ಬ್ರೇಕಿಂಗ್ ನ್ಯೂಸ್
12-09-22 04:08 pm HK News Desk ದೇಶ - ವಿದೇಶ
ವಾರಣಾಸಿ, ಸೆ.11: ಗ್ಯಾನ್ವಾಪಿ ಮಸೀದಿ ಆವರಣದ ಹೊರ ಗೋಡೆಗಳಲ್ಲಿ ಇರುವ ಶೃಂಗಾರ ಗೌರಿ ಮೂರ್ತಿಗಳ ಪೂಜೆಗೆ ಅನುಮತಿ ನೀಡಬೇಕೆಂದು ಕೋರಿ ಐವರು ಹಿಂದೂ ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ವಾರಣಾಸಿ ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ. ಈ ಮೂಲಕ ಹಿಂದೂಗಳ ಬೇಡಿಕೆಗೆ ಆರಂಭಿಕ ಗೆಲುವು ಲಭ್ಯವಾಗಿದೆ.
ವಾರಣಾಸಿ ಜಿಲ್ಲಾ ನ್ಯಾಯಾಧೀಶ ಎ. ಕೆ. ವಿಶ್ವೇಶ ಅವರು 1991ರ ಪೂಜಾ ಸ್ಥಳ ಕಾಯ್ದೆ ಇಲ್ಲಿ ಅನ್ವಯ ಆಗೋದಿಲ್ಲ ಎಂದಿದ್ದಾರೆ. ಈ ಮೂಲಕ, ಮುಸ್ಲಿ ಅರ್ಜಿದಾರರಿಗೆ ಭಾರೀ ಹಿನ್ನೆಡೆಯಾಗಿದೆ. ಹಿಂದೂ ಅರ್ಜಿದಾರರ ಅರ್ಜಿಯನ್ನು ವಜಾಗೊಳಿಸುವಂತೆ ಮುಸ್ಲಿಂ ಅರ್ಜಿದಾರರು ಮನವಿ ಮಾಡಿದ್ದರು. ಆದ್ರೆ, ನ್ಯಾಯಾಲಯ ಹಿಂದೂಗಳ ಪರ ತೀರ್ಪು ನೀಡಿದೆ. ಮುಸ್ಲಿಮರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ.

ಏನಿದು ಪ್ರಕರಣ? ;
ಗ್ಯಾನ್ವಾಪಿ ಮಸೀದಿಯಲ್ಲಿ ಇರುವ ಶೃಂಗಾರ ಗೌರಿ ಪೂಜೆಗೆ ಅನುಮತಿ ನೀಡುವಂತೆ ಐವರು ಹಿಂದೂ ಮಹಿಳೆಯರು ವಾರಣಾಸಿ ಸಿವಿಲ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯ ಗ್ಯಾನ್ವಾಪಿ ಮಸೀದಿಯ ವಿಡಿಯೋ ಸರ್ವೆಗೆ ಆದೇಶ ನೀಡಿತ್ತು. ವಿಡಿಯೋ ಸರ್ವೆ ಸಂದರ್ಭದಲ್ಲಿ ಮಸೀದಿಯ ಬಾವಿಯಲ್ಲಿ ಶಿವಲಿಂಗ ಪತ್ತೆಯಾಗಿತ್ತು. ಆದರೆ, ಶಿವಲಿಂಗವನ್ನು ಕೇವಲ ಕಾರಂಜಿ ಎಂದು ಮುಸ್ಲಿಂ ಪರ ವಕೀಲರು ವಾದಿಸಿದ್ದರು. ಅಷ್ಟೇ ಅಲ್ಲ, 1991ರ ಪೂಜಾ ಸ್ಥಳ ಕಾಯ್ದೆ ಅನ್ವಯ ಮಹಿಳೆಯರ ಅರ್ಜಿ ವಜಾಗೊಳಿಸುವಂತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಈ ವಿಚಾರವಾಗಿ ಸಿವಿಲ್ ಕೋರ್ಟ್ನಲ್ಲಿ ವಿಚಾರಣೆ ಬೇಡ, ವಾರಣಾಸಿ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿ ಎಂದು ನಿರ್ದೇಶನ ನೀಡಿತ್ತು. ಮೊದಲಿಗೆ ನ್ಯಾಯಾಲಯವು ಈ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಬೇಕೇ? ಬೇಡವೇ ಎಂಬ ಅರ್ಜಿಯನ್ನು ಇತ್ಯರ್ಥಪಡಿಸಿದೆ. ಹಿಂದೂ ಅರ್ಜಿದಾರ ಮಹಿಳೆಯರ ಅರ್ಜಿಯನ್ನು ನ್ಯಾಯಾಲಯದಲ್ಲಿ ವಿಚಾರಣೆಗೆ ಸ್ವೀಕರಿಸಲು ತೀರ್ಮಾನಿಸಿದೆ. ಈ ಪ್ರಕರಣ ವಿಚಾರಣೆಗೆ ಅರ್ಹ ಎಂದಿದೆ. ಇದೇ ಸೆಪ್ಟೆಂಬರ್ 22 ರಿಂದ ಅರ್ಜಿ ವಿಚಾರಣೆ ಆರಂಭ ಆಗಲಿದೆ ಎಂದೂ ನ್ಯಾಯಾಲಯ ತಿಳಿಸಿದೆ. ಈ ಮೂಲಕ, ಹಿಂದೂಗಳಿಗೆ ಆರಂಭಿಕ ಗೆಲುವು ಲಭ್ಯವಾಗಿದೆ.
ಈ ನಡುವೆ ಹಿಂದೂ ಪರ ವಕೀಲರು ಗ್ಯಾನ್ವಾಪಿ ಮಸೀದಿಯಲ್ಲಿ ಸಿಕ್ಕಿರುವ ಶಿವಲಿಂಗದ ಕಾರ್ಬನ್ ಡೇಟಿಂಗ್ ಪರೀಕ್ಷೆಗೆ ಒಳಪಡಿಸುವಂತೆ ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅಷ್ಟೇ ಅಲ್ಲ, ಪುರಾತತ್ವ ಸರ್ವೆಗೆ ಆದೇಶಿಸಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸುವುದಾಗಿಯೂ ಹೇಳಿದ್ದಾರೆ.
Varanasi's seniormost judge is expected to decide today whether the court should continue hearing a case filed by five Hindu women seeking the right to worship inside the city's Gyanvapi mosque, located next to the famous Kashi Viswanath temple.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm