ಬ್ರೇಕಿಂಗ್ ನ್ಯೂಸ್
13-08-22 11:29 am HK News Desk ದೇಶ - ವಿದೇಶ
ನ್ಯೂಯಾರ್ಕ್, ಆಗಸ್ಟ್ 13: ಭಾರತೀಯ ಮೂಲದ ಲೇಖಕ, ಕಳೆದ 20 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದ ಸಲ್ಮಾನ್ ರಶ್ದಿ ಅವರ ಮೇಲೆ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದು, ಚೂರಿಯಿಂದ ಇರಿದಿರುವ ಘಟನೆ ನ್ಯೂಯಾರ್ಕಿನಲ್ಲಿ ನಡೆದಿದೆ.
ಸಲ್ಮಾನ್ ರಶ್ದಿ ಉಪನ್ಯಾಸ ನೀಡುವುದಕ್ಕಾಗಿ ಆಗಮಿಸಿದ್ದರು. ವೇದಿಕೆಯಲ್ಲಿದ್ದಾಗಲೇ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದು, ಕುತ್ತಿಗೆಯ ಮೇಲೆ ಇರಿದಿದ್ದಾನೆ. ಕೂಡಲೇ 75 ವರ್ಷದ ಸಲ್ಮಾನ್ ರಶ್ದಿ ನೆಲಕ್ಕೆ ಬಿದ್ದಿದ್ದಾರೆ. ನ್ಯೂಯಾರ್ಕ್ ನಗರದಿಂದ ನೂರು ಕಿಮೀ ದೂರದ ಗ್ರಾಮಾಂತರ ಪ್ರದೇಶದಲ್ಲಿ ಘಟನೆ ನಡೆದಿದೆ. ಚೌಟಾಕಾ ಇನ್ಸ್ ಟ್ಯೂಶನ್ನಲ್ಲಿ ಸರಣಿ ಉಪನ್ಯಾಸ ಪ್ರಯುಕ್ತ ರಶ್ದೀ ಅವರನ್ನು ಆಹ್ವಾನಿಸಲಾಗಿತ್ತು. ದಾಳಿ ಎಸಗಿದ ವ್ಯಕ್ತಿಯನ್ನು ನ್ಯೂಯಾರ್ಕ್ ಪೊಲೀಸರು ಬಂಧಿಸಿದ್ದಾರೆ.
![]()
1980ರ ದಶಕದಲ್ಲಿ ಇಸ್ಲಾಮ್ ಬಗ್ಗೆ ಬರೆದಿದ್ದ ಪುಸ್ತಕ ವ್ಯಾಪಕ ವಿರೋಧಕ್ಕೆ ಕಾರಣವಾಗಿತ್ತು. ಇರಾನ್ ದೇಶದ ಕೆಲವು ನಾಯಕರು ಸಲ್ಮಾನ್ ರಶ್ದಿ ಬಗ್ಗೆ ಫತ್ವಾ ಹೊರಡಿಸಿದ್ದರು. ರಶ್ದೀ ತಲೆ ತೆಗೆದವರಿಗೆ ಬಹುಮಾನವನ್ನೂ ಘೋಷಿಸಲಾಗಿತ್ತು. ಆಬಳಿಕ ಬ್ರಿಟನ್ ತೆರಳಿ ಅಲ್ಲಿಯೇ ಉಳಿದುಕೊಂಡಿದ್ದ ಸಲ್ಮಾನ್ ರಶ್ದೀ ಅವರು ಅಲ್ಲಿಂದಲೇ ಹಲವು ಪುಸ್ತಕಗಳನ್ನು ಬರೆದು ಪ್ರಕಟಿಸಿದ್ದಾರೆ. 1981ರಲ್ಲಿ ಪ್ರಕಟವಾದ ಮಿಡ್ ನೈಟ್ ಚಿಲ್ಡ್ರನ್ ಎನ್ನುವ ಪುಸ್ತಕಕ್ಕೆ ಬೂಕರ್ ಪ್ರಶಸ್ತಿ ಲಭಿಸಿತ್ತು. ವಿವಾದ ಕೇಳಿಬಂದ ಬಳಿಕ ಸಲ್ಮಾನ್ ರಶ್ದಿ ಹೊರಗೆ ಕಾಣಿಸಿಕೊಳ್ಳುವುದನ್ನು ಕಡಿಮೆ ಮಾಡಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಾಂಗ್ಲಾ ದೇಶ ಮೂಲದ ಲೇಖಕಿ ತಸ್ಲೀಮಾ ನಸ್ರೀನ್, ಇಸ್ಲಾಂ ಬಗ್ಗೆ ಟೀಕಿಸುವ ಯಾವುದೇ ವ್ಯಕ್ತಿ ದಾಳಿಗೆ ಒಳಗಾಗುತ್ತಾನೆ. ಇದನ್ನು ಕೇಳಿ ಶಾಕ್ ಆಗಿದ್ದೇನೆ. ಇಸ್ಲಾಂ ಬಗ್ಗೆ ಟೀಕಿಸುವ ಯಾರು ಕೂಡ ದಾಳಿಗೆ ಒಳಗಾಗಬಹುದು ಎಂದು ಹೇಳಿದ್ದಾರೆ.
Author Salman Rushdie was stabbed in the neck at an event in New York, US, on Friday. Details were scarce about his condition and the attacker, who has been detained. The 75-year-old author's writings have in the past led to threats.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm