ಬ್ರೇಕಿಂಗ್ ನ್ಯೂಸ್
08-10-20 04:09 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್. 08 : ಕೊರೊನಾ ಸೋಂಕಿನಿಂದಾಗಿ ಲಾಕ್ಡೌನ್ ಮಾಡಿದ್ದು ಜಗತ್ತಿನಾದ್ಯಂತ ಜನರ ಸಂಕಷ್ಟಕ್ಕೂ ಕಾರಣವಾಗಿತ್ತು. ಬಹುತೇಕ ದೇಶಗಳಲ್ಲಿ ಜನಸಾಮಾನ್ಯರು ಉದ್ಯೋಗ ಇಲ್ಲದೆ, ಊಟಕ್ಕೂ ಕಷ್ಟಪಡುವ ಸ್ಥಿತಿ ಎದುರಾಗಿತ್ತು. ಇದೇ ಹಿನ್ನೆಲೆಯಲ್ಲಿ ಈಗ ವರ್ಲ್ಡ್ ಬ್ಯಾಂಕ್ ಎಚ್ಚರಿಕೆ ವರದಿ ನೀಡಿದ್ದು, ಕೊರೊನಾ ಕಾರಣದಿಂದ ಲಕ್ಷಾಂತರ ಮಂದಿ ಮಧ್ಯಮ ವರ್ಗದ ಜನರು ಬಡತನ ರೇಖೆಗಿಂತ ಕೆಳಗೆ ಬರಲಿದ್ದಾರೆ. ಇದರಿಂದ ಜಗತ್ತಿನಲ್ಲಿ ಹೊಸ ರೀತಿಯ ಬಡವರು ಸೃಷ್ಟಿಯಾಗಲಿದ್ದಾರೆ ಎಂದು ಎಚ್ಚರಿಸಿದೆ.

ಕೊರೊನಾ ಸೋಂಕಿನ ಕಾರಣದಿಂದಾಗಿ ಈ ವರ್ಷ ಜಗತ್ತಿನಲ್ಲಿ 88ರಿಂದ 115 ಮಿಲಿಯನ್ ಜನರು ಬಡತನದಿಂದ ಕಷ್ಟಕ್ಕೆ ಸಿಲುಕಲಿದ್ದಾರೆ. ಈ ಮಂದಿ ದಿನಕ್ಕೆ 1.90 ಡಾಲರ್ ಗಿಂತ ಹೆಚ್ಚು ಖರ್ಚು ಮಾಡಲು ಸಾಧ್ಯವಾಗಲ್ಲ ಎಂದು ವಿಶ್ವ ಬ್ಯಾಂಕ್ ಪ್ರಕಟಿಸಿರುವ ವರದಿ ತಿಳಿಸಿದೆ.
ಈ ಪೈಕಿ ದಕ್ಷಿಣ ಏಷ್ಯಾ ಮತ್ತು ಆಫ್ರಿಕಾ ಖಂಡದ ಸೋಂಕು ಪೀಡಿತ ದೇಶಗಳಲ್ಲಿ ಜನರು ಹೆಚ್ಚು ಸಂಕಷ್ಟಕ್ಕೀಡಾಗಲಿದ್ದಾರೆ. ಮೇಲೆ ಹೇಳಿದ ಅಂದಾಜು ಸಂಖ್ಯೆಯಲ್ಲಿ 80 ಶೇಕಡಾ ಜನ ಬಡತನದಿಂದ ನಲುಗಲಿದ್ದಾರೆ ಎಂದು ವರದಿಯಲ್ಲಿ ಹೇಳಿದೆ. ಈ ದೇಶಗಳ ಬಹುತೇಕ ಜನರು ಕಳೆದ ಎರಡು ದಶಕದಲ್ಲಿ ಸ್ವಲ್ಪಮಟ್ಟಿಗೆ ಬಡತನ ಸಂಕಷ್ಟದಿಂದ ಮೇಲೆ ಬಂದಿದ್ದರು. ವಿಶ್ವರಾಷ್ಟ್ರಗಳ ಪ್ರಗತಿಯ ನಡುವೆ ಈ ಭಾಗದ ಬಡ ರಾಷ್ಟ್ರಗಳು ಕೂಡ ಸ್ವಲ್ಪಮಟ್ಟಿಗೆ ಚೇತರಿಸಿಕೊಂಡಿದ್ದವು. ಆದರೆ, ಈಗ ಕೊರೊನಾ ಸೋಂಕಿನಿಂದಾಗಿ ಅಲ್ಲಿನ ಬಡಜನರು ಮತ್ತಷ್ಟು ಕಷ್ಟಕ್ಕೆ ಸಿಲುಕಲಿದ್ದಾರೆ. ಜನ ಇಷ್ಟೊಂದು ಸಂಕಷ್ಟಕ್ಕೀಡಾಗುತ್ತಿರುವುದು ಕಳೆದ ಎರಡು ದಶಕದಲ್ಲಿ ಇದೇ ಮೊದಲಿರಬಹುದು ಎಂದು ಅಂದಾಜು ಮಾಡಿದೆ.

ಕೋವಿಡ್ 19 ಮತ್ತು ಅದರಿಂದಾಗುವ ಆರ್ಥಿಕ ಸಂಕಷ್ಟಗಳು ಹಾಗೂ ಅಗ್ರರಾಷ್ಟ್ರಗಳ ಸಂಘರ್ಷದ ವಾತಾವರಣದಿಂದಾಗಿ 1998ರ ಬಳಿಕ ಮೊದಲ ಬಾರಿಗೆ ಕೆಲವು ರಾಷ್ಟ್ರಗಳಿಗೆ ದೊಡ್ಡ ಮಟ್ಟಿನ ಆಪತ್ತು ಎದುರಾಗಿದೆ. ಇದರಿಂದ ಎರಡು ದಶಕದ ಬಳಿಕ ಜಗತ್ತಿನ ಬಡತನದ ಮೂಲಾಂಶಗಳು ಹೆಚ್ಚುತ್ತಿವೆ. ಹೀಗಿದ್ದರೂ, 2021ರ ಬಳಿಕ ಆರ್ಥಿಕ ಪ್ರಗತಿ ಐತಿಹಾಸಿಕ ಎನ್ನುವಂತೆ ಹೆಚ್ಚಲಿದೆ ಎನ್ನುವ ವರದಿಯನ್ನು ವಿಶ್ವಸಂಸ್ಥೆ ಹೇಳಿಕೊಂಡಿದೆ. ಕೊರೊನೋತ್ತರ ಸಂದರ್ಭದಲ್ಲಿ ಆಯಾ ದೇಶಗಳು ತಮ್ಮ ಜನರ ಆರ್ಥಿಕ ಚೇತರಿಕೆಗೆ ಗಮನಾರ್ಹ ಕೊಡುಗೆ ನೀಡಬೇಕಾಗಿದೆ. ಕಾರ್ಮಿಕರಿಗೆ ಉದ್ಯೋಗ ಮತ್ತು ಕೌಶಲ್ಯ ಇದ್ದವರಿಗೆ ಹೊಸ ಬಿಸಿನೆಸ್ ಅವಕಾಶಗಳನ್ನು ತೆರೆಸಬೇಕಾಗಿದೆ ಎಂದು ಸಲಹೆ ಮಾಡಿದೆ. ಬಡತನದ ಬೇಗೆ ನಗರ ಭಾಗದಲ್ಲಿ ಹೆಚ್ಚಾಗಿ ಬಾಧಿತವಾಗಲಿದೆ. ಕೊರೊನಾ ಕಾರಣದಿಂದ ಅತಿ ಹೆಚ್ಚು ನಗರ ಭಾಗದ ಜನ ಉದ್ಯೋಗ ಕಳಕೊಂಡಿದ್ದಾರೆ. ಇದರಿಂದಾಗಿ ಅಲ್ಲಿ ಮತ್ತೆ ಚೇತರಿಕೆ ಕಾಣುವುದು ನಿಧಾನವಾಗಿರುತ್ತದೆ ಎಂದು ವರದಿಯಲ್ಲಿ ಹೇಳಿದೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm