ಬ್ರೇಕಿಂಗ್ ನ್ಯೂಸ್
11-09-22 01:25 pm HK News Desk ದೇಶ - ವಿದೇಶ
ಬಿಹಾರ, ಸೆ 11: ತಮ್ಮ ಸಹೋದ್ಯೋಗಿಗಳ ಕೆಲಸ ತೃಪ್ತಿದಾಯಕವಾಗಿಲ್ಲ ಎಂದು ಕೋಪಗೊಂಡ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು (ಎಸ್ಪಿ) ತಮ್ಮ ಐವರು ಕಿರಿಯ ಪೊಲೀಸ್ ಅಧಿಕಾರಿಗಳನ್ನು ಲಾಕಪ್ನಲ್ಲಿಟ್ಟ ಘಟನೆ ಬಿಹಾರದ ನೆವಡಾ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಈ ಘಟನೆಯನ್ನು ಆರೋಪ ಹೊತ್ತ ಅಧಿಕಾರಿ ಅಲ್ಲಗಳೆದಿದ್ದಾರೆ. ಆದ್ರೆ ಇಬ್ಬರು ಸಬ್ ಇನ್ಸ್ಪೆಕ್ಟರ್ಸ್ ಹಾಗು ಮೂವರು ಎಎಸ್ಐಗಳೂ ಸೇರಿದಂತೆ ಐವರು ಲಾಕಪ್ನಲ್ಲಿ ಬಂಧಿಯಾಗಿರುವ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.
ಘಟನೆಯನ್ನು ಖಂಡಿಸಿರುವ ಬಿಹಾರ ಪೊಲೀಸ್ ಅಸೋಸಿಯೋಷನ್ (ಇದು ಪೊಲೀಸ್ ಸಿಬ್ಬಂದಿಯ ಯೂನಿಯನ್ ಆಗಿದ್ದು ಜಿಲ್ಲಾ ಶಾಖೆಗಳನ್ನೂ ಹೊಂದಿದೆ) ಆರೋಪ ಹೊತ್ತಿರುವ ಪೊಲೀಸ್ ಅಧಿಕಾರಿ ಗೌರವ್ ಮಂಗ್ಲಾ ವಿರುದ್ಧ ತನಿಖೆಗೆ ಆಗ್ರಹಿಸಿದೆ. ಈ ಪ್ರಕರಣ ಸೆಪ್ಟೆಂಬರ್ 8ರಂದು ನಡೆದಿದೆ ಎಂದು ತಿಳಿದುಬಂದಿದೆ.
ಭದ್ರತಾ ಸಿಸಿಟಿವಿ ಕ್ಯಾಮರಾದಲ್ಲಿ, ಸಬ್ ಇನ್ಸ್ಪೆಕ್ಟರ್ಗಳಾದ ಶತ್ರುಘ್ನ ಪಾಸ್ವಾನ್, ರಾಮ್ರೇಖಾ ಸಿಂಗ್, ಎಎಸ್ಐಗಳಾದ ಸಂತೋಷ್ ಪಾಸ್ವಾನ್, ಸಂಜಯ್ ಸಿಂಗ್ ಮತ್ತು ರಾಮೇಶ್ವರ್ ಒರಾನ್ ನೆವಾಡಾ ಪೊಲೀಸ್ ಠಾಣೆಯ ಲಾಕಪ್ನಲ್ಲಿ ಇರುವುದು ಕಂಡುಬರುತ್ತದೆ. ಇವರನ್ನು ಎಸ್ಪಿ, ಮಧ್ಯರಾತ್ರಿ ಸುಮಾರು 2 ಗಂಟೆಗೂ ಹೆಚ್ಚು ಕಾಲ ಲಾಕಪ್ನಲ್ಲಿ ಇಟ್ಟಿದ್ದರು ಎಂದು ಹೇಳಲಾಗುತ್ತಿದೆ.
ಐವರು ಪೊಲೀಸರನ್ನೇ ಲಾಕಪ್ನಲ್ಲಿಟ್ಟ ಎಸ್ಪಿ
ತಮ್ಮ ಮೇಲೆ ಬಂದಿರುವ ಗಂಭೀರ ಆರೋಪಕ್ಕೆ ಪ್ರತಿಕ್ರಿಯಿಸಿ, ಅಂಥ ಯಾವುದೇ ಘಟನೆ ನಡೆದಿಲ್ಲ ಎಂದಿದ್ದಾರೆ.
ಆದರೆ ವಿಶ್ವಸನೀಯ ಮೂಲಗಳು ನೀಡಿರುವ ಮಾಹಿತಿಯಂತೆ, ಸೆಪ್ಟೆಂಬರ್ 8ರ ರಾತ್ರಿ ಸುಮಾರು 9 ಗಂಟೆಗೆ ಎಸ್ಪಿ ಮಂಗ್ಲಾ ವಿವಿಧ ಪ್ರಕರಣಗಳ ತನಿಖೆಯ ಬೆಳವಣಿಗೆಯನ್ನು ಪರಿಶೀಲಿಸಲು ನೆವಾಡಾ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕೆಲವು ಅಧಿಕಾರಿಗಳು ಕೆಲಸದಲ್ಲಿ ಬೇಜವಾಬ್ದಾರಿತನ ತೋರಿರುವುದು ಅವರ ಗಮನಕ್ಕೆ ಬಂದಿದೆ. ತಕ್ಷಣ ಸಿಟ್ಟಾದ ಅಧಿಕಾರಿ ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿದ ಪೊಲೀಸರನ್ನು ಲಾಕಪ್ನಲ್ಲಿಡುವಂತೆ ಆದೇಶಿಸಿದ್ದಾರೆ. ಆದ್ರೆ ಪ್ರಕರಣದಲ್ಲಿ ಕೆಳ ಹಂತದ ಅಧಿಕಾರಿಗಳು ಎಸಗಿದ ಬೇಜವಾಬ್ದಾರಿತನ ಏನು ಎನ್ನುವುದು ಸದ್ಯಕ್ಕೆ ತಿಳಿದುಬಂದಿಲ್ಲ.
A superintendent of police in Bihar’s Nawada district allegedly put five of his subordinates inside a lockup for two hours, after he found their work dissatisfactory. The matter came to light after a video went viral on social media, in which five Bihar cops can be seen standing inside a lockup and talking.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm