ಬ್ರೇಕಿಂಗ್ ನ್ಯೂಸ್
19-09-22 05:21 pm HK News Desk ದೇಶ - ವಿದೇಶ
ಲಕ್ನೋ, ಸೆ.19: ದೇಶದಲ್ಲಿರುವ ಎಲ್ಲ ಮದ್ರಸಗಳನ್ನು ಗನ್ ಪೌಡರ್ ಇಟ್ಟು ಸ್ಫೋಟಿಸಬೇಕು. ಮದ್ರಸದಲ್ಲಿರುವ ಮಕ್ಕಳ ತಲೆಗೆ ಖುರಾನ್ ಹೆಸರಿನ ವೈರಸ್ ತುಂಬುತ್ತಿದ್ದಾರೆ. ಅವರ ತಲೆಯಲ್ಲಿ ತುಂಬಿರುವ ವೈರಸ್ ಕಿತ್ತೊಗೆಯಲು ಮಕ್ಕಳನ್ನು ನಿಗಾ ಕೇಂದ್ರಕ್ಕೆ ಹಾಕಬೇಕು ಎಂದು ವಿವಾದಿತ ಯತಿ ನರಸಿಂಗಾನಂದ ಸರಸ್ವತಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ನರಸಿಂಗಾನಂದ ವಿರುದ್ಧ ಆಲಿಗಢ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಆಲಿಗಢದಲ್ಲಿ ಹಿಂದು ಮಹಾಸಭಾ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಯತಿ ನರಸಿಂಗಾನಂದ ಈ ಹೇಳಿಕೆ ನೀಡಿದ್ದಾರೆ. ಚೀನಾದಲ್ಲಿ ಯಾವ ರೀತಿ ಮದ್ರಸಾಗಳನ್ನು ಬಾಂಬ್ ಇಟ್ಟು ಸ್ಫೋಟ ಮಾಡಲಾಗುತ್ತಿದೆಯೋ ಅದೇ ರೀತಿ ತೆರವು ಮಾಡಬೇಕು. ಅಲ್ಲದೆ ಆಲಿಗಢ ಮುಸ್ಲಿಂ ವಿವಿಯನ್ನೂ ಮದ್ರಸಾಗಳ ರೀತಿಯಲ್ಲೇ ಸ್ಫೋಟಿಸಬೇಕು. ಅಲ್ಲಿ ಕಲಿಯುವ ಮಕ್ಕಳನ್ನು ನಿಗಾ ಕೇಂದ್ರಕ್ಕೆ ಕಳುಹಿಸಿ ಅಲ್ಲಿ ಅವರ ಮೆದುಳನ್ನು ಪರೀಕ್ಷೆಗೊಡ್ಡಬೇಕು. ತಲೆಯಲ್ಲಿ ತುಂಬಿರುವ ವೈರಸನ್ನು ತೆಗೆಸಬೇಕು ಎಂದು ಹೇಳಿದ್ದಾರೆ.

ಕಳೆದ ಬಾರಿ ಹರಿದ್ವಾರದಲ್ಲಿ ನರಸಿಂಗಾನಂದ ಇದೇ ರೀತಿ ದ್ವೇಷದ ಹೇಳಿಕೆ ನೀಡಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದರು. ಇತ್ತೀಚೆಗೆ ಗಾಂಧೀಜಿ ಬಗ್ಗೆಯೂ ಅವಹೇಳನಕಾರಿ ಮಾತನಾಡಿದ್ದರು. ದೇಶ ವಿಭಜನೆ ಸಂದರ್ಭದಲ್ಲಿ ಒಂದು ಕೋಟಿ ಹಿಂದುಗಳು ಕೊಲ್ಲಲ್ಪಟ್ಟ ಘಟನೆಗೆ ಮಹಾತ್ಮ ಗಾಂಧಿಯೇ ಹೊಣೆಗಾರ ಎಂದು ಹೇಳಿಕೆ ನೀಡಿ ವಿವಾದಕ್ಕೊಳಗಾಗಿದ್ದರು. ಆ ಬಗ್ಗೆಯೂ ಪೊಲೀಸರು ಕೇಸು ದಾಖಲಿಸಿದ್ದಾರೆ.

ಆಲಿಗಢ್ ಕಾರ್ಯಕ್ರಮದಲ್ಲಿ ಸ್ವಾಮೀಜಿ, ಭಾರತ್ ಜೋಡೊ ನಡೆಸುತ್ತಿರುವ ರಾಹುಲ್ ಗಾಂಧಿಯ ಬಗ್ಗೆಯೂ ಟೀಕಿಸಿದ್ದು ಆತನೊಬ್ಬ ಜೋಕರ್ ಎಂದಿದ್ದಾರೆ. ರಾಹುಲ್ ಗಾಂಧಿಗೆ ಉತ್ತರ ಪ್ರದೇಶದಲ್ಲಿ ಗೆಲ್ಲಲಿಕ್ಕಾಗದೆ ಕೇರಳದ ವಯನಾಡಿಗೆ ತೆರಳಿದ್ದಾರೆ. ಆತ ಜಿಹಾದಿಗಳ ಜೊತೆ ಸೇರಿ ಯಾತ್ರೆ ನಡೆಸುತ್ತಿದ್ದಾರೆ ಎಂದು ಹೇಳಿದ್ದರು. ರಾಹುಲ್ ಗಾಂಧಿ ಭಾರತವನ್ನು ಜೋಡಿಸಬೇಕೆಂದಿದ್ದರೆ ಮೊದಲು ಪಾಕಿಸ್ಥಾನ ಮತ್ತು ಬಾಂಗ್ಲಾಕ್ಕೆ ಹೋಗಿ ಅದನ್ನು ಭಾರತದ ಜೊತೆ ಜೋಡಿಸಬೇಕು. ಅದನ್ನು ವಿಭಜಿಸಿದ್ದು ಮಹಾತ್ಮ ಗಾಂಧಿ. ಅವನ್ನು ಮತ್ತೆ ಜೋಡಿಸಿದರೆ ನಾವೆಲ್ಲ ರಾಹುಲ್ ಗಾಂಧಿ ಜೊತೆ ಕೈಜೋಡಿಸುತ್ತೇವೆ ಎಂದು ಹೇಳಿದ್ದಾರೆ.
Controversial preacher Yati Narsinghanand Saraswati has been booked for a statement where he allegedly called for the demolition of madrasas and the Aligarh Muslim University using "gunpowder".
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm