ಬ್ರೇಕಿಂಗ್ ನ್ಯೂಸ್
10-09-22 08:04 pm HK News Desk ದೇಶ - ವಿದೇಶ
Photo credits : mathrubhumi news
ಕೇರಳ, ಸೆ.10: ಒಂದು ಕುಂಬಳಕಾಯಿಯ ಬೆಲೆ 47 ಸಾವಿರ ರೂಪಾಯಿ ಅಂದರೆ ಯಾರೂ ನಂಬುವುದಿಲ್ಲ. ಆದರೂ ಇದು ಸತ್ಯ. ಕುಂಬಳಕಾಯಿಯೊಂದು ಬರೋಬ್ಬರಿ 47 ಸಾವಿರ ರೂಪಾಯಿಗೆ ಮಾರಾಟವಾಗಿದ್ದು ನಿಜ. ಇಡುಕ್ಕಿಯ ಗುಡ್ಡ ಪ್ರದೇಶದಲ್ಲಿರುವ ಚೆಮ್ಮನ್ನಾರ್ ಎಂಬಲ್ಲಿ ನಡೆದ ಓಣಂ ಹಬ್ಬದ ಹರಾಜಿನಲ್ಲಿ 5 ಕೆಜಿ ತೂಕದ ಕುಂಬಳಕಾಯಿಯೊಂದು 47 ಸಾವಿರ ರೂಪಾಯಿಗೆ ಮಾರಾಟವಾಗಿದೆ. ಇದು ಈ ಬಾರಿಯ ಓಣಂ ಹಬ್ಬದ ವಿಶೇಷತೆಯಾಗಿದೆ.
ಸಾಮಾನ್ಯವಾಗಿ ಇಲ್ಲಿ ನಡೆಯುವ ಹರಾಜಿನಲ್ಲಿ ಟಗರು, ಹುಂಜ ಮುಂತಾದುವು 10 ಸಾವಿರಕ್ಕೂ ಅಧಿಕ ಬೆಲೆಗೆ ಮಾರಾಟವಾಗುತ್ತವೆ. ಆದರೆ ಇದಕ್ಕಿಂತಲೂ ದೊಡ್ಡ ಬೆಲೆಗೆ ಕುಂಬಳಕಾಯಿ ಮಾರಾಟವಾಗಿದ್ದು ಒಂದು ದಾಖಲೆಯಾಗಿದೆ. ಕುಂಬಳಕಾಯಿಗೆ ಈ ಪರಿ ಬೆಲೆ ಬಂದಿರುವುದನ್ನು ನೋಡಿ ಇಲ್ಲಿನ ಹರಾಜಿನ ಬಗ್ಗೆ ಜನರಲ್ಲಿ ವಿಪರೀತ ಕುತೂಹಲ ಮೂಡಿದೆ. ಇನ್ನೂ ವಿಚಿತ್ರ ಏನೆಂದರೆ ಈ ಕುಂಬಳಕಾಯಿಯನ್ನು ಹಬ್ಬದ ಸಂಘಟಕರಿಗೆ ಉಚಿತವಾಗಿ ನೀಡಿದ್ದರು ಎಂಬುದು.
47 ಸಾವಿರ ರೂ.ಗೆ ಮಾರಾಟವಾದ ಕುಂಬಳಕಾಯಿ
ಓಣಂ ಹಬ್ಬದ ಖರ್ಚು ವೆಚ್ಚಗಳನ್ನು ಸರಿದೂಗಿಸಲು ಪ್ರಯತ್ನಿಸುತ್ತಿದ್ದ ಸಂಘಟಕರಿಗೆ ಒಂದೇ ಒಂದು ಕುಂಬಳಕಾಯಿ ಮಾರಾಟದಿಂದ 47 ಸಾವಿರ ರೂಪಾಯಿ ಸಿಕ್ಕಿರುವುದು ಖುಷಿಯಾಗಿದೆ. ಅದೃಷ್ಟ ಎಂಬುದು ಕುಂಬಳಕಾಯಿ ರೂಪದಲ್ಲೂ ಬರುತ್ತೆ ಎಂದು ಇಲ್ಲಿನ ಜನ ಈಗ ಮಾತನಾಡಿಕೊಳ್ಳುತ್ತಿದ್ದಾರೆ.
An auction conducted in Chemmnar in Idukki as part of Onam celebrations became so competitive that a Pumpkin was sold for Rs 47,000.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm