ಬ್ರೇಕಿಂಗ್ ನ್ಯೂಸ್
21-08-22 10:36 pm HK News Desk ದೇಶ - ವಿದೇಶ
ಭೋಪಾಲ್,ಆಗಸ್ಟ್ 21: ತಲೆಗೆ ಗಾಯಗೊಂಡು ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗೆ ಮೊರೆನಾ ಜಿಲ್ಲಾಸ್ಪತ್ರೆಗೆ ಬಂದಿದ್ದ ಮಹಿಳೆಯ ಬ್ಯಾಂಡೇಜ್ ತೆರೆದಾಗ ಅಲ್ಲಿದ್ದ ಕಾಂಡೋಮ್ ರ್ಯಾಪರ್ ನೋಡಿದ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರು ಆಶ್ಚರ್ಯಗೊಂಡಿದ್ದಾರೆ.
ಆಸ್ಪತ್ರೆಗಳಲ್ಲಿ ಅವ್ಯವಸ್ಥೆ:
ಮೊರೆನಾ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಪ್ರಾಥಮಿಕ, ಉಪ ಆರೋಗ್ಯ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳನ್ನು ಹೊಂದಿರುವ ಸಿವಿಲ್ ಆಸ್ಪತ್ರೆ ಇದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೇವೆಗಳ ಸ್ಥಿತಿ ಹದಗೆಟ್ಟಿದ್ದು, ಸಾಮಾನ್ಯ ಪ್ರಕರಣಗಳಲ್ಲಿಯೂ ಚಿಕಿತ್ಸೆ ನೀಡದೆ ನೇರವಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗುತ್ತದೆ. ಈ ಮಹಿಳೆಗೂ ಅದೇ ರೀತಿ ಆಗಿದೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಿಳೆಯ ತಲೆಗೆ ಹೊಲಿಗೆಗಳನ್ನು ಹಾಕದೆ ಬ್ಯಾಂಡೇಜ್ ಅಷ್ಟೇ ಹಾಕಿ ಜಿಲ್ಲಾಸ್ಪತ್ರೆಗೆ ಹೋಗುವಂತೆ ಹೇಳಿದ್ದಾರೆ.

ಕಾಂಡೋಮ್ ರ್ಯಾಪರ್ ಇಟ್ಟು ಗಾಯಕ್ಕೆ ಬ್ಯಾಂಡೇಜ್
ಮಹಿಳೆ ಆಸ್ಪತ್ರೆಗೆ ಬಂದಾಗ ಬ್ಯಾಂಡೇಜ್ ಸರಿಯಾಗದೆ ರಕ್ತ ಸೋರಿಕೆಯಾಗುತ್ತಿತ್ತು. ಗಾಯ ಸ್ವಚ್ಛಗೊಳಿಸಿ ಹೊಲಿಗೆ ಹಾಕಲು ಜಿಲ್ಲಾಸ್ಪತ್ರೆಯ ವೈದ್ಯರು ಬ್ಯಾಂಡೇಜ್ ತೆಗೆದು ನೋಡಿದಾಗ ಹತ್ತಿ ಇಡಬೇಕಾದಲ್ಲಿ ಕಾಂಡೋಮ್ ರ್ಯಾಪರ್ ಇಟ್ಟು ಬ್ಯಾಂಡೇಜ್ ಮಾಡಿರುವುದು ಬೆಳಕಿಗೆ ಬಂದಿದೆ. ಆದರೆ ಶುಕ್ರವಾರ ರಾತ್ರಿ ನಡೆದ ಈ ಘಟನೆಯನ್ನು ಲಘುವಾಗಿ ಪರಿಗಣಿಸಲಾಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ ಈ ಕುರಿತು ತನಿಖೆ ನಡೆಸುವಂತೆ ಆದೇಶಿಸಿದೆ.
ಕ್ರಮಕ್ಕೆ ಸೂಚನೆ ನೀಡಿದ ಸಿಎಂಎಚ್ಒ:
ಮುಖ್ಯ ವೈದ್ಯಕೀಯ ಮತ್ತು ಆರೋಗ್ಯಾಧಿಕಾರಿ ಡಾ ರಾಕೇಶ್ ಶರ್ಮಾ ಅವರು ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವಂತೆ ಬ್ಲಾಕ್ ವೈದ್ಯಾಧಿಕಾರಿ ಪೊರ್ಸಾ, ಡಾ.ಪುಷ್ಪೇಂದ್ರ ದಂಡೋತಿಯಾ ಅವರಿಗೆ ಸೂಚಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಿಎಂಎಚ್ಒ ಡಾ.ರಾಕೇಶ್ ಶರ್ಮಾ, ಮಹಿಳೆಯ ತಲೆಗೆ ಹತ್ತಿಯ ಬದಲು ಕಾಂಡೋಮ್ ರ್ಯಾಪರ್ ಕಟ್ಟಿರುವುದು ಗಂಭೀರ ವಿಚಾರವಾಗಿದ್ದು, ಈ ರೀತಿ ಬೇಜವಾಬ್ದಾರಿ ತೋರಿದ ಸಿಬ್ಬಂದಿಯನ್ನು ವಜಾ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Poor quality healthcare system, non-availability of hearse or pregnant women being taken to the hospital on cots are frequently reported from different parts of Madhya Pradesh.Now yet another glaring example of medical negligence has come to light, wherein the head wound of a woman was dressed with a condom wrapper.The shocking incident took place in Morena district, where a condom wrapper was used as a temporary bandage to stop bleeding from a head injury sustained by a woman named Reshma Bai.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 02:18 pm
HK News Desk
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm