ಬ್ರೇಕಿಂಗ್ ನ್ಯೂಸ್
19-08-22 09:41 pm HK News Desk ದೇಶ - ವಿದೇಶ
ಶ್ರೀನಗರ, ಆಗಸ್ಟ್ 19: ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ತಯಾರಿ ನಡೆಯುತ್ತಿದ್ದು, ಮತದಾರ ಪಟ್ಟಿಗೆ ನೋಂದಣಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಇದೇ ವೇಳೆ, ಚುನಾವಣಾ ಆಯೋಗದ ಅಧಿಕಾರಿಗಳು ಹೊಸ ಘೋಷಣೆ ಹೊರಡಿಸಿದ್ದು, ಸ್ಥಳೀಯರಲ್ಲದವರಿಗೂ ಮತದಾನದ ಹಕ್ಕನ್ನು ನೀಡುವುದಾಗಿ ತಿಳಿಸಿದ್ದಾರೆ. ವಲಸಿಗ ಕಾರ್ಮಿಕರು, ಬೇರೆ ಬೇರೆ ಕರ್ತವ್ಯಕ್ಕಾಗಿ ಬಂದು ಉಳಿದುಕೊಂಡವರು, ಸೇನಾ ಪಡೆಯ ಯೋಧರು, ಇತರೇ ಉದ್ಯೋಗಸ್ಥರು ಸೇರಿದಂತೆ ಸ್ಥಳೀಯ ನಿವಾಸಿಗಳಲ್ಲದವರಿಗೂ ಮತದಾನದ ಹಕ್ಕನ್ನು ನೀಡಲಾಗಿದೆ.
ಆದರೆ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಹರ್ದೇಶ್ ಕುಮಾರ್ ಮಾಡಿರುವ ಈ ಘೋಷಣೆಗೆ ಜಮ್ಮು ಕಾಶ್ಮೀರದ ರಾಜಕೀಯ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಅವರ ಪ್ರಕಾರ, ಯಾವುದೇ ಭಾರತದ ನಾಗರಿಕನಿಗೆ ಜಮ್ಮು ಕಾಶ್ಮೀರದಲ್ಲಿ ಮತದ ಹಕ್ಕು ನೀಡಲಾಗುವುದು. ಯಾವುದೇ ಕಡೆಯ ನಿವಾಸಿಯಾದ್ರೂ ಆತ ಉದ್ಯೋಗದ ನಿಮಿತ್ತ ಜಮ್ಮು ಕಾಶ್ಮೀರದಲ್ಲಿ ಉಳಿದುಕೊಂಡಿದ್ದರೆ, ಆತ ಮತ್ತು ಆತನ ಕುಟುಂಬಕ್ಕೆ ಮತದ ಹಕ್ಕನ್ನು ಚಲಾಯಿಸಬಹುದು. ಮತದಾರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಸ್ಥಳೀಯಾಡಳಿತ ಚುನಾವಣೆಯಲ್ಲಿ ಮತ ಚಲಾವಣೆ ಮಾಡಬಹುದು ಎಂದು ಹೇಳಿದ್ದಾರೆ.
ಆದರೆ ಸ್ಥಳೀಯ ನಿವಾಸಿಗಳಲ್ಲದವರಿಗೂ ಮತದ ಹಕ್ಕು ನೀಡುವುದಕ್ಕೆ ಕೆಲವು ರಾಷ್ಟ್ರೀಯ ಪಕ್ಷಗಳು ಸೇರಿದಂತೆ ರಾಜಕೀಯ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಚುನಾವಣಾ ಫಲಿತಾಂಶ ಏರುಪೇರಾಗಲು ಕಾರಣವಾಗುತ್ತದೆ ಎಂದು ಹೇಳಿದ್ದಾರೆ. ಆದರೆ, ಮತದ ಹಕ್ಕು ಅನ್ನುವುದು ಎಲ್ಲಿಗೂ ಸೀಮಿತವಾಗಿಲ್ಲ. ಭಾರತದ ನಾಗರಿಕನಿಗೆ ಎಲ್ಲಿಯೂ ಮತ ಚಲಾಯಿಸಲು ಹಕ್ಕು ಇದೆ. ಮತದಾರ ಪಟ್ಟಿಗೆ ಸೇರ್ಪಡೆ ಆಗಬೇಕಾಗಿದ್ದಲ್ಲಿ ತನ್ನ ಮೂಲ ಮತದಾನ ಪಟ್ಟಿಯಿಂದ ತೆಗೆದು ಹಾಕಿರುವುದನ್ನು ತೋರಿಸಬೇಕಾಗುತ್ತದೆ. ಅದನ್ನು ಪರಿಶೀಲನೆ ಮಾಡಿಕೊಂಡೇ ಮತದಾರ ಪಟ್ಟಿಗೆ ಸೇರಿಸಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
Jammu and Kashmir's Chief Electoral Officer (CEO) Hirdesh Kumar’s announcement about non-locals, including employees, students, labourers, or anyone from outside who is living ordinarily in Jammu and Kashmir, being able to register their names in the voting list and vote in the J&K elections has created a buzz across states.CEO Hirdesh Kumar had said any Indian citizen, including non-locals living or working in Jammu and Kashmir, can enlist their names on the voting list and cast a vote in the assembly and local body elections in the union territory.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm