ಬ್ರೇಕಿಂಗ್ ನ್ಯೂಸ್
31-08-22 08:06 pm HK News Desk ದೇಶ - ವಿದೇಶ
ನವದೆಹಲಿ, ಆ 31: ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ವಿಧಿವಶರಾದರು. ಇಟಲಿಯಲ್ಲಿನ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಸೋನಿಯಾ ಗಾಂಧಿ ತಾಯಿ, ಸಂಸದ ರಾಹುಲ್ ಗಾಂಧಿ ಅಜ್ಜಿ ಪಾವೊಲಾ ಮೈನೋ ಆಗಸ್ಟ್ 27ರಂದು ನಿಧನರಾಗಿದ್ದಾರೆ. ಮಂಗಳವಾರ ಅಂತ್ಯಕ್ರಿಯೆ ನಡೆದಿದೆ.ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ವೈದ್ಯಕೀಯ ಪರೀಕ್ಷೆಗಾಗಿ ಸೋನಿಯಾ ಗಾಂಧಿ ವಿದೇಶಕ್ಕೆ ತೆರಳಿದ್ದು, ರಾಹುಲ್ ಗಾಂಧಿ ಸಹ ಅವರ ಜೊತೆ ಇದ್ದಾರೆ.

ತಮ್ಮ ಟ್ವೀಟ್ನಲ್ಲಿ ಜೈರಾಮ್ ರಮೇಶ್, 'ಶ್ರೀಮತಿ ಸೋನಿಯಾ ಗಾಂಧಿಯವರ ತಾಯಿ, ಶ್ರೀಮತಿ ಪಾವೊಲಾ ಮೈನೋ ಅವರು 27 ಆಗಸ್ಟ್ 2022 ರಂದು ಶನಿವಾರ ಇಟಲಿಯಲ್ಲಿ ತಮ್ಮ ಮನೆಯಲ್ಲಿ ನಿಧನರಾದರು. ಅಂತ್ಯಕ್ರಿಯೆ ನಿನ್ನೆ ನಡೆಯಿತು' ಎಂದು ಮಾಹಿತಿ ನೀಡಿದ್ದಾರೆ.

ವಿದೇಶದಲ್ಲಿರುವ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಎಂದು ನವದೆಹಲಿಗೆ ವಾಪಸ್ ಆಗಲಿದ್ದಾರೆ? ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ದೆಹಲಿಯಲ್ಲಿ ಸೆಪ್ಟೆಂಬರ್ 4ರಂದು ನಡೆಯಲಿರುವ 'ಮೆಹೆಂಗೈ ಪರ್ ಹಲ್ಲಾ ಬೋಲ್' ಜಾಥಾ ಉದ್ದೇಶಿಸಿ ಅವರು ಮಾತನಾಡಲಿದ್ದಾರೆ ಎಂಬ ಮಾಹಿತಿ ಇದೆ.
ಭಾನುವಾರ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಬಗ್ಗೆ ಚರ್ಚಿಸಲು ಸಭೆ ನಡೆದಿತ್ತು. ಸೋನಿಯಾ ಗಾಂಧಿ ವಿದೇಶದಿಂದಲೇ ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು. ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅಗತ್ಯವಿದ್ದರೆ ಅಕ್ಟೋಬರ್ 19ರಂದು ಮತ ಎಣಿಕೆ ನಡೆಯಲಿದೆ.
ಕಾಂಗ್ರೆಸ್ ಪಕ್ಷ ಕಾಶ್ಮೀರದಿಂದ ಕನ್ಯಾಕುಮಾರಿ ತನಕ 'ಭಾರತ್ ಜೋಡೋ' ಯಾತ್ರೆಗೆ ತಯಾರಿ ನಡೆಸಿದೆ. ಸೆಪ್ಟೆಂಬರ್ 7ರಂದು ಈ ಯಾತ್ರೆಗೆ ಚಾಲನೆ ಸಿಗಲಿದೆ. 3500 ಕಿ. ಮೀ.ಗಳ ದೊಡ್ಡ ಪಾದಯಾತ್ರೆ ಇದಾಗಿದೆ. ಸುಮಾರು 150 ದಿನಗಳ ಕಾಲ ನಡೆಯುವ ಬೃಹತ್ ಪಾದಯಾತ್ರೆ ನಡೆಯಲಿದೆ.
Congress president Sonia Gandhi’s mother, Paola Maino, died on August 27 and her funeral was held on Tuesday. Sonia Gandhi had left last week to meet her mother. This was part of her trip abroad for medical check-ups, where her son Rahul Gandhi and daughter Priyanka Gandhi Vadra went with her.Jairam Ramesh, Congress general secretary of communications, has tweeted the news of the death of Sonia Gandhi’s mother.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 08:30 pm
HK News Desk
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm