ಬ್ರೇಕಿಂಗ್ ನ್ಯೂಸ್
10-08-22 10:45 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 10: ಸುಪ್ರೀಂ ಕೋರ್ಟ್ ಹಿರಿಯ ನ್ಯಾಯಾಧೀಶ ಜಸ್ಟಿಸ್ ಉದಯ್ ಉಮೇಶ್ ಲಲಿತ್ ಅವರು ಭಾರತದ 49ನೇ ಮುಖ್ಯ ನ್ಯಾಯಾಧೀಶರಾಗಲಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ.ರಮಣ ಅವರಿಂದ ತೆರವಾಗುವ ಸ್ಥಾನಕ್ಕೆ ಯುಯು ಲಲಿತ್ ನೇಮಕಗೊಂಡಿದ್ದಾರೆ. ಆಗಸ್ಟ್ 27ರಂದು ಅವರು ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನವೆಂಬರ್ 8ರಂದು ಯುಯು ಲಲಿತ್ ನಿವೃತ್ತಿಯಾಗಲಿದ್ದು, ಕೇವಲ 74 ದಿವಸಗಳಷ್ಟೇ ಮುಖ್ಯ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಮುಂಬೈನ ಸರಕಾರಿ ಕಾನೂನು ಕಾಲೇಜಿನಲ್ಲಿ ಪದವಿ ಪೂರೈಸಿದ್ದ ಲಲಿತ್ ಅವರು ಕ್ರಿಮಿನಲ್ ಕಾನೂನಿನಲ್ಲಿ ನಿಷ್ಣಾತರಾಗಿದ್ದರು. ಮೊದಲಿಗೆ ಮುಂಬೈ ಹೈಕೋರ್ಟಿನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡಿದ್ದರು. ಅವರ ತಂದೆಯೂ ಸೀನಿಯರ್ ವಕೀಲರಾಗಿದ್ದು, ನ್ಯಾಯಾಧೀಶರಾಗಿಯೂ ಸೇವೆಗೈದಿದ್ದರು.
ಯುಯು ಲಲಿತ್ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಕೆಲವು ಮಹತ್ವದ ಪ್ರಕರಣಗಳಲ್ಲಿ ತೀರ್ಪು ನೀಡಿದ್ದರು. 2017ರಲ್ಲಿ ತ್ರಿವಳಿ ತಲಾಖ್ ಪ್ರಕರಣದಲ್ಲಿ ತೀರ್ಪು ನೀಡಿದ್ದ ಐವರು ಸದಸ್ಯರ ಸಾಂವಿಧಾನಿಕ ಪೀಠದಲ್ಲಿ ಇವರೂ ಒಬ್ಬರಾಗಿದ್ದರು. ತ್ರಿವಳಿ ತಲಾಖ್ ಎನ್ನುವುದು ಅಸಾಂವಿಧಾನಿಕ, ಕಾನೂನು ಬಾಹಿರ ಎಂದು ಯುಯು ಲಲಿತ್ ತೀರ್ಪು ನೀಡಿದ್ದು ಗಮನ ಸೆಳೆದಿತ್ತು. ಮುಖ್ಯ ನ್ಯಾಯಾಧೀಶರಾಗಿದ್ದ ಜೆಎಸ್ ಖೇಹರ್ ಮತ್ತು ಅಬ್ದುಲ್ ನಜೀರ್ ತ್ರಿವಳಿ ತಲಾಖ್ ಪರವಾಗಿ ತೀರ್ಪು ನೀಡಿದ್ದರೆ, ಕುರಿಯನ್ ಜೋಸೆಫ್, ಆರ್.ಎಫ್ ನಾರಿಮನ್ ಮತ್ತು ಯುಯು ಲಲಿತ್ ತ್ರಿವಳಿ ತಲಾಖ್ ವಿರುದ್ಧ ತೀರ್ಪು ನೀಡಿದ್ದರು. ಸದ್ಯಕ್ಕೆ ಖೇಹರ್, ನಾರಿಮನ್ ಮತ್ತು ಜೋಸೆಫ್ ನ್ಯಾಯಾಧೀಶ ಹುದ್ದೆಯಿಂದ ನಿವೃತ್ತರಾಗಿದ್ದಾರೆ.
President Droupadi Murmu issued a notice on Wednesday for the appointment of Justice UU Lalit as the next Chief Justice of India. He will succeed Chief Justice of India (CJI) NV Ramana, whose tenure ends on August 26.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm