ಬ್ರೇಕಿಂಗ್ ನ್ಯೂಸ್
02-09-22 09:48 pm HK News Desk ದೇಶ - ವಿದೇಶ
ಕಾಬೂಲ್, ಸೆ.2: ಪಶ್ಚಿಮ ಅಫ್ಘಾನ್ ನಗರದ ಹೆರಾತ್ನಲ್ಲಿರುವ ಮಸೀದಿಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, 18 ಜನರು ಸಾವನ್ನಪ್ಪಿದ್ದಾರೆ.
ಶುಕ್ರವಾರ ಮಧ್ಯಾಹ್ನದ ಪ್ರಾರ್ಥನೆಯ ಸಮಯದಲ್ಲಿ ಹೆರಾತ್ನ ಗುಜರ್ಗಾ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ. ಇಂದು ಮುಸ್ಲಿಂ ಧಾರ್ಮಿಕ ವಾರದ ಪ್ರಮುಖ ದಿನವಾಗಿದ್ದು, ಮಸೀದಿಯಲ್ಲಿ ವಿಶೇಷ ಜನಸಂದಣಿಯಿತ್ತು.

ಶುಕ್ರವಾರ ಪ್ರಾರ್ಥನೆಗೂ ಕೊಂಚ ಮುನ್ನ ಸಂಭವಿಸಿದ ಈ ಭೀಕರ ಸ್ಫೋಟದಲ್ಲಿ ಕನಿಷ್ಠ 18 ಜನರು ಬಲಿಯಾಗಿದ್ದು, ಸುಮಾರು 23 ಮಂದಿ ಗಾಯಗೊಂಡಿದ್ದಾರೆ ಎಂದು ಹೆರಾತ್ ಪ್ರಾಂತ್ಯದ ಗವರ್ನರ್ ಅವರ ವಕ್ತಾರ ಹಮೀದುಲ್ಲಾ ಮೊಟವಾಕೆಲ್ ತಿಳಿಸಿದ್ದಾರೆ. ಮೃತರಲ್ಲಿ ಮಸೀದಿಯ ಇಮಾಮ್ ಮುಜೀಬ್ ಉರ್ ರಮಹಾನ್ ಅನ್ಸಾರಿ ಸೇರಿರುವುದನ್ನು ಸರ್ಕಾರದ ವಕ್ತಾರ ಜಬೀಹುಲ್ಲಾ ಮುಜಾಹಿದ್ ಖಚಿತಪಡಿಸಿದ್ದಾರೆ.

ಈ ಘಟನೆಯ ಹೊಣೆಯನ್ನು ಇದುವರೆಗೂ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಈ ಹಿಂದಿನ ಮಸೀದಿ ದಾಳಿಗಳನ್ನು ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿ ಗುಂಪು ನಡೆಸಿದ್ದು, ಇದು ಅಫ್ಘಾನಿಸ್ತಾನದಲ್ಲಿ ಧಾರ್ಮಿಕ ಮತ್ತು ಜನಾಂಗೀಯ ಅಲ್ಪಸಂಖ್ಯಾತರ ವಿರುದ್ಧ ಸರಣಿ ದಾಳಿಗಳನ್ನು ನಡೆಸಿ, ತಾಲಿಬಾನ್ ಅನ್ನು ಗುರಿಯಾಗಿಸಿಕೊಂಡಿದೆ.

ತನ್ನ ಪ್ರಚೋದನಾಕಾರಿ ಹೇಳಿಕೆಗಳಿಂದ ಪ್ರಸಿದ್ಧರಾಗಿದ್ದ ಅನ್ಸಾರಿ, ತಾಲಿಬಾನ್ ಸರ್ಕಾರದಲ್ಲಿ ಬಹಳ ಪ್ರಭಾವಿ ವ್ಯಕ್ತಿಯಾಗಿದ್ದರು. ಜುಲೈನಲ್ಲಿ ಕಾಬೂಲ್ನಲ್ಲಿ ಧಾರ್ಮಿಕ ಸಮಾವೇಶದಲ್ಲಿ ಮಾತನಾಡಿದ್ದ ಅನ್ಸಾರಿ, ಅಫ್ಘಾನಿಸ್ತಾನದಲ್ಲಿನ ತಾಲಿಬಾನ್ ಆಡಳಿತವನ್ನು ಸಮರ್ಥಿಸಿಕೊಂಡಿದ್ದರು.
![]()
"ನಮ್ಮ ಇಸ್ಲಾಮಿಕ್ ಸರ್ಕಾರದ ವಿರುದ್ಧ ಅತಿ ಸಣ್ಣ ಕೃತ್ಯವನ್ನು ಕೂಡ ಯಾರಾದರೂ ಎಸಗಿದರೂ ಅವರ ಶಿರಚ್ಛೇದ ಮಾಡಬೇಕು. ಈ ಬಾವುಟ (ತಾಲಿಬಾನ್) ಸುಲಭವಾಗಿ ಹಾರಾಡಿಲ್ಲ. ಹಾಗೆಯೇ ಅದನ್ನು ಕೆಳಕ್ಕೆ ಇಳಿಸುವುದು ಸುಲಭವಲ್ಲ" ಎಂದಿದ್ದರು.

ಕಳೆದ ವರ್ಷದ ಆಗಸ್ಟ್ನಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರಕ್ಕೆ ಮರಳುವ ಮುನ್ನ ಕೂಡ ಅನ್ಸಾರಿ ಅವರು ಅಮೆರಿಕ ಬೆಂಬಲಿತ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸುತ್ತಿದ್ದರು. ಅವರು ಒಂದು ತಿಂಗಳ ಒಳಗೇ, ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ತಾಲಿಬಾನ್ ಪರವಿರುವ ಎರಡನೇ ಧಾರ್ಮಿಕ ನಾಯಕರಾಗಿದ್ದಾರೆ. ಕಾಬೂಲ್ನಲ್ಲಿ ಮದರಸಾದಲ್ಲಿ ನಡೆದ ಆತ್ಮಾಹುತಿ ದಾಳಿಯಲ್ಲಿ ರಹಿಮುಲ್ಲಾ ಹಕ್ಕಾನಿಯನ್ನು ಹತ್ಯೆ ಮಾಡಲಾಗಿತ್ತು.

ಅಫ್ಘಾನಿಸ್ತಾನದಲ್ಲಿ ಕಳೆದ ವರ್ಷ ತಾಲಿಬಾನ್ ಅಧಿಕಾರಕ್ಕೆ ಬಂದ ಬಳಿಕ ಹಿಂಸಾಚಾರಗಳಲ್ಲಿ ಇಳಿಕೆಯಾಗಿದೆ. ಆದರೆ ಕೆಲವು ತಿಂಗಳಿನಿಂದ ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಯಾಗಿಸಿ ದಾಳಿಗಳು ನಡೆದಿವೆ. ಇವುಗಳಲ್ಲಿ ಹೆಚ್ಚಿನ ಕೃತ್ಯಗಳಿಗೆ ಇಸ್ಲಾಮಿಕ್ ಸ್ಟೇಟ್ ಹೊಣೆ ಹೊತ್ತುಕೊಂಡಿದೆ.
An Afghan medic says at least 18 people were killed and 21 wounded in a blast that tore through a crowded mosque in the western city of Herat.Mohammad Daud Mohammadi, an official at the Herat ambulance centre, said ambulances transported 18 dead and 21 wounded to hospitals in the city on Friday.The blast went off in the Guzargah Mosque in the western city of Herat during Friday noon prayers, the highlight of the Muslim religious week when places of worship are particularly crowded.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm