ಬ್ರೇಕಿಂಗ್ ನ್ಯೂಸ್
04-09-22 06:03 pm HK News Desk ದೇಶ - ವಿದೇಶ
ನವದೆಹಲಿ, ಸೆ.4: ಭಾರತವು 2029ರ ವೇಳೆಗೆ ಜರ್ಮನಿ ಮತ್ತು ಜಪಾನ್ ಆರ್ಥಿಕತೆಯನ್ನು ಹಿಂದಿಕ್ಕಿ ಜಗತ್ತಿನಲ್ಲಿ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಎಸ್ ಬಿಐ ಸಂಶೋಧನಾ ವರದಿಯೊಂದು ಹೇಳಿದೆ.
ಭಾರತದ ಜಿಡಿಪಿ ದರವು ವಿಸ್ತಾರಗೊಳ್ಳುತ್ತಿದ್ದು, ಸದ್ಯಕ್ಕೆ ಯುಕೆಯನ್ನು ಹಿಂದಿಕ್ಕಿ 5ನೇ ಸ್ಥಾನದಲ್ಲಿದೆ. ಹಾಗೆ ನೋಡಿದರೆ, 5ನೇ ಸ್ಥಾನಕ್ಕೆ ಏರಿರುವುದು ಇತ್ತೀಚಿನ ಬೆಳವಣಿಗೆ ಅಲ್ಲ. 2021ರ ಡಿಸೆಂಬರ್ ನಲ್ಲಿಯೇ ಯುಕೆ ಆರ್ಥಿಕತೆಯನ್ನು ಹಿಂದಿಕ್ಕಿ 5ನೇ ಸ್ಥಾನಕ್ಕೆ ಹೋಗಿತ್ತು. ಭಾರತದ ಜಿಡಿಪಿ ಬೆಳವಣಿಗೆ ದರ ಈಗ ಶೇ. 3.5ರಲ್ಲಿದೆ. 2014ರಲ್ಲಿ ಅದು ಶೇ. 2.5ರಲ್ಲಿತ್ತು. ಇದೇ ರೀತಿ ಬೆಳವಣಿಗೆಯಾದಲ್ಲಿ 2027ರ ಹೊತ್ತಿಗೆ ಜಿಡಿಪಿ ನಾಲ್ಕು ಶೇಕಡಾಕ್ಕೆ ಏರಿಕೆಯಾಗಲಿದೆ. ಹಾಗಾದಲ್ಲಿ ಜರ್ಮನಿ ಆರ್ಥಿಕತೆಯನ್ನು ಹಿಂದಿಕ್ಕಲಿದೆ ಎಂದು ಎಸ್ ಬಿಐ ಸಂಶೋಧನಾ ವಿಭಾಗದ ಗ್ರೂಪ್ ಚೀಫ್ ಇಕನಾಮಿಕ್ ಅಡ್ವೈಸರ್ ಸೌಮ್ಯಾ ಕಾಂತಿ ಘೋಷ್ ಬರೆದಿದ್ದಾರೆ.
2014ರಲ್ಲಿ ಜಿಡಿಪಿ ಆಧಾರದಲ್ಲಿ ವಿಶ್ವ ಆರ್ಥಿಕತೆಯಲ್ಲಿ ಭಾರತದ ಸ್ಥಾನ ಹತ್ತರಲ್ಲಿತ್ತು. 2022-23ರ ಸಾಲಿನ ಮೊದಲ ಆರ್ಥಿಕ ವರ್ಷದಲ್ಲಿ ಭಾರತದ ಜಿಡಿಪಿ ಬೆಳವಣಿಗೆ 13.5ರಲ್ಲಿತ್ತು. ಇದನ್ನು ಬೇರೆ ದೇಶಗಳಿಗೆ ಹೋಲಿಸಿದರೆ ಅತ್ಯಂತ ವೇಗದ ಬೆಳವಣಿಗೆಯಂತೆ ಕಾಣುತ್ತದೆ. 2022ರ ಜೂನ್ ವೇಳೆಗೆ ಜಿಡಿಪಿ ದರ 13.5ರಷ್ಟು ದಾಖಲಾಗಿತ್ತು. ಅದಕ್ಕೂ ಹಿಂದೆ 2021-22ರ ಸಾಲಿನಲ್ಲಿ ಬೆಳವಣಿಗೆ ದರವು ಶೇ. 20.1ರಲ್ಲಿತ್ತು. ಅಂದರೆ, 2022ರಲ್ಲಿ ದೇಶದ ಒಟ್ಟು ಜಿಡಿಪಿ 36.85 ಲಕ್ಷ ಕೋಟಿಗೇರಿದ್ದರೆ, ಹಿಂದಿನ ಸಾಲಿನಲ್ಲಿ ಈ ಮೊತ್ತ 32.46 ಲಕ್ಷ ಕೋಟಿ ಇತ್ತು ಎಂದು ಎಸ್ ಬಿಐ ಅಧಿಕೃತ ಹೇಳಿಕೆಯನ್ನು ಉಲ್ಲೇಖಿಸಿ ನ್ಯೂಸ್ 18 ಡಾಟ್ ಕಾಮ್ ವರದಿ ಮಾಡಿದೆ.

ಕಳೆದ ಶುಕ್ರವಾರ ಬ್ಲೂಮ್ ಬರ್ಗ್ ಸಂಸ್ಥೆಯು ಭಾರತದ ಆರ್ಥಿಕತೆಯು ಯುನೈಟೆಡ್ ಕಿಂಗ್ ಡಮ್ ಅನ್ನು ಹಿಂದಿಕ್ಕಿದ್ದಾಗಿ ವರದಿ ಮಾಡಿತ್ತು. ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯಲ್ಲಿ (ಐಎಂಎಫ್) 2021ರ ಸಾಲಿನ ಉಲ್ಲೇಖಿತವಾಗಿದ್ದ ಜಿಡಿಪಿ ಅಂಶಗಳನ್ನು ಆಧರಿಸಿ ಬ್ಲೂಮ್ ಬರ್ಗ್ ಸಂಸ್ಥೆಯು ಭಾರತದ ಆರ್ಥಿಕತೆಯನ್ನು ವಿಶ್ವದ ಐದನೇ ಅತಿ ದೊಡ್ಡ ಆರ್ಥಿಕತೆಯೆಂದು ಹೇಳಿತ್ತು.
Even as India has surpassed the UK in terms of gross domestic product (GDP) to become the fifth largest economy, an SBI report now says that the Indian economy is expected to become the third largest in the world by 2029, overtaking Germany and Japan as well. In that year, India will be seven notches higher as compared with its position in 2014, when the country was ranked 10th.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm