ಬ್ರೇಕಿಂಗ್ ನ್ಯೂಸ್
12-09-22 07:08 pm HK News Desk ದೇಶ - ವಿದೇಶ
ನವದೆಹಲಿ, ಸೆ.12: ಕಾಲೇಜು ತರಗತಿಯಲ್ಲಿ ಹಿಜಾಬ್ ನಿಷೇಧಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ 23 ಮೇಲ್ಮನವಿ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟಿನಲ್ಲಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇದೇ ವೇಳೆ, ಅರ್ಜಿದಾರರ ಪರ ವಕೀಲರು ಸಿಕ್ಖರ ಪೇಟಕ್ಕೆ ಅವಕಾಶ ಇರುವಾಗ ಮುಸ್ಲಿಮರ ಹಿಜಾಬ್ ಗೆ ಯಾಕೆ ಅವಕಾಶ ಕೊಡಬಾರದು ಎಂದು ಪ್ರಶ್ನೆ ಮಾಡಿದ್ದಾರೆ.
ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಯೂಸುಫ್ ಮಚ್ಲಾ, ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಮಾಡಿರುವುದು ಮುಸ್ಲಿಂ ಹೆಣ್ಮಕ್ಕಳ ಸಾಂವಿಧಾನಿಕ ಹಕ್ಕನ್ನು ಕಿತ್ತುಕೊಂಡಂತಾಗಿದೆ. ಯಾರೇ ಆಗಲಿ, ತಮ್ಮ ಧರ್ಮದ ಆಶಯದಂತೆ ಜೀವಿಸಲು ಹಕ್ಕು ಹೊಂದಿರುತ್ತಾರೆ. ಕರ್ನಾಟಕ ಸರಕಾರದ ಆದೇಶ ಈ ಹಕ್ಕುಗಳಿಗೆ ಚ್ಯುತಿ ತಂದಿದೆ. ಸರಕಾರದ ಆದೇಶವನ್ನು ಎತ್ತಿಹಿಡಿದಿರುವ ಹೈಕೋರ್ಟ್, ಧರ್ಮದ ಕುರಿತ ಮುಸ್ಲಿಮರ ಭಾವನೆಯನ್ನು, ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತೆ ಮಾಡಿದೆ. ಧಾರ್ಮಿಕ ಆಚರಣೆಯ ಹಕ್ಕನ್ನು ಮೊಟಕುಗೊಳಿಸಿದಂತಾಗಿದೆ ಎಂದು ಹೇಳಿದರು.

ತಲೆಗೆ ಒಂದು ತುಂಡು ಬಟ್ಟೆ ಹಾಕಿಕೊಂಡ ಮಾತ್ರಕ್ಕೆ ನಿರ್ದಿಷ್ಟ ಸಮುದಾಯದ ಶೈಕ್ಷಣಿಕ ಹಕ್ಕುಗಳನ್ನು ಕಿತ್ತುಕೊಳ್ಳಲಾಗದು. ಸಿಕ್ಖರು ಪೇಟ ಹಾಕುವುದನ್ನು ನಾವು ಆಕ್ಷೇಪಿಸುವುದಿಲ್ಲ. ರಾಜಸ್ಥಾನದಲ್ಲಿ ಮಹಿಳೆಯರು ಸೀರೆ ಸೆರಗಿನಲ್ಲಿ ಮುಖ ಮುಚ್ಚಿಕೊಳ್ಳುವ ಫೂಂಗಟ್ ಪದ್ಧತಿಯನ್ನು ನಾವು ಸಂಸ್ಕೃತಿ ಅನ್ನುತ್ತೇನೆ. ಅಮೃತಸರದಲ್ಲಿ ನಾವು ದೇವಾಲಯ ಪ್ರವೇಶಿಸುವಾಗ ತಲೆಗೆ ಬಟ್ಟೆ ಹಾಕ್ಕೊಂಡು ಒಳಗೆ ಹೋಗುತ್ತೇವೆ. ದೇಶದಲ್ಲಿ ಇವೆಲ್ಲ ವೈವಿಧ್ಯಗಳನ್ನು ಒಪ್ಪಿಕೊಂಡಿರುವಾಗ ಹಿಜಾಬನ್ನು ಒಪ್ಪಿಕೊಳ್ಳಲು ಯಾಕೆ ಸಾಧ್ಯವಿಲ್ಲ ಎಂದು ಪ್ರಶ್ನೆ ಮಾಡಿದರು. ಇದೇ ವೇಳೆ, 2017ರಲ್ಲಿ ನ್ಯಾಯಮೂರ್ತಿ ಪುಟ್ಟಸ್ವಾಮಿ ನೀಡಿದ್ದ ಖಾಸಗಿತನ ವೈಯಕ್ತಿಕ ಹಕ್ಕು ಎಂಬ ಆದೇಶವನ್ನು ವಕೀಲರು ಕೋರ್ಟಿನಲ್ಲಿ ಓದಿ ಹೇಳಿದ್ದಾರೆ. ಈಮೂಲಕ ಎಲ್ಲರೂ ಸಮಾನ ಸಮವಸ್ತ್ರ ಧರಿಸಬೇಕೆಂಬ ನಿಮಯದಡಿ ಖಾಸಗಿತನ ಮತ್ತು ವ್ಯಕ್ತಿಯ ಶಿಕ್ಷಣದ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಹೇಳಿದರು.

ನ್ಯಾ.ಹೇಮಂತ್ ಗುಪ್ತಾ ಮತ್ತು ಸುಧಾಂಶು ಅಧಿಕಾರಿ ಅವರುಳ್ಳ ದ್ವಿಸದಸ್ಯ ಪೀಠವು ಈ ಕುರಿತು ಸಲ್ಲಿಸಲಾಗಿರುವ 23 ಅರ್ಜಿಗಳ ವಿಚಾರಣೆ ನಡೆಸುತ್ತಿದೆ. ಇದೇ ವೇಳೆ, ಅರ್ಜಿದಾರರ ಪರವಾಗಿ ಎರಡು ದಿನ ಮತ್ತು ಕರ್ನಾಟಕ ಸರಕಾರದ ಪರವಾಗಿ ಎರಡು ದಿನವನ್ನು ವಾದ ಮಂಡನೆಗೆ ನೀಡಲಾಗಿದ್ದು ಆಮೂಲಕ ಶೀಘ್ರದಲ್ಲೇ ತೀರ್ಪು ನೀಡುವ ಸುಳಿವನ್ನು ನ್ಯಾಯಾಧೀಶರು ನೀಡಿದ್ದಾರೆ. ಸೋಮವಾರ ವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಸೆ.14ಕ್ಕೆ ಮುಂದೂಡಿದ್ದಾರೆ.
The Supreme court adjourned the hearing on the batch of petitions challenging the Karnataka High Court’s verdict upholding the decision of the state government’s order on the ban on Hijab in educational institutions of the state for the fourth day. The matter will be taken up by the top court on September 14 i.e. Wednesday at 11.30 am.The apex court, while hearing the matter on September 7, had adjourned the case till September 12.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm