ಬ್ರೇಕಿಂಗ್ ನ್ಯೂಸ್
29-08-22 12:28 pm HK News Desk ದೇಶ - ವಿದೇಶ
ಮುಂಬೈ, ಆಗಸ್ಟ್ 29 : ಮಂಗಳೂರು ಮೂಲದ ಯುವತಿ ದಿವಿತಾ ರೈ ಪ್ರತಿಷ್ಠಿತ ಲಿವಾ ಮಿಸ್ ದಿವಾ ಯುನಿವರ್ಸ್-2022 (LIVA Miss Diva Universe 2022) ಸೌಂದರ್ಯ ಸ್ಪರ್ಧೆಯಲ್ಲಿ ಕಿರೀಟ ತನ್ನದಾಗಿಸಿಕೊಂಡಿದ್ದಾರೆ. 23 ವರ್ಷ ವಯಸ್ಸಿನ ಇವರು ಮಿಸ್ ಯುನಿವರ್ಸ್ 2022 ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಮುಂಬೈನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ 2021ರ ಮಿಸ್ ಯುನಿವರ್ಸ್ ಹರ್ನಾಝ್ ಸಂಧು ಅವರು, ದಿವಿತಾ ರೈ ಅವರಿಗೆ ಲಿವಾ ಮಿಸ್ ದಿವಾ 2022 ಪ್ರಶಸ್ತಿ ಕಿರೀಟ ತೊಡಿಸಿದರು. ತೆಲಂಗಾಣ ಮೂಲದ ಪ್ರಜ್ಞಾ ಅಯ್ಯಂಗಾರಿಯವರು ಲಿವಾ ಮಿಸ್ ದಿವಾ ಸುಪ್ರ ನ್ಯಾಷನಲ್-2022 ಗೌರವಕ್ಕೆ ಪಾತ್ರರಾದರು.



ಅಪಾರ ಅಭಿಮಾನಿಗಳು ಮತ್ತು ತಾರಾಬಳಗ ಪಾಲ್ಗೊಂಡಿದ್ದ ಈ ಕಾರ್ಯಕ್ರಮ ಮುಂಬೈನ ಮಹಾಲಕ್ಷ್ಮಿಯಲ್ಲಿರುವ ಫೇಮಸ್ ಸ್ಟುಡಿಯೋದಲ್ಲಿ ನಡೆಯಿತು. ಮಿಸ್ ಯುನಿವರ್ಸ್ 2022 ಹರ್ನಾಝ್ ಕೌರ್ ಸಂಧು ಮತ್ತು ಮಾಜಿ ಮಿಸ್ ಯುನಿವರ್ಸ್ ಲಾರಾದತ್ತಾ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದರು. ಹರ್ನಾಝ್ ಅವರಿಗೆ ಪ್ರೈಡ್ ಆಫ್ ಇಂಡಿಯಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಮಂಗಳೂರಿನಲ್ಲಿ ಜನಿಸಿದ ದಿವಿತಾ ರೈ ಅವರ ತಂದೆ ದಿಲೀಪ್ ರೈ ಹಾಗೂ ತಾಯಿ ಪವಿತ್ರಾ ರೈ. ತಂದೆಯ ಉದ್ಯೋಗದ ಕಾರಣದಿಂದಾಗಿ ದಿವಿತಾ ಬೇರೆ ಬೇರೆ ಸ್ಥಳಗಳಲ್ಲಿ ಬೆಳೆದಿದ್ದರು. ಮುಂಬೈನಲ್ಲಿ ನೆಲೆಸಿರುವ ಅವರು ಜೆ.ಜೆ.ಕಾಲೇಜ್ ಆಫ್ ಆರ್ಕಿಟೆಕ್ಚರ್ ನಲ್ಲಿ ಪದವಿ ಪಡೆದಿದ್ದಾರೆ. ಇವರ ಅಣ್ಣ ದೈವಿಕ್ ರೈ ಕ್ರಿಕೆಟಿಗ. ಭಾರತದ ಒಳಾಂಗಣ ಕ್ರಿಕೆಟ್ ತಂಡದ ಸದಸ್ಯರಾಗಿರುವ ಇವರು 2017ರ ಒಳಾಂಗಣ ಕ್ರಿಕೆಟ್ ವಿಶ್ವಕಪ್ ಜಯಿಸಿದ ಭಾರತ ತಂಡದಲ್ಲಿದ್ದರು.
It’s that time of the year again when we’re going to celebrate beauty, fashion and lifestyle in full swing! Yes, you read it right! Miss Diva 2022 is back to choose the best person among the participants who could represent India with pride on the global stage as Miss Diva Universe 2022 and Miss Diva Supranational 2022.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm