ಬ್ರೇಕಿಂಗ್ ನ್ಯೂಸ್
13-09-22 10:33 pm HK News Desk ದೇಶ - ವಿದೇಶ
ಅಹ್ಮದಾಬಾದ್, ಸೆ.13 : ಆಮ್ ಆದ್ಮಿ ಪಕ್ಷ ಗುಜರಾತ್ನಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಭ್ರಷ್ಟಾಚಾರ ರಹಿತ ಆಡಳಿತ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ಈ ವರ್ಷದ ಅಂತ್ಯದಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಪ್ರಚಾರ ನಡೆಸುತ್ತಿರುವ ಅವರು, ಮಂಗಳವಾರ ಅಹ್ಮದಾಬಾದ್ನಲ್ಲಿ ಸುದ್ದಿಗೋಷ್ಠಿ ನಡೆಸಿದರು. ರಾಜ್ಯದಲ್ಲಿ ಎಎಪಿ ಸರ್ಕಾರ ರಚಿಸಿದರೆ ಮುಖ್ಯಮಂತ್ರಿ, ಸಚಿವರು, ಶಾಸಕರು, ವಿರೋಧ ಪಕ್ಷದ ಶಾಸಕರು ಮತ್ತು ಸರ್ಕಾರಿ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಪಾಲ್ಗೊಳ್ಳುವುದಿಲ್ಲ. ಭ್ರಷ್ಟಾಚಾರ ನಡೆಸಿ ಸಿಕ್ಕಿಬಿದ್ದವರನ್ನು ಜೈಲಿಗೆ ಕಳಿಸಲಾಗುವುದು ಎಂದು ಪಕ್ಷವು ಭರವಸೆ ನೀಡುತ್ತದೆ ಎಂದರು.
ಅಹ್ಮದಾಬಾದ್ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಗುಜರಾತ್ನಲ್ಲಿ ನಾನು ಯಾರನ್ನೇ ಭೇಟಿಯಾದರೂ ಅವರು ನನಗೆ ಮೊದಲು ಹೇಳುವುದು ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು. ಸರ್ಕಾರದಿಂದ ಕೆಲಸ ಮಾಡಿಸಿಕೊಳ್ಳಬೇಕಾದರೆ ಲಂಚ ನೀಡಲೇಬೇಕಾದ ಪರಿಸ್ಥಿತಿ ಇದೆ. ಆಡಳಿತದ ಕೆಳ ಹಂತಗಳಲ್ಲಿ ಭ್ರಷ್ಟಾಚಾರವಿದೆ. ಮೇಲಿನ ಹಂತಗಳಲ್ಲಿ ಹಗರಣಗಳು ನಡೆದಿವೆ. ಇದರ ವಿರುದ್ಧ ಮಾತನಾಡಿದವರನ್ನು ಬೆದರಿಸಲಾಗುತ್ತದೆ' ಎಂದು ಹೇಳಿದರು.
ತೆರಿಗೆ ರೂಪದಲ್ಲಿ ಸಾರ್ವಜನಿಕರಿಂದ ಸಂಗ್ರಹವಾಗುವ ಪ್ರತಿಯೊಂದು ರೂಪಾಯಿಯೂ ಗುಜರಾತ್ ಜನರ ಸೇವೆಗಾಗಿ ವಿನಿಯೋಗವಾಗುತ್ತದೆ. ಗುಜರಾತ್ನಲ್ಲಿ ಶಾಸಕರು ಮತ್ತು ಸರ್ಕಾರಿ ಅಧಿಕಾರಿಗಳು ಸದ್ಯ ನಡೆಸುತ್ತಿರುವ ಅಕ್ರಮ ವ್ಯವಹಾರಗಳನ್ನು ತಡೆಯಲಾಗುವುದು. ಈಗಿನ ರಾಜ್ಯ ಸರ್ಕಾರ ನಡೆಸಿರುವ ಹಗರಣಗಳ ತನಿಖೆ ನಡೆಸಿ, ಅಕ್ರಮವಾಗಿ ಸಂಗ್ರಹವಾಗಿರುವ ಹಣವನ್ನು ಗುಣಮಟ್ಟದ ಶಿಕ್ಷಣ, ಉಚಿತ ವಿದ್ಯುತ್ನಂಥ ಸಾರ್ವಜನಿಕರ ಸೇವೆಗೆ ವಿನಿಯೋಗ ಮಾಡಲಾಗುವುದು ಎಂದರು.
ದೆಹಲಿ ಮಾದರಿಯಲ್ಲೇ ಸರ್ಕಾರದ ಹಲವಾರು ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕೆಲಸವನ್ನು ಮಾಡಲಾಗುವುದು ಎಂದವರು ಹೇಳಿದರು.
Delhi Chief Minister Arvind Kejriwal on Tuesday promised to provide the people of Gujarat a “corruption-free" government if the Aam Aadmi Party comes to power in the state currently governed by the BJP. The AAP’s national convener announced that if his party voted to power in Gujarat, where the Assembly elections are due later this year, it will ensure its chief minister, ministers as well as lawmakers from other parties and government officers do not indulge in corruption and are jailed if caught doing so.
19-04-24 11:17 pm
HK NEWS
Actress Priya Savadi, Hubballi Neha Murder: ಅ...
19-04-24 07:58 pm
Hubbali Neha Murder, CM Siddaramaiah: ವೈಯಕ್ತಿ...
19-04-24 04:27 pm
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 10:11 pm
Mangalore Correspondent
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm