ಬ್ರೇಕಿಂಗ್ ನ್ಯೂಸ್
12-08-22 08:51 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 12: ಸ್ವಾತಂತ್ರ್ಯೋತ್ಸವಕ್ಕೆ ಎರಡೇ ದಿನ ಇರುವಾಗ ಉತ್ತರ ಪ್ರದೇಶ ಪೊಲೀಸರು ಜೈಶ್- ಇ-ಮಹಮ್ಮದ್ ಉಗ್ರವಾದಿ ಸಂಘಟನೆಗೆ ಸೇರಿದ ಉಗ್ರನನ್ನು ಪಶ್ಚಿಮ ಉತ್ತರ ಪ್ರದೇಶದ ಸಹರಾಣ್ ಪುರ್ ಎಂಬಲ್ಲಿ ಬಂಧಿಸಿದ್ದಾರೆ. ಇತ್ತೀಚೆಗೆ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಕೊಲ್ಲುವ ಗುರಿ ಇಟ್ಟುಕೊಂಡಿದ್ದ ಅನ್ನುವ ಸ್ಫೋಟಕ ಮಾಹಿತಿಯನ್ನು ಪೊಲೀಸರು ಹೊರಗೆಡವಿದ್ದಾರೆ.
ಬಂಧಿತನನ್ನು ಮೊಹಮ್ಮದ್ ನದೀಂ ಎಂದು ಗುರುತಿಸಲಾಗಿದ್ದು, ಉತ್ತರ ಪ್ರದೇಶದ ಆಂಟಿ ಟೆರರಿಸ್ಟ್ ಸ್ಕ್ವಾಡ್ ಸಿಬಂದಿ ಸೆರೆ ಹಿಡಿದಿದ್ದಾರೆ. ಆತನಿಗೆ ನೂಪುರ್ ಶರ್ಮಾನನ್ನು ಹುಡುಕಿ ಕೊಲ್ಲುವುದನ್ನೇ ಪ್ರಮುಖ ಟಾರ್ಗೆಟ್ ಆಗಿ ನೀಡಲಾಗಿತ್ತು. ಜೈಶೆ ಮಹಮ್ಮದ್ ಮತ್ತು ತೆಹ್ರೀಕ್ ಇ-ತಾಲಿಬಾನ್ ಉಗ್ರವಾದಿ ಸಂಘಟನೆಗಳ ಜೊತೆ ಲಿಂಕ್ ಹೊಂದಿದ್ದ. 2018ರಿಂದ ನಿರಂತರವಾಗಿ ಪಾಕಿಸ್ಥಾನದ ಉಗ್ರರ ಜೊತೆ ಸಂಪರ್ಕದಲ್ಲಿದ್ದ ಅನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಮೊಹಮ್ಮದ್ ನದೀಂ ವಿವಿಧ ಸಾಮಾಜಿಕ ಜಾಲತಾಣಗಳನ್ನು ನಕಲಿ ಐಡಿ ಬಳಸಿ ಕಾರ್ಯಾಚರಿಸುತ್ತಿದ್ದು, ಅದರಲ್ಲಿಯೇ ಪಾಕಿಸ್ಥಾನದ ಉಗ್ರರ ಜೊತೆಗೆ ಸಂಪರ್ಕ ಮಾಡುತ್ತಿದ್ದ. ಪಾಕಿಸ್ಥಾನದ ಕಡೆಯ ಉಗ್ರರು ನೂಪುರ್ ಶರ್ಮಾಳನ್ನು ಕೊಲ್ಲುವ ಟಾರ್ಗೆಟ್ ಕೊಟ್ಟಿದ್ದರು. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ದೇಶಾದ್ಯಂತ ಪೊಲೀಸರು ಅಲರ್ಟ್ ಇರುವಂತೆ ಸೂಚಿಸಲಾಗಿದೆ. ಸ್ವಾತಂತ್ರ್ಯದ ಸಂದರ್ಭದಲ್ಲಿ ಉಗ್ರರು ವಿಧ್ವಂಸಕ ಕೃತ್ಯಕ್ಕೆ ಯೋಜನೆ ಹಾಕುತ್ತಾರೆಂದು ಪೊಲೀಸರು ಸೇರಿದಂತೆ ವಿವಿಧ ಭದ್ರತಾ ಏಜನ್ಸಿಗಳು ಅಲರ್ಟ್ ಆಗಿರುತ್ತವೆ. ಇದೇ ವೇಳೆ, ಉತ್ತರ ಪ್ರದೇಶದಲ್ಲಿ ಉಗ್ರವಾದಿ ಲಿಂಕ್ ಇರುವ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.
Ahead of Independence Day, police claimed to have busted a major terror plot on Friday as it arrested an alleged operative of Jaish-e-Mohammad and Tehreek-e-Taliban from western Uttar Pradesh’s Saharanpur. The accused was tasked with killing former BJP leader Nupur Sharma, police added.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm