ಬ್ರೇಕಿಂಗ್ ನ್ಯೂಸ್
10-09-22 08:39 pm HK News Desk ದೇಶ - ವಿದೇಶ
ಭೋಪಾಲ್, ಸೆ.10: ಬಿಂದಾಸ್ ಕಾವ್ಯ ಎಂದೇ ಜನಪ್ರಿಯಳಾಗಿದ್ದ ಯುಟ್ಯೂಬರ್, ಟಿಕ್ಟಾಕ್ ಸೆಲೆಬ್ರಿಟಿ ನಿಗೂಢವಾಗಿ ನಾಪತ್ತೆಯಾಗಿದ್ದು ಭಾರೀ ಸಂಚಲನ ಮೂಡಿಸಿತ್ತು. 16 ವರ್ಷದ ಕಾವ್ಯ ನಾಪತ್ತೆ ಬಗ್ಗೆ ಕುಟುಂಬಸ್ಥರ ದೂರಿನ ಬೆನ್ನಲ್ಲೇ ಪೊಲೀಸರು ಹುಡುಕಾಟ ನಡೆಸಿದ್ದು ಮಧ್ಯಪ್ರದೇಶದಲ್ಲಿ ಪತ್ತೆಯಾಗಿದ್ದಾಳೆ.
ಬಿಂದಾಸ್ ಕಾವ್ಯ ಯುಟ್ಯೂಬ್ ಚಾನೆಲ್ ಹೊಂದಿದ್ದು ಚಿಕ್ಕ ವಯಸ್ಸಿನಲ್ಲೇ ಟಿಕ್ಟಾಕ್ ವಿಡಿಯೋಗಳ ಮೂಲಕ ಫೇಮಸ್ ಆಗಿದ್ದಳು. 15ನೇ ವಯಸ್ಸಿನಲ್ಲೇ ಕಾವ್ಯ ಸಾಕಷ್ಟು ಜನಪ್ರಿಯತೆ ಗಳಿಸಿದ್ದಳು. 2017ರಲ್ಲಿ ಯುಟ್ಯೂಬ್ ಚಾನೆಲ್ ಆರಂಭಿಸಿದ್ದು 4.23 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾಳೆ.

ಮಹಾರಾಷ್ಟ್ರದ ಔರಂಗಾಬಾದ್ ನ ಮನೆಯಿಂದ ದಿಢೀರ್ ನಾಪತ್ತೆಯಾಗಿದ್ದ ಕಾವ್ಯಶ್ರೀ ಯಾದವ್, ಮಧ್ಯಪ್ರದೇಶದ ಇಟಾರ್ಸಿ ರೈಲು ನಿಲ್ದಾಣದಲ್ಲಿ ಪತ್ತೆಯಾಗಿದ್ದಾಳೆ. ಔರಂಗಾಬಾದ್ ನಿಂದ ತೆರಳುತ್ತಿದ್ದ ಖುಷಿ ಎಕ್ಸ್ಪ್ರೆಸ್ ರೈಲಿನಲ್ಲಿ ಪೊಲೀಸರು ತಪಾಸಣೆ ನಡೆಸಿದಾಗ, ಸ್ಲೀಪಿಂಗ್ ಕೋಚ್ ನಲ್ಲಿ ಪತ್ತೆಯಾಗಿದ್ದಾಳೆ. ಹೆತ್ತವರ ಜೊತೆ ಜಗಳವಾಡಿ ಕಾವ್ಯಶ್ರೀ ರೈಲಿನಲ್ಲಿ ತೆರಳಿದ್ದಾಳೆ ಎನ್ನಲಾಗುತ್ತಿದೆ. ಪೊಲೀಸರು ಆಕೆಯನ್ನು ಮರಳಿ ಔರಂಗಾಬಾದ್ ಗೆ ಕರೆತರುತ್ತಿದ್ದಾರೆ.
ಕಾವ್ಯ ಕಾಣೆಯಾಗಿರುವ ಬಗ್ಗೆ ಟ್ವಿಟರ್, ಇನ್ನಿತರ ಜಾಲತಾಣದಲ್ಲಿ 19 ನಿಮಿಷದ ವಿಡಿಯೋ ಪ್ರಕಟಿಸಿದ್ದ ತಾಯಿ, ಆಕೆಯನ್ನು ಪತ್ತೆ ಮಾಡಲು ಸಹಾಯ ಮಾಡುವಂತೆ ಸಾರ್ವಜನಿಕರು ಹಾಗೂ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಆಕೆಗಿನ್ನೂ 16 ವರ್ಷ, ಒಬ್ಬಂಟಿಯಾಗಿ ಆಕೆ ಬದುಕಲು ಸಾಧ್ಯವಿಲ್ಲ. ದಯವಿಟ್ಟು ಹುಡುಕಲು ಸಹಾಯ ಮಾಡಿ ಎಂದು ಬೇಡಿಕೊಂಡಿದ್ದರು. ಅಲ್ಲದೆ, ಕಾವ್ಯಳನ್ನು ಯಾರೋ ಅಪಹರಿಸಿದ್ದಾರೆ ಎಂಬ ಶಂಕೆಯನ್ನೂ ವ್ಯಕ್ತಪಡಿಸಿದ್ದರು.
Games like BGMI and Garena Free Fire boast massive fan bases, which has also contributed to the rise in the streaming culture in India. Although many PC/console titles have huge fan followings, mobile battle royale games have mainstreamed many famous creators like Dynamo, Mortal, Total Gaming, A_S Gaming, Desi Gamers, and more.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm