ಬ್ರೇಕಿಂಗ್ ನ್ಯೂಸ್
31-08-22 08:06 pm HK News Desk ದೇಶ - ವಿದೇಶ
ನವದೆಹಲಿ, ಆ 31: ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ವಿಧಿವಶರಾದರು. ಇಟಲಿಯಲ್ಲಿನ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಸೋನಿಯಾ ಗಾಂಧಿ ತಾಯಿ, ಸಂಸದ ರಾಹುಲ್ ಗಾಂಧಿ ಅಜ್ಜಿ ಪಾವೊಲಾ ಮೈನೋ ಆಗಸ್ಟ್ 27ರಂದು ನಿಧನರಾಗಿದ್ದಾರೆ. ಮಂಗಳವಾರ ಅಂತ್ಯಕ್ರಿಯೆ ನಡೆದಿದೆ.ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ವೈದ್ಯಕೀಯ ಪರೀಕ್ಷೆಗಾಗಿ ಸೋನಿಯಾ ಗಾಂಧಿ ವಿದೇಶಕ್ಕೆ ತೆರಳಿದ್ದು, ರಾಹುಲ್ ಗಾಂಧಿ ಸಹ ಅವರ ಜೊತೆ ಇದ್ದಾರೆ.
ತಮ್ಮ ಟ್ವೀಟ್ನಲ್ಲಿ ಜೈರಾಮ್ ರಮೇಶ್, 'ಶ್ರೀಮತಿ ಸೋನಿಯಾ ಗಾಂಧಿಯವರ ತಾಯಿ, ಶ್ರೀಮತಿ ಪಾವೊಲಾ ಮೈನೋ ಅವರು 27 ಆಗಸ್ಟ್ 2022 ರಂದು ಶನಿವಾರ ಇಟಲಿಯಲ್ಲಿ ತಮ್ಮ ಮನೆಯಲ್ಲಿ ನಿಧನರಾದರು. ಅಂತ್ಯಕ್ರಿಯೆ ನಿನ್ನೆ ನಡೆಯಿತು' ಎಂದು ಮಾಹಿತಿ ನೀಡಿದ್ದಾರೆ.
ವಿದೇಶದಲ್ಲಿರುವ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಎಂದು ನವದೆಹಲಿಗೆ ವಾಪಸ್ ಆಗಲಿದ್ದಾರೆ? ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ದೆಹಲಿಯಲ್ಲಿ ಸೆಪ್ಟೆಂಬರ್ 4ರಂದು ನಡೆಯಲಿರುವ 'ಮೆಹೆಂಗೈ ಪರ್ ಹಲ್ಲಾ ಬೋಲ್' ಜಾಥಾ ಉದ್ದೇಶಿಸಿ ಅವರು ಮಾತನಾಡಲಿದ್ದಾರೆ ಎಂಬ ಮಾಹಿತಿ ಇದೆ.
ಭಾನುವಾರ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಬಗ್ಗೆ ಚರ್ಚಿಸಲು ಸಭೆ ನಡೆದಿತ್ತು. ಸೋನಿಯಾ ಗಾಂಧಿ ವಿದೇಶದಿಂದಲೇ ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು. ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅಗತ್ಯವಿದ್ದರೆ ಅಕ್ಟೋಬರ್ 19ರಂದು ಮತ ಎಣಿಕೆ ನಡೆಯಲಿದೆ.
ಕಾಂಗ್ರೆಸ್ ಪಕ್ಷ ಕಾಶ್ಮೀರದಿಂದ ಕನ್ಯಾಕುಮಾರಿ ತನಕ 'ಭಾರತ್ ಜೋಡೋ' ಯಾತ್ರೆಗೆ ತಯಾರಿ ನಡೆಸಿದೆ. ಸೆಪ್ಟೆಂಬರ್ 7ರಂದು ಈ ಯಾತ್ರೆಗೆ ಚಾಲನೆ ಸಿಗಲಿದೆ. 3500 ಕಿ. ಮೀ.ಗಳ ದೊಡ್ಡ ಪಾದಯಾತ್ರೆ ಇದಾಗಿದೆ. ಸುಮಾರು 150 ದಿನಗಳ ಕಾಲ ನಡೆಯುವ ಬೃಹತ್ ಪಾದಯಾತ್ರೆ ನಡೆಯಲಿದೆ.
Congress president Sonia Gandhi’s mother, Paola Maino, died on August 27 and her funeral was held on Tuesday. Sonia Gandhi had left last week to meet her mother. This was part of her trip abroad for medical check-ups, where her son Rahul Gandhi and daughter Priyanka Gandhi Vadra went with her.Jairam Ramesh, Congress general secretary of communications, has tweeted the news of the death of Sonia Gandhi’s mother.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 06:51 pm
Mangalore Correspondent
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm