ಕಾನೂನಿನಲ್ಲಿ ನಿಷ್ಣಾತರಾಗಿದ್ದರು. ಮೊದಲಿಗೆ ಮುಂಬೈ ಹೈಕೋರ್ಟಿನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡಿದ್ದರು. ಅವರ ತಂದೆಯೂ ಸೀನಿಯರ್ ವಕೀಲರಾಗಿದ್ದು, ನ್ಯಾಯಾಧೀಶರಾಗಿಯೂ ಸೇವೆಗೈದಿದ್ದರು.
ಯುಯು ಲಲಿತ್ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಕೆಲವು ಮಹತ್ವದ ಪ್ರಕರಣಗಳಲ್ಲಿ ತೀರ್ಪು ನೀಡಿದ್ದರು. 2017ರಲ್ಲಿ ತ್ರಿವಳಿ ತಲಾಖ್ ಪ್ರಕರಣದಲ್ಲಿ ತೀರ್ಪು ನೀಡಿದ್ದ ಐವರು ಸದಸ್ಯರ ಸಾಂವಿಧಾನಿಕ ಪೀಠದಲ್ಲಿ ಇವರೂ ಒಬ್ಬರಾಗಿದ್ದರು. ತ್ರಿವಳಿ ತಲಾಖ್ ಎನ್ನುವುದು ಅಸಾಂವಿಧಾನಿಕ, ಕಾನೂನು ಬಾಹಿರ ಎಂದು ಯುಯು ಲಲಿತ್ ತೀರ್ಪು ನೀಡಿದ್ದು ಗಮನ ಸೆಳೆದಿತ್ತು. ಮುಖ್ಯ ನ್ಯಾಯಾಧೀಶರಾಗಿದ್ದ ಜೆಎಸ್ ಖೇಹರ್ ಮತ್ತು ಅಬ್ದುಲ್ ನಜೀರ್ ತ್ರಿವಳಿ ತಲಾಖ್ ಪರವಾಗಿ ತೀರ್ಪು ನೀಡಿದ್ದರೆ, ಕುರಿಯನ್ ಜೋಸೆಫ್, ಆರ್.ಎಫ್ ನಾರಿಮನ್ ಮತ್ತು ಯುಯು ಲಲಿತ್ ತ್ರಿವಳಿ ತಲಾಖ್ ವಿರುದ್ಧ ತೀರ್ಪು ನೀಡಿದ್ದರು. ಸದ್ಯಕ್ಕೆ ಖೇಹರ್, ನಾರಿಮನ್ ಮತ್ತು ಜೋಸೆಫ್ ನ್ಯಾಯಾಧೀಶ ಹುದ್ದೆಯಿಂದ ನಿವೃತ್ತರಾಗಿದ್ದಾರೆ.
President Droupadi Murmu issued a notice on Wednesday for the appointment of Justice UU Lalit as the next Chief Justice of India. He will succeed Chief Justice of India (CJI) NV Ramana, whose tenure ends on August 26.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am