ಬ್ರೇಕಿಂಗ್ ನ್ಯೂಸ್
15-08-22 09:43 pm HK News Desk ದೇಶ - ವಿದೇಶ
ರಾಯಪುರ್, ಆ 15: ಛತ್ತೀಸ್ಗಢದಲ್ಲಿ ಭಾರಿ ಮಳೆ ಅವಾಂತರ ಸೃಷ್ಟಿಸಿದೆ. ಇದರಿಂದಾಗಿ ಮುಂಗೇಲಿ, ಧಮ್ತಾರಿ, ಬಲಾದ್ ಬಜಾರ್, ಸುರ್ಗುಜಾ ಮತ್ತು ಕೊರ್ಬಾ ಸೇರಿದಂತೆ ಬಿಲಾಸ್ಪುರದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಸಾವು ನೋವುಗಳು ದಾಖಲಾಗಿವೆ.
ಕಂಕೇರ್ನಲ್ಲಿ ಭಾರಿ ಮಳೆಗೆ ನಿನ್ನೆ ರಾತ್ರಿ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಬಿಲಾಸಪುರದಲ್ಲಿ 4 ದಿನಗಳಿಂದ ನಿರಂತರವಾಗಿ ಮಳೆ ಬೀಳುತ್ತಿದೆ. ಇದರಿಂದಾಗಿ ತಗ್ಗು ಪ್ರದೇಶದ ಬಡಾವಣೆಗಳು ಜಲಾವೃತಗೊಂಡಿವೆ. ಮುಂಗೇಲಿಯಲ್ಲಿ ನೂರಾರು ಜನರು ನೀರಿನ ಮಧ್ಯೆ ಸಿಲುಕಿಕೊಂಡಿದ್ದಾರೆ.

ಭಾನುವಾರ ಧಮ್ತಾರಿಯಲ್ಲಿ ಸೊಂಧೂರು ಅಣೆಕಟ್ಟಿನ ಎಲ್ಲಾ ಗೇಟ್ಗಳನ್ನು ತೆರೆಯಲಾಗಿದೆ. ಸೊಂಡೂರು ನದಿಯಿಂದ 2,400 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಈ ಹಿನ್ನೆಲೆ ಇಲ್ಲಿನ ಗ್ರಾಮಗಳಿಗೆ ಎಚ್ಚರಿಕೆ ನೀಡಲಾಗಿದೆ. ಬಲಾದ್ ಬಜಾರ್, ಸುರ್ಗುಜಾ ಸೇರಿದಂತೆ ಇತರೆ ಜಿಲ್ಲೆಗಳಲ್ಲೂ ಇದೇ ಪರಿಸ್ಥಿತಿ ಇದೆ.
ನದಿ, ಹಳ್ಳಗಳ ನೀರು ಈಗ ತಗ್ಗು ಪ್ರದೇದೇಶಗಳಲ್ಲಿರುವ ಬಡಾವಣೆ, ವಾರ್ಡ್ಗಳಿಗೆ ನುಗ್ಗುತ್ತಿದೆ. ಮನೆಗಳು, ಶಾಲೆಗಳು ಮತ್ತು ಅಂಗಡಿಗಳು ನೀರಿನಲ್ಲಿ ಮುಳುಗಿವೆ. ನಗರ ಪ್ರದೇಶಗಳಲ್ಲಿ ಸಿರಗಿತ್ತಿ, ತಿಫ್ರಾ, ಸಕ್ರಿ, ಘೂರು, ಅಮೇರಿ, ಮನ್ನದೋಳ್, ದೀಪಾರಪರ, ಕುಂದರಪರ, ದೇವರಪಾರ, ಯದುನಂದನನಗರ, ಉಸಲಾಪುರ ಮತ್ತು ಸರ್ಕಂದ ಹೆಚ್ಚು ಹಾನಿಗೊಳಗಾಗಿವೆ.

ಗ್ರಾಮೀಣ ಭಾಗಗಳಾದ ಪಚಪೇಡಿ, ಜೊಂಧಾರ, ಮಸ್ತೂರಿ ಭಾಗದಲ್ಲೂ ಪರಿಸ್ಥಿತಿ ಬಿಗಡಾಯಿಸಿದೆ. ಮಳೆ ನೀರು ಜನರ ಮನೆಗಳಿಗೆ ನುಗ್ಗಿದೆ. SDRF ತಂಡವು ಎಲ್ಲಾ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ನಡೆಸುತ್ತಿದೆ.
ಮುಂಗೇಲಿ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದ್ದು, ಸರಗಾಂವ ನಗರ ಪಂಚಾಯಿತಿಯಲ್ಲಿ 500ಕ್ಕೂ ಹೆಚ್ಚು ಮಂದಿ ನೀರಿನಲ್ಲಿ ಸಿಲುಕಿಕೊಂಡಿದ್ದಾರೆ. ಭಾರೀ ಮಳೆಯ ನಡುವೆಯೂ ಮುಂಗೇಲಿ ಜಿಲ್ಲಾಧಿಕಾರಿ ರಾಹುಲ್ ದೇವ್ ಮತ್ತು ಎಸ್ಪಿ ಚಂದ್ರಮೋಹನ್ ಸಿಂಗ್ SDRF ತಂಡದೊಂದಿಗೆ ಮೋಟರ್ ಬೋಟ್ ಮೂಲಕ ಜನರಿಗೆ ಸಹಾಯ ಮಾಡುತ್ತಿದ್ದಾರೆ.
Five members of a family on Monday died after a wall of their house collapsed last night in Pakhanjore area of Kanker due to heavy rainfall.Parimal Malik, his wife and their three children died in the incident.The incident took place in the morning in Irpanar village in Pakhanjore area when the victims were sleeping in their mud house, the officials said.The area has been cut off from the main road due to an overflowing drain.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm