ಬ್ರೇಕಿಂಗ್ ನ್ಯೂಸ್
12-08-22 08:51 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 12: ಸ್ವಾತಂತ್ರ್ಯೋತ್ಸವಕ್ಕೆ ಎರಡೇ ದಿನ ಇರುವಾಗ ಉತ್ತರ ಪ್ರದೇಶ ಪೊಲೀಸರು ಜೈಶ್- ಇ-ಮಹಮ್ಮದ್ ಉಗ್ರವಾದಿ ಸಂಘಟನೆಗೆ ಸೇರಿದ ಉಗ್ರನನ್ನು ಪಶ್ಚಿಮ ಉತ್ತರ ಪ್ರದೇಶದ ಸಹರಾಣ್ ಪುರ್ ಎಂಬಲ್ಲಿ ಬಂಧಿಸಿದ್ದಾರೆ. ಇತ್ತೀಚೆಗೆ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಕೊಲ್ಲುವ ಗುರಿ ಇಟ್ಟುಕೊಂಡಿದ್ದ ಅನ್ನುವ ಸ್ಫೋಟಕ ಮಾಹಿತಿಯನ್ನು ಪೊಲೀಸರು ಹೊರಗೆಡವಿದ್ದಾರೆ.
ಬಂಧಿತನನ್ನು ಮೊಹಮ್ಮದ್ ನದೀಂ ಎಂದು ಗುರುತಿಸಲಾಗಿದ್ದು, ಉತ್ತರ ಪ್ರದೇಶದ ಆಂಟಿ ಟೆರರಿಸ್ಟ್ ಸ್ಕ್ವಾಡ್ ಸಿಬಂದಿ ಸೆರೆ ಹಿಡಿದಿದ್ದಾರೆ. ಆತನಿಗೆ ನೂಪುರ್ ಶರ್ಮಾನನ್ನು ಹುಡುಕಿ ಕೊಲ್ಲುವುದನ್ನೇ ಪ್ರಮುಖ ಟಾರ್ಗೆಟ್ ಆಗಿ ನೀಡಲಾಗಿತ್ತು. ಜೈಶೆ ಮಹಮ್ಮದ್ ಮತ್ತು ತೆಹ್ರೀಕ್ ಇ-ತಾಲಿಬಾನ್ ಉಗ್ರವಾದಿ ಸಂಘಟನೆಗಳ ಜೊತೆ ಲಿಂಕ್ ಹೊಂದಿದ್ದ. 2018ರಿಂದ ನಿರಂತರವಾಗಿ ಪಾಕಿಸ್ಥಾನದ ಉಗ್ರರ ಜೊತೆ ಸಂಪರ್ಕದಲ್ಲಿದ್ದ ಅನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಮೊಹಮ್ಮದ್ ನದೀಂ ವಿವಿಧ ಸಾಮಾಜಿಕ ಜಾಲತಾಣಗಳನ್ನು ನಕಲಿ ಐಡಿ ಬಳಸಿ ಕಾರ್ಯಾಚರಿಸುತ್ತಿದ್ದು, ಅದರಲ್ಲಿಯೇ ಪಾಕಿಸ್ಥಾನದ ಉಗ್ರರ ಜೊತೆಗೆ ಸಂಪರ್ಕ ಮಾಡುತ್ತಿದ್ದ. ಪಾಕಿಸ್ಥಾನದ ಕಡೆಯ ಉಗ್ರರು ನೂಪುರ್ ಶರ್ಮಾಳನ್ನು ಕೊಲ್ಲುವ ಟಾರ್ಗೆಟ್ ಕೊಟ್ಟಿದ್ದರು. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ದೇಶಾದ್ಯಂತ ಪೊಲೀಸರು ಅಲರ್ಟ್ ಇರುವಂತೆ ಸೂಚಿಸಲಾಗಿದೆ. ಸ್ವಾತಂತ್ರ್ಯದ ಸಂದರ್ಭದಲ್ಲಿ ಉಗ್ರರು ವಿಧ್ವಂಸಕ ಕೃತ್ಯಕ್ಕೆ ಯೋಜನೆ ಹಾಕುತ್ತಾರೆಂದು ಪೊಲೀಸರು ಸೇರಿದಂತೆ ವಿವಿಧ ಭದ್ರತಾ ಏಜನ್ಸಿಗಳು ಅಲರ್ಟ್ ಆಗಿರುತ್ತವೆ. ಇದೇ ವೇಳೆ, ಉತ್ತರ ಪ್ರದೇಶದಲ್ಲಿ ಉಗ್ರವಾದಿ ಲಿಂಕ್ ಇರುವ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.
Ahead of Independence Day, police claimed to have busted a major terror plot on Friday as it arrested an alleged operative of Jaish-e-Mohammad and Tehreek-e-Taliban from western Uttar Pradesh’s Saharanpur. The accused was tasked with killing former BJP leader Nupur Sharma, police added.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm