ಬ್ರೇಕಿಂಗ್ ನ್ಯೂಸ್
06-10-20 12:26 pm Headline Karnataka News Network ದೇಶ - ವಿದೇಶ
ವಿಳ್ಳುಪುರಂ, ಅಕ್ಟೋಬರ್ 06: ಕಲ್ಲಕುರಿಚಿ ಶಾಸಕ ತಮ್ಮ ಮನೆಯಲ್ಲಿ ಪ್ರೇಯಸಿಯನ್ನು ವಿವಾಹವಾಗುವ ಮೂಲಕ ಸೋಮವಾರ ವಿವಾದಕ್ಕೀಡಾಗಿದ್ದಾರೆ.
ಪುತ್ರಿಯನ್ನು ಅಪಹರಿಸಲಾಗಿದೆ ಎಂದು ಆಪಾದಿಸಿ ಯುವತಿಯ ತಂದೆ ಶಾಸಕನ ಮನೆ ಮುಂದೆಯೇ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಘಟನೆಯೂ ನಡೆದಿದೆ. ಆ ಬಳಿಕ ನೂತನ ದಂಪತಿ ಮನೆಯಿಂದ ಹೊರಬಂದು "ನಾವು ಪರಸ್ಪರ ಪ್ರೇಮಿಸುತ್ತಿದ್ದೆವು, ಇದೀಗ ಸ್ವ ಇಚ್ಛೆಯಿಂದ ವಿವಾಹ ಬಂಧನಕ್ಕೊಳಗಾಗಿದ್ದೇವೆ" ಎಂದು ತಿಳಿಸಿದರು.

ತಿಯಾಗದುರುಗಂ ನಿವಾಸಿ, ಕಲ್ಲಕುರಿಚಿ ಕ್ಷೇತ್ರವನ್ನು ಪ್ರತಿನಿಧಿಸುವ ಎಐಎಡಿಎಂ ಶಾಸಕ ಎ. ಪ್ರಭು (35), ಅದೇ ಪಟ್ಟಣದ ಸೌಂದರ್ಯ (19) ಎಂಬಾಕೆಯನ್ನು ಸೋಮವಾರ ಮುಂಜಾನೆ ಮನೆಯಲ್ಲೇ ವಿವಾಹವಾದರು. ಈ ವಿಚಾರ ತಿಳಿದ ಯುವತಿಯ ತಂದೆ ಸಾಮಿನಾಥನ್ (48) ಶಾಸಕರ ಮನೆಗೆ ಧಾವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅವರನ್ನು ತಡೆದಿದ್ದರು. ಬಳಿಕ ಸಾಮಿನಾಥನ್ ಅವರನ್ನು ಬಂಧಿಸಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 309ರ ಅನ್ವಯ ಆತ್ಮಹತ್ಯೆಗೆ ಪ್ರಯತ್ನಿಸಿದ ಪ್ರಕರಣ ದಾಖಲಿಸಲಾಗಿದೆ.
ಇದಕ್ಕೂ ಮುನ್ನ ರವಿವಾರ ಸಂಜೆ ಸಾಮಿನಾಥನ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ, ತಿರುಚಂಗೋಡಿನ ಖಾಸಗಿ ಕಲಾ ಕಾಲೇಜಿನಲ್ಲಿ ಎರಡನೇ ವರ್ಷದ ಪದವಿ ವಿದ್ಯಾರ್ಥಿನಿಯಾಗಿರುವ ತಮ್ಮ ಹಿರಿಯ ಮಗಳನ್ನು ಶಾಸಕ ಪ್ರಭು ಅಪಹರಿಸಿದ್ದಾರೆ ಎಂದು ಆಪಾದಿಸಿದ್ದರು. ಈ ವಿಚಾರವನ್ನು ಪೊಲೀಸರ ಗಮನಕ್ಕೆ ತಾರದಂತೆ ಪ್ರಭು ಬೆಂಬಗಲಿಗರು ದೂರವಾಣಿ ಮೂಲಕ ಬೆದರಿಕೆ ಒಡ್ಡಿದ್ದಾರೆ ಎಂದು ಅವರು ದೂರಿದ್ದರು.
ಕಳೆದ ನಾಲ್ಕು ವರ್ಷಗಳಿಂದ ತಮ್ಮ ನಡುವೆ ಪ್ರೇಮಸಂಬಂಧ ಇತ್ತು ಎಂದು ನೂತನ ದಂಪತಿ ಬಿಡುಗಡೆ ಮಾಡಿರುವ ವೀಡಿಯೊದಲ್ಲಿ ದೃಢಪಡಿಸಿದ್ದಾರೆ. ಸೌಂದರ್ಯ ವಿವಾಹದ ಬಗ್ಗೆ ಪೋಷಕರ ಜತೆ ಮಾತುಕತೆ ನಡೆಸಿದ್ದಾಗಿ ಪ್ರಭು ಹೇಳಿಕೊಂಡಿದ್ದಾರೆ. ಇದಕ್ಕೆ ಅವರು ಒಪ್ಪದಿದ್ದಾಗ ಸೌಂದರ್ಯ ಮನೆ ಬಿಟ್ಟು ಬಂದಿದ್ದಾಗಿ ಅವರು ಹೇಳಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am