ಬ್ರೇಕಿಂಗ್ ನ್ಯೂಸ್
13-09-22 10:43 pm HK News Desk ದೇಶ - ವಿದೇಶ
ದೋಹಾ, ಸೆ.13 : ಕತಾರ್ನಲ್ಲಿ ನೆಲೆಸಿದ್ದ ಕೇರಳ ಮೂಲದ ದಂಪತಿಯ 4 ವರ್ಷದ ಪುಟ್ಟ ಮಗಳು ಶಾಲಾ ಬಸ್ನಲ್ಲಿ ಉಸಿರು ಕಟ್ಟಿ ಸಾವನ್ನಪ್ಪಿದ ಘಟನೆ ನಡೆದಿದೆ. ಬರೋಬ್ಬರಿ 4 ಗಂಟೆಗಳ ಕಾಲ ಬಾಲಕಿ ಬಸ್ ಒಳಗೆ ಸಿಲುಕಿ, ಉಸಿರಾಡಲಾಗದೇ ಶಾಲಾ ಬಸ್ ಒಳಗೇ ಸಾವನ್ನಪ್ಪಿದ್ದಾಳೆ.
ಹುಟ್ಟುಹಬ್ಬದಂದೇ ಸಾವನ್ನಪ್ಪಿದ ಬಾಲಕಿ
ಕೇರಳ ಮೂಲದ ಅಭಿಲಾಷ್ ಜಾಕೋಬ್ ಮತ್ತು ಸೌಮ್ಯಾ ದಂಪತಿಯ ಎರಡನೇ ಮಗಳು ಮಿನ್ಸಾ ಮರಿಯಮ್ ಜಾಕೋಬ್ ಎಂಬ ಪುಟ್ಟ ಬಾಲಕಿಯೇ ಮೃತ ದುರ್ದೈವಿ. ನಾಲ್ಕು ವರ್ಷದ ಮಿನ್ಸಾ ಮರಿಯಮ್ ಜಾಕೋಬ್ ತನ್ನ ಹುಟ್ಟುಹಬ್ಬದಂದು ಸೆಪ್ಟೆಂಬರ್ 11 ರ ಭಾನುವಾರ ಶಾಲಾ ಬಸ್ನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮಿನ್ಸಾ ವಕ್ರಾದಲ್ಲಿ ಶಿಶು ವಿಹಾರದಲ್ಲಿ ಓದುತ್ತಿದ್ದಳು. ಅದೇ ಶಾಲೆಯ ಬಸ್ನಲ್ಲಿಯೇ ಬಂಧಿಯಾಗಿ ಬಾಲಕಿ ಮೃತಪಟ್ಟಿದ್ದಾಳೆ.
ಸ್ಕೂಲ್ ಬಸ್ಸಿನಲ್ಲಿ ನಿದ್ದೆ ಮಾಡುತ್ತಿದ್ದ ಬಾಲಕಿ
ಮಿನ್ಸಾ ಮರಿಯಮ್ ಜಾಕೋಬ್ ಭಾನುವಾರ ಬೆಳಗ್ಗೆ ತನ್ನ ಸ್ಕೂಲ್ ಬಸ್ನಲ್ಲಿ ಶಾಲೆಗೆ ಹೋಗಿದ್ದಳು. ಹಿಂದೆ ಕುಳಿತಿದ್ದ ಆಕೆ ದಾರಿ ಮಧ್ಯೆಯೇ ಬಸ್ಸಿನಲ್ಲಿ ನಿದ್ದೆ ಮಾಡಿದ್ದಳು. ಆದರೆ ಆಕೆ ನಿದ್ದೆ ಮಾಡಿದ್ದನ್ನು ಶಾಲಾ ಬಸ್ ಸಿಬ್ಬಂದಿ ಯಾರೂ ಗಮನಿಸಲಿಲ್ಲ. ಹೀಗಾಗಿ ಮಕ್ಕಳನ್ನು ಶಾಲೆಯಲ್ಲಿ ಇಳಿಸಿದ ಸಿಬ್ಬಂದಿ ಶಾಲಾ ವಾಹನವನ್ನು ಬಂದ್ ಮಾಡಿ ಬಿಟ್ಟು ಹೋಗಿದ್ದಾರೆ.
ಮಧ್ಯಾಹ್ನ ತರಗತಿ ಮುಗಿದ ನಂತರ ಬಸ್ಸಿನ ಚಾಲಕ ಮತ್ತು ಕಂಡಕ್ಟರ್ ಹಿಂತಿರುಗಿದಾಗ, ಬಸ್ ಒಳಗೆ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಆಕೆಯನ್ನು ಉಳಿಸಲಾಗಲಿಲ್ಲ. ಬಸ್ಸಿನ ಕಿಟಕಿ, ಬಾಗಿಲುಗಳನ್ನು ಕ್ಲೋಸ್ ಮಾಡಿದ್ದರಿಂದ ಬಾಲಕಿಗೆ ಉಸಿರಾಡಲು ಸಾಧ್ಯವಾಗಿಲ್ಲ. ಕತಾರ್ನಲ್ಲಿ ಗರಿಷ್ಠ ತಾಪಮಾನವು 36ರಿಂದ 43 ಡಿಗ್ರಿ ಇದೆ. ಇದರಿಂದಾಗಿ ಬಾಲಕಿ ಉಸಿರು ಕಟ್ಟಿ ಸಾವು ಕಂಡಿದ್ದಾಳೆ ಎನ್ನಲಾಗಿದೆ.
A four-year-old girl Kerala whose family is based in Doha died on Sunday after she was left locked inside her school bus for hours at Al Wakrah in Qatar. Apparently, the little girl had dozed off on her way to her kindergarten. The bus staff did not realise that the girl had fallen asleep inside the bus and they locked the bus after leaving it in the parking lot and left.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 09:15 pm
HK News Desk
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am
ಶಿವಮೊಗ್ಗದಿಂದ ಕೇರಳಕ್ಕೆ ಗೋಸಾಗಣೆ ; ಮಂಗಳೂರಿನಲ್ಲಿ...
22-02-26 10:43 pm