ಬ್ರೇಕಿಂಗ್ ನ್ಯೂಸ್
19-09-22 01:41 pm HK News Desk ದೇಶ - ವಿದೇಶ
ಮುಂಬೈ, ಸೆ.19: ಭಾರತೀಯ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಮೆರೆದಿರುವ 'ಜಾನ್ಸನ್ ಆಂಡ್ ಜಾನ್ಸನ್' ಬೇಬಿ ಪೌಡರ್ಗೆ ಮಹಾರಾಷ್ಟ್ರ ಸರ್ಕಾರ ನಿಷೇಧ ಹೇರಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದಾಗಿ ಮಹಾರಾಷ್ಟ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಜಾನ್ಸನ್ ಆಂಡ್ ಜಾನ್ಸನ್ ಬೇಬಿ ಪೌಡರ್ನಿಂದ ಮಕ್ಕಳ ಚರ್ಮದ ಮೇಲಾಗುವ ಪರಿಣಾಮಗಳ ಬಗ್ಗೆ ದೂರುಗಳು ಕೇಳಿ ಬಂದಿತ್ತು. ಹೀಗಾಗಿ ಅವುಗಳ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಪ್ರಯೋಗಾಲಯದಿಂದ ಬಂದ ಫಲಿತಾಂಶದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕೋಲ್ಕತ್ತಾದ ಕೇಂದ್ರ ಔಷಧೀಯ ಪ್ರಯೋಗಾಲಯದ ವರದಿ ಕೂಡ, ಜಾನ್ಸನ್ ಆಂಡ್ ಜಾನ್ಸನ್ ಬೇಬಿ ಪೌಡರ್ ಶಿಶುಗಳ ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುವ ವರದಿ ನೀಡಿತ್ತು. ಇದಾದ ಬಳಿಕ ಮಹಾರಾಷ್ಟ್ರ ಸರ್ಕಾರ ಇಂಥಹದ್ದೊಂದು ನಿರ್ಧಾರ ತೆಗೆದುಕೊಂಡಿದೆ.
ನಿಷೇಧ ಹೇರುವುದಕ್ಕೂ ಮುನ್ನ ಮಹಾರಾಷ್ಟ್ರ ಆಹಾರ ಹಾಗೂ ಔಷಧ ಆಡಳಿತವು ಜಾನ್ಸನ್ ಆಂಡ್ ಜಾನ್ಸನ್ ಬೇಬಿ ಪೌಡರ್ನ ಸ್ಯಾಂಪಲ್ಗಳನ್ನು ಪುಣೆ ಹಾಗೂ ನಾಸಿಕ್ನಲ್ಲಿರುವ ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷೆಗೆ ಒಳಪಡಿಸಿತ್ತು. ಅಲ್ಲಿಂದ ಬಂದ ವರದಿಯನ್ವಯ ಇದೀಗ ಲೈಸೆನ್ಸ್ ರದ್ದು ಮಾಡುವ ನಿರ್ಧಾರ ಕೈಗೊಂಡಿದೆ.
ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾದ ಸ್ಯಾಂಪಲ್ಗಳು 'ಪ್ರಾಮಾಣಿತ ಗುಣಮಟ್ಟ'ದಲ್ಲಿ ಇಲ್ಲ. IS 5339:2004 ಹೇಳಲಾದ ಗುಣಮಟ್ಟದಲ್ಲಿ ಇಲ್ಲ ಎಂದು ಪರೀಕ್ಷೆಯಲ್ಲಿ ಗೊತ್ತಾಗಿದೆ.
ಹೀಗಾಗಿ ಡ್ರಗ್ಸ್ ಕಾಸ್ಮೆಟಿಕ್ಸ್ ಕಾಯ್ದೆ 1940 ರ ಅನ್ವಯ ಜಾನ್ಸನ್ ಆಂಡ್ ಜಾನ್ಸನ್ ಕಂಪನಿಗೆ ಮಹಾರಾಷ್ಟ್ರ ಆಹಾರ ಹಾಗೂ ಔಷಧ ಆಡಳಿತ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಮಾರುಕಟ್ಟೆಯಲ್ಲಿ ಇರುವ ಉತ್ಪನ್ನಗಳನ್ನು ಹಿಂಪಡೆಯಬೇಕು ಎಂದು ನಿರ್ದೇಶನ ನೀಡಿದೆ.
ಇನ್ನು ಮಹಾರಾಷ್ಟ್ರ ಆಹಾರ ಹಾಗೂ ಔಷಧ ಆಡಳಿತ ನೀಡಿರುವ ನೊಟಿಸ್ಗೆ ಕಂಪನಿ ಪ್ರತಿಕ್ರಿಯೆ ನೀಡಿದ್ದು, ಇದರ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದಾಗಿ ತಿಳಿಸಿದೆ.
Maharashtra's Food and Drugs Administration (FDA) on Friday cancelled the baby powder manufacturing licence of Johnson & Johnson Pvt Ltd "in the interest of public health at large". In a release, the state government agency said the company's product, Johnson's Baby Powder, may affect the skin of newborn babies.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm