ಬ್ರೇಕಿಂಗ್ ನ್ಯೂಸ್
31-08-22 08:06 pm HK News Desk ದೇಶ - ವಿದೇಶ
ನವದೆಹಲಿ, ಆ 31: ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ವಿಧಿವಶರಾದರು. ಇಟಲಿಯಲ್ಲಿನ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಸೋನಿಯಾ ಗಾಂಧಿ ತಾಯಿ, ಸಂಸದ ರಾಹುಲ್ ಗಾಂಧಿ ಅಜ್ಜಿ ಪಾವೊಲಾ ಮೈನೋ ಆಗಸ್ಟ್ 27ರಂದು ನಿಧನರಾಗಿದ್ದಾರೆ. ಮಂಗಳವಾರ ಅಂತ್ಯಕ್ರಿಯೆ ನಡೆದಿದೆ.ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ವೈದ್ಯಕೀಯ ಪರೀಕ್ಷೆಗಾಗಿ ಸೋನಿಯಾ ಗಾಂಧಿ ವಿದೇಶಕ್ಕೆ ತೆರಳಿದ್ದು, ರಾಹುಲ್ ಗಾಂಧಿ ಸಹ ಅವರ ಜೊತೆ ಇದ್ದಾರೆ.

ತಮ್ಮ ಟ್ವೀಟ್ನಲ್ಲಿ ಜೈರಾಮ್ ರಮೇಶ್, 'ಶ್ರೀಮತಿ ಸೋನಿಯಾ ಗಾಂಧಿಯವರ ತಾಯಿ, ಶ್ರೀಮತಿ ಪಾವೊಲಾ ಮೈನೋ ಅವರು 27 ಆಗಸ್ಟ್ 2022 ರಂದು ಶನಿವಾರ ಇಟಲಿಯಲ್ಲಿ ತಮ್ಮ ಮನೆಯಲ್ಲಿ ನಿಧನರಾದರು. ಅಂತ್ಯಕ್ರಿಯೆ ನಿನ್ನೆ ನಡೆಯಿತು' ಎಂದು ಮಾಹಿತಿ ನೀಡಿದ್ದಾರೆ.

ವಿದೇಶದಲ್ಲಿರುವ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಎಂದು ನವದೆಹಲಿಗೆ ವಾಪಸ್ ಆಗಲಿದ್ದಾರೆ? ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ದೆಹಲಿಯಲ್ಲಿ ಸೆಪ್ಟೆಂಬರ್ 4ರಂದು ನಡೆಯಲಿರುವ 'ಮೆಹೆಂಗೈ ಪರ್ ಹಲ್ಲಾ ಬೋಲ್' ಜಾಥಾ ಉದ್ದೇಶಿಸಿ ಅವರು ಮಾತನಾಡಲಿದ್ದಾರೆ ಎಂಬ ಮಾಹಿತಿ ಇದೆ.
ಭಾನುವಾರ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಬಗ್ಗೆ ಚರ್ಚಿಸಲು ಸಭೆ ನಡೆದಿತ್ತು. ಸೋನಿಯಾ ಗಾಂಧಿ ವಿದೇಶದಿಂದಲೇ ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು. ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅಗತ್ಯವಿದ್ದರೆ ಅಕ್ಟೋಬರ್ 19ರಂದು ಮತ ಎಣಿಕೆ ನಡೆಯಲಿದೆ.
ಕಾಂಗ್ರೆಸ್ ಪಕ್ಷ ಕಾಶ್ಮೀರದಿಂದ ಕನ್ಯಾಕುಮಾರಿ ತನಕ 'ಭಾರತ್ ಜೋಡೋ' ಯಾತ್ರೆಗೆ ತಯಾರಿ ನಡೆಸಿದೆ. ಸೆಪ್ಟೆಂಬರ್ 7ರಂದು ಈ ಯಾತ್ರೆಗೆ ಚಾಲನೆ ಸಿಗಲಿದೆ. 3500 ಕಿ. ಮೀ.ಗಳ ದೊಡ್ಡ ಪಾದಯಾತ್ರೆ ಇದಾಗಿದೆ. ಸುಮಾರು 150 ದಿನಗಳ ಕಾಲ ನಡೆಯುವ ಬೃಹತ್ ಪಾದಯಾತ್ರೆ ನಡೆಯಲಿದೆ.
Congress president Sonia Gandhi’s mother, Paola Maino, died on August 27 and her funeral was held on Tuesday. Sonia Gandhi had left last week to meet her mother. This was part of her trip abroad for medical check-ups, where her son Rahul Gandhi and daughter Priyanka Gandhi Vadra went with her.Jairam Ramesh, Congress general secretary of communications, has tweeted the news of the death of Sonia Gandhi’s mother.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am