ಬ್ರೇಕಿಂಗ್ ನ್ಯೂಸ್
10-08-22 10:45 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 10: ಸುಪ್ರೀಂ ಕೋರ್ಟ್ ಹಿರಿಯ ನ್ಯಾಯಾಧೀಶ ಜಸ್ಟಿಸ್ ಉದಯ್ ಉಮೇಶ್ ಲಲಿತ್ ಅವರು ಭಾರತದ 49ನೇ ಮುಖ್ಯ ನ್ಯಾಯಾಧೀಶರಾಗಲಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ.ರಮಣ ಅವರಿಂದ ತೆರವಾಗುವ ಸ್ಥಾನಕ್ಕೆ ಯುಯು ಲಲಿತ್ ನೇಮಕಗೊಂಡಿದ್ದಾರೆ. ಆಗಸ್ಟ್ 27ರಂದು ಅವರು ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನವೆಂಬರ್ 8ರಂದು ಯುಯು ಲಲಿತ್ ನಿವೃತ್ತಿಯಾಗಲಿದ್ದು, ಕೇವಲ 74 ದಿವಸಗಳಷ್ಟೇ ಮುಖ್ಯ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಮುಂಬೈನ ಸರಕಾರಿ ಕಾನೂನು ಕಾಲೇಜಿನಲ್ಲಿ ಪದವಿ ಪೂರೈಸಿದ್ದ ಲಲಿತ್ ಅವರು ಕ್ರಿಮಿನಲ್ ಕಾನೂನಿನಲ್ಲಿ ನಿಷ್ಣಾತರಾಗಿದ್ದರು. ಮೊದಲಿಗೆ ಮುಂಬೈ ಹೈಕೋರ್ಟಿನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡಿದ್ದರು. ಅವರ ತಂದೆಯೂ ಸೀನಿಯರ್ ವಕೀಲರಾಗಿದ್ದು, ನ್ಯಾಯಾಧೀಶರಾಗಿಯೂ ಸೇವೆಗೈದಿದ್ದರು.
ಯುಯು ಲಲಿತ್ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಕೆಲವು ಮಹತ್ವದ ಪ್ರಕರಣಗಳಲ್ಲಿ ತೀರ್ಪು ನೀಡಿದ್ದರು. 2017ರಲ್ಲಿ ತ್ರಿವಳಿ ತಲಾಖ್ ಪ್ರಕರಣದಲ್ಲಿ ತೀರ್ಪು ನೀಡಿದ್ದ ಐವರು ಸದಸ್ಯರ ಸಾಂವಿಧಾನಿಕ ಪೀಠದಲ್ಲಿ ಇವರೂ ಒಬ್ಬರಾಗಿದ್ದರು. ತ್ರಿವಳಿ ತಲಾಖ್ ಎನ್ನುವುದು ಅಸಾಂವಿಧಾನಿಕ, ಕಾನೂನು ಬಾಹಿರ ಎಂದು ಯುಯು ಲಲಿತ್ ತೀರ್ಪು ನೀಡಿದ್ದು ಗಮನ ಸೆಳೆದಿತ್ತು. ಮುಖ್ಯ ನ್ಯಾಯಾಧೀಶರಾಗಿದ್ದ ಜೆಎಸ್ ಖೇಹರ್ ಮತ್ತು ಅಬ್ದುಲ್ ನಜೀರ್ ತ್ರಿವಳಿ ತಲಾಖ್ ಪರವಾಗಿ ತೀರ್ಪು ನೀಡಿದ್ದರೆ, ಕುರಿಯನ್ ಜೋಸೆಫ್, ಆರ್.ಎಫ್ ನಾರಿಮನ್ ಮತ್ತು ಯುಯು ಲಲಿತ್ ತ್ರಿವಳಿ ತಲಾಖ್ ವಿರುದ್ಧ ತೀರ್ಪು ನೀಡಿದ್ದರು. ಸದ್ಯಕ್ಕೆ ಖೇಹರ್, ನಾರಿಮನ್ ಮತ್ತು ಜೋಸೆಫ್ ನ್ಯಾಯಾಧೀಶ ಹುದ್ದೆಯಿಂದ ನಿವೃತ್ತರಾಗಿದ್ದಾರೆ.
President Droupadi Murmu issued a notice on Wednesday for the appointment of Justice UU Lalit as the next Chief Justice of India. He will succeed Chief Justice of India (CJI) NV Ramana, whose tenure ends on August 26.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm