ಬ್ರೇಕಿಂಗ್ ನ್ಯೂಸ್
29-08-22 06:33 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 29 : ತಾವು ವಿದ್ಯಾರ್ಥಿ ನಾಯಕರಾಗಿದ್ದಾಗ ಕಾಂಗ್ರೆಸ್ ಮುಖಂಡ ಶ್ರೀಕಾಂತ್ ಜಿಚ್ಕರ್ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್ ಸೇರುವಂತೆ ಕೇಳಿಕೊಂಡಿದ್ದರು. ಅದಕ್ಕೆ ನಾನು ಬಾವಿಗೆ ಹಾರಿ ಸಾಯುತ್ತೇನೆಯೇ ಹೊರತು ಕಾಂಗ್ರೆಸ್ಗೆ ಸೇರುವುದಿಲ್ಲ. ಏಕೆಂದರೆ ನನಗೆ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಇಷ್ಟವಿಲ್ಲ ಎಂದಿದ್ದೆ ಎಂಬುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಳೆಯ ಪ್ರಸಂಗವನ್ನು ನೆನಪಿಸಿಕೊಂಡಿದ್ದಾರೆ.
ಇತ್ತೀಚೆಗೆ ಬಿಜೆಪಿ ಸಂಸದೀಯ ಕಮಿಟಿಯಿಂದ ಹೊರಬಿದ್ದ ಬಳಿಕ ಗಡ್ಕರಿಯವರು ಮೋದಿ ಸರಕಾರ ಮತ್ತು ಬಿಜೆಪಿ ಬಗ್ಗೆ ಅಸಮಾಧಾನ ಇರುವಂತೆ ಹೇಳಿಕೆ ನೀಡುತ್ತಿದ್ದಾರೆ. ಇದೀಗ ಉದ್ಯಮಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ನಿತಿನ್ ಗಡ್ಕರಿ, ವ್ಯಾಪಾರ, ಸಾಮಾಜಿಕ ಕೆಲಸ ಅಥವಾ ರಾಜಕೀಯದಲ್ಲಿರುವ ಯಾರಿಗಾದರೂ ಮಾನವನ ಸಂಬಂಧವೇ ದೊಡ್ಡ ಶಕ್ತಿಯಾಗಿದೆ. ಆದ್ದರಿಂದ, ಒಳ್ಳೆಯ ದಿನಗಳು ಅಥವಾ ಕೆಟ್ಟ ದಿನಗಳಲ್ಲಿ ಒಮ್ಮೆ ನೀವು ಯಾರದ್ದಾದರೂ ಕೈಯನ್ನು ಹಿಡಿದರೆ ಆ ಕೈಯನ್ನು ಯಾವಾಗಲೂ ಹಿಡಿದುಕೊಳ್ಳಿ ಎಂದು ಹೇಳಿದ್ದಾರೆ.

ಅಮೆರಿಕದ ಮಾಜಿ ಅಧ್ಯಕ್ಷ ರಿಚರ್ಡ್ ನಿಕ್ಸನ್ ಅವರನ್ನೂ ಉಲ್ಲೇಖಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಒಬ್ಬ ವ್ಯಕ್ತಿಯು ಸೋತಾಗ ಅವನ ಕತೆ ಅಲ್ಲಿಗೇ ಮುಗಿಯುವುದಿಲ್ಲ. ಆದರೆ, ಆತ ಸೋತ ಮೇಲೆ ಇನ್ನಾಗದು ಎಂದು ಕೈಚೆಲ್ಲಿದಾಗ ಆತನ ಕತೆ ಅಂತ್ಯ ಕಾಣುತ್ತದೆ ಎಂಬ ಅಮೆರಿಕಾದ ಮಾಜಿ ಅಧ್ಯಕ್ಷ ರಿಚರ್ಡ್ ನಿಕ್ಸನ್ ಅವರ ಆತ್ಮಚರಿತ್ರೆಯ ವಾಕ್ಯವನ್ನು ಯುವ ಉದ್ಯಮಿಗಳು ನೆನಪಿಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.
ಇತ್ತೀಚೆಗೆ ಗಡ್ಕರಿಯವರು ಬಿಜೆಪಿ ಅಧಿಕಾರಕ್ಕೆ ಬರಲು ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ ಅಡ್ವಾಣಿ ಮತ್ತು ದೀನದಯಾಳ್ ಉಪಾಧ್ಯಾಯ ಮಾಡಿದ ಕೆಲಸಗಳು ಕಾರಣ ಎಂದು ಹೇಳಿ ಚರ್ಚೆಗೆ ಗ್ರಾಸವಾಗಿದ್ದರು. ಮುಂಬೈನಲ್ಲಿ 1980ರ ಬಿಜೆಪಿ ಸಮಾವೇಶದಲ್ಲಿ ವಾಜಪೇಯಿ ಭಾಷಣವನ್ನು ನಾನು ಕೇಳಿದ್ದೆ. ಅಟಲ್ ಜಿ ಅವರು ‘ಅಂಧೇರಾ ಛಟೇಗಾ, ಸೂರಜ್ ನಿಕ್ಲೇಗಾ, ಕಮಲ ಖಿಲೇಗಾ’ (ಕತ್ತಲು ಮಾಯವಾಗುತ್ತದೆ, ಸೂರ್ಯ ಹೊರಬರುತ್ತಾನೆ ಮತ್ತು ಕಮಲ ಅರಳುತ್ತದೆ) ಎಂದು ಹೇಳಿದ್ದರು. ಆ ದಿನ ಅಟಲ್ ಭಾಷಣ ಕೇಳಿದವರೆಲ್ಲರೂ ಇಂತಹ ದಿನ ಬರುತ್ತದೆ ಎಂದು ಆಗಲೇ ನಂಬಿದ್ದರು. ಅಟಲ್ ಜಿ, ಅಡ್ವಾಣಿ ಜಿ, ದೀನದಯಾಳ್ ಉಪಾಧ್ಯಾಯ ಮತ್ತು ಅನೇಕ ಕಾರ್ಯಕರ್ತರು ಬಿಜೆಪಿ ಅಧಿಕಾರಕ್ಕೆ ಬರಲು ಅಗತ್ಯವಿರುವ ಕೆಲಸವನ್ನು ಮಾಡಿದ್ದಾರೆ ಎಂದು ನಿತಿನ್ ಗಡ್ಕರಿ ಹೇಳಿದ್ದರು.
Days after being dropped from the BJP Parliamentary Board, Union Minister Nitin Gadkari on Sunday said that he would rather jump into a well than join the Congress.Addressing a corporate event in Nagpur, Gadkari said, “I had an offer to join the Congress party from my friend and late Congress leader Shrikant Jichkar. I told him I will jump into a well but not join the Congress because I do not like the ideology of the Congress.”
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm