ಬ್ರೇಕಿಂಗ್ ನ್ಯೂಸ್
31-08-22 11:05 pm HK News Desk ದೇಶ - ವಿದೇಶ
ಅಸ್ಸಾಂ, ಆಗಸ್ಟ್ 31: ಅಸ್ಸಾಂನಲ್ಲಿ ಭಯೋತ್ಪಾದಕರ ನಂಟು ಹೊಂದಿದ್ದ ಆರೋಪದಲ್ಲಿ ಮತ್ತೊಂದು ಮದರಸಾವನ್ನು ಕೆಡವಿ ಹಾಕಲಾಗಿದೆ. ಬೊಂಗಾಯಿಗಾಂವ್ ಎಂಬ ಜಿಲ್ಲೆಯ ಜೋಗಿಘೋಪಾ ಪೊಲೀಸ್ ಠಾಣೆ ವ್ಯಾಪ್ತಿಯ ಕಬೈತರಿ ಎನ್ನುವ ಗ್ರಾಮದಲ್ಲಿ ಮದ್ರಸಾವನ್ನು ಜೆಸಿಬಿ ತಂದು ಪೊಲೀಸರೇ ಧ್ವಂಸ ಮಾಡಿದ್ದಾರೆ.
ಅಲ್-ಖೈದಾ ಮತ್ತು ಬಾಂಗ್ಲಾದೇಶ ಮೂಲದ ಅನ್ಸರುಲ್ಲಾ ಬಾಂಗ್ಲಾ ಎಂಬ ಭಯೋತ್ಪಾದಕ ಸಂಘಟನೆ ಜೊತೆಗೆ ಸಂಬಂಧ ಹೊಂದಿರುವುದು ಸಾಬೀತಾಗಿದ್ದರಿಂದ ಮರ್ಕಜ್ ಉಲ್ ಮಾ-ಆರಿಫ್ ಕುರಿಯಾನಾ ಎಂಬ ಹೆಸರಿನ ಮದ್ರಸಾವನ್ನು ಕೆಡವಲಾಗಿದೆ. ಎರಡು ತಿಂಗಳ ಸತತ ಕಾರ್ಯಾಚರಣೆಯಿಂದ ಭಯೋತ್ಪಾದಕ ನಿಗ್ರಹ ದಳವು ಅಸ್ಸಾಂನಲ್ಲಿ 37 ಮಂದಿ ಶಂಕಿತ ಉಗ್ರರನ್ನು ಬಂಧಿಸಿದ್ದರು. ಅವರು ನೀಡಿದ ಮಾಹಿತಿ ಆಧರಿಸಿ ಹಲವಾರು ಕಡೆ ಮಸೀದಿ ಇಮಾಮ್ ಗಳು, ಮದ್ರಸಾ ಶಿಕ್ಷಕರನ್ನು ಬಂಧಿಸಲಾಗಿದೆ. ಆಗಸ್ಟ್ ತಿಂಗಳಲ್ಲಿ ಭಯೋತ್ಪಾದಕರ ನಂಟಿನಲ್ಲಿ ಕೆಡವಲಾದ ಮೂರನೇ ಮದ್ರಸಾ ಇದಾಗಿದೆ.

![]()
ಆಗಸ್ಟ್ 21ರಂದು ಗೋಲ್ಪಾರಾ ಜಿಲ್ಲೆಯಲ್ಲಿ ಇಬ್ಬರು ಇಮಾಮ್ಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಕಬೈತರಿ ಮದ್ರಸಾದಲ್ಲಿ ಶಿಕ್ಷಕನಾಗಿದ್ದ ಜೆಹಾರುಲ್ ಇಸ್ಲಾಂ ಎಂಬಾತ ಭಯೋತ್ಪಾದಕ ಸಂಘಟನೆಗಳ ನಂಟು ಹೊಂದಿರುವುದು ತಿಳಿದುಬಂದಿತ್ತು. ಅದರಂತೆ ದಾಳಿ ನಡೆಸಿದ್ದ ಎಟಿಎಸ್ ಪಡೆ ಆಗಸ್ಟ್ 26 ರಂದು ಆತನನ್ನು ಬಂಧಿಸಿತ್ತು. ಅಲ್ಲದೆ, ಭಯೋತ್ಪಾದಕರ ಜೊತೆಗೆ ನಂಟು ಹೊಂದಿದ್ದ ಬಗ್ಗೆ ಸಾಕಷ್ಟು ದಾಖಲೆಗಳನ್ನೂ ಪತ್ತೆ ಮಾಡಿತ್ತು. ಅದರಂತೆ, ಆತ ನಡೆಸುತ್ತಿದ್ದ ಮದ್ರಸಾವನ್ನು ಧ್ವಂಸ ಮಾಡಲು ಬೊಂಗಾಯಿಗಾಂವ್ ಜಿಲ್ಲಾಧಿಕಾರಿ ಆದೇಶ ಮಾಡಿದ್ದರು.

ಎರಡು ದಿನಗಳ ಹಿಂದೆ ಎರಡಂತಸ್ತಿನ ಕಟ್ಟಡ ಧ್ವಂಸ ಕುರಿತು ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಮದ್ರಸಾದಲ್ಲಿದ್ದ ಸುಮಾರು 200 ವಿದ್ಯಾರ್ಥಿಗಳನ್ನು ಅವರ ಮನೆಗಳಿಗೆ ಕಳುಹಿಸಲಾಗಿದೆ. ಅಲ್ಲದೆ, ಹತ್ತಿರದ ಇತರ ಸಂಸ್ಥೆಗಳಿಗೆ ಸ್ಥಳಾಂತರಗೊಳ್ಳಲು ಸೂಚಿಸಲಾಗಿದೆ ಎಂದು ಬೊಂಗಾಯಿಗಾಂವ್ ಜಿಲ್ಲೆಯ ಪೊಲೀಸ್ ಅಧೀಕ್ಷಕ ಸ್ವಪ್ನನೀಲ್ ದೇಕಾ ಮಾಹಿತಿ ನೀಡಿದ್ದಾರೆ.
The crackdown against illegal madrasas in Assam by the state government continues to take place as another private Islamic seminary was demolished on Wednesday over alleged links to terror outfits Al-Qaeda in Indian Subcontinent (AQIS) and Bangladesh-based Ansarullah Bangla Team (ABT).
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm