ಬ್ರೇಕಿಂಗ್ ನ್ಯೂಸ್
31-08-22 11:05 pm HK News Desk ದೇಶ - ವಿದೇಶ
ಅಸ್ಸಾಂ, ಆಗಸ್ಟ್ 31: ಅಸ್ಸಾಂನಲ್ಲಿ ಭಯೋತ್ಪಾದಕರ ನಂಟು ಹೊಂದಿದ್ದ ಆರೋಪದಲ್ಲಿ ಮತ್ತೊಂದು ಮದರಸಾವನ್ನು ಕೆಡವಿ ಹಾಕಲಾಗಿದೆ. ಬೊಂಗಾಯಿಗಾಂವ್ ಎಂಬ ಜಿಲ್ಲೆಯ ಜೋಗಿಘೋಪಾ ಪೊಲೀಸ್ ಠಾಣೆ ವ್ಯಾಪ್ತಿಯ ಕಬೈತರಿ ಎನ್ನುವ ಗ್ರಾಮದಲ್ಲಿ ಮದ್ರಸಾವನ್ನು ಜೆಸಿಬಿ ತಂದು ಪೊಲೀಸರೇ ಧ್ವಂಸ ಮಾಡಿದ್ದಾರೆ.
ಅಲ್-ಖೈದಾ ಮತ್ತು ಬಾಂಗ್ಲಾದೇಶ ಮೂಲದ ಅನ್ಸರುಲ್ಲಾ ಬಾಂಗ್ಲಾ ಎಂಬ ಭಯೋತ್ಪಾದಕ ಸಂಘಟನೆ ಜೊತೆಗೆ ಸಂಬಂಧ ಹೊಂದಿರುವುದು ಸಾಬೀತಾಗಿದ್ದರಿಂದ ಮರ್ಕಜ್ ಉಲ್ ಮಾ-ಆರಿಫ್ ಕುರಿಯಾನಾ ಎಂಬ ಹೆಸರಿನ ಮದ್ರಸಾವನ್ನು ಕೆಡವಲಾಗಿದೆ. ಎರಡು ತಿಂಗಳ ಸತತ ಕಾರ್ಯಾಚರಣೆಯಿಂದ ಭಯೋತ್ಪಾದಕ ನಿಗ್ರಹ ದಳವು ಅಸ್ಸಾಂನಲ್ಲಿ 37 ಮಂದಿ ಶಂಕಿತ ಉಗ್ರರನ್ನು ಬಂಧಿಸಿದ್ದರು. ಅವರು ನೀಡಿದ ಮಾಹಿತಿ ಆಧರಿಸಿ ಹಲವಾರು ಕಡೆ ಮಸೀದಿ ಇಮಾಮ್ ಗಳು, ಮದ್ರಸಾ ಶಿಕ್ಷಕರನ್ನು ಬಂಧಿಸಲಾಗಿದೆ. ಆಗಸ್ಟ್ ತಿಂಗಳಲ್ಲಿ ಭಯೋತ್ಪಾದಕರ ನಂಟಿನಲ್ಲಿ ಕೆಡವಲಾದ ಮೂರನೇ ಮದ್ರಸಾ ಇದಾಗಿದೆ.

![]()
ಆಗಸ್ಟ್ 21ರಂದು ಗೋಲ್ಪಾರಾ ಜಿಲ್ಲೆಯಲ್ಲಿ ಇಬ್ಬರು ಇಮಾಮ್ಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಕಬೈತರಿ ಮದ್ರಸಾದಲ್ಲಿ ಶಿಕ್ಷಕನಾಗಿದ್ದ ಜೆಹಾರುಲ್ ಇಸ್ಲಾಂ ಎಂಬಾತ ಭಯೋತ್ಪಾದಕ ಸಂಘಟನೆಗಳ ನಂಟು ಹೊಂದಿರುವುದು ತಿಳಿದುಬಂದಿತ್ತು. ಅದರಂತೆ ದಾಳಿ ನಡೆಸಿದ್ದ ಎಟಿಎಸ್ ಪಡೆ ಆಗಸ್ಟ್ 26 ರಂದು ಆತನನ್ನು ಬಂಧಿಸಿತ್ತು. ಅಲ್ಲದೆ, ಭಯೋತ್ಪಾದಕರ ಜೊತೆಗೆ ನಂಟು ಹೊಂದಿದ್ದ ಬಗ್ಗೆ ಸಾಕಷ್ಟು ದಾಖಲೆಗಳನ್ನೂ ಪತ್ತೆ ಮಾಡಿತ್ತು. ಅದರಂತೆ, ಆತ ನಡೆಸುತ್ತಿದ್ದ ಮದ್ರಸಾವನ್ನು ಧ್ವಂಸ ಮಾಡಲು ಬೊಂಗಾಯಿಗಾಂವ್ ಜಿಲ್ಲಾಧಿಕಾರಿ ಆದೇಶ ಮಾಡಿದ್ದರು.

ಎರಡು ದಿನಗಳ ಹಿಂದೆ ಎರಡಂತಸ್ತಿನ ಕಟ್ಟಡ ಧ್ವಂಸ ಕುರಿತು ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಮದ್ರಸಾದಲ್ಲಿದ್ದ ಸುಮಾರು 200 ವಿದ್ಯಾರ್ಥಿಗಳನ್ನು ಅವರ ಮನೆಗಳಿಗೆ ಕಳುಹಿಸಲಾಗಿದೆ. ಅಲ್ಲದೆ, ಹತ್ತಿರದ ಇತರ ಸಂಸ್ಥೆಗಳಿಗೆ ಸ್ಥಳಾಂತರಗೊಳ್ಳಲು ಸೂಚಿಸಲಾಗಿದೆ ಎಂದು ಬೊಂಗಾಯಿಗಾಂವ್ ಜಿಲ್ಲೆಯ ಪೊಲೀಸ್ ಅಧೀಕ್ಷಕ ಸ್ವಪ್ನನೀಲ್ ದೇಕಾ ಮಾಹಿತಿ ನೀಡಿದ್ದಾರೆ.
The crackdown against illegal madrasas in Assam by the state government continues to take place as another private Islamic seminary was demolished on Wednesday over alleged links to terror outfits Al-Qaeda in Indian Subcontinent (AQIS) and Bangladesh-based Ansarullah Bangla Team (ABT).
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 08:30 pm
HK News Desk
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm