ಬ್ರೇಕಿಂಗ್ ನ್ಯೂಸ್
19-09-22 05:21 pm HK News Desk ದೇಶ - ವಿದೇಶ
ಲಕ್ನೋ, ಸೆ.19: ದೇಶದಲ್ಲಿರುವ ಎಲ್ಲ ಮದ್ರಸಗಳನ್ನು ಗನ್ ಪೌಡರ್ ಇಟ್ಟು ಸ್ಫೋಟಿಸಬೇಕು. ಮದ್ರಸದಲ್ಲಿರುವ ಮಕ್ಕಳ ತಲೆಗೆ ಖುರಾನ್ ಹೆಸರಿನ ವೈರಸ್ ತುಂಬುತ್ತಿದ್ದಾರೆ. ಅವರ ತಲೆಯಲ್ಲಿ ತುಂಬಿರುವ ವೈರಸ್ ಕಿತ್ತೊಗೆಯಲು ಮಕ್ಕಳನ್ನು ನಿಗಾ ಕೇಂದ್ರಕ್ಕೆ ಹಾಕಬೇಕು ಎಂದು ವಿವಾದಿತ ಯತಿ ನರಸಿಂಗಾನಂದ ಸರಸ್ವತಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ನರಸಿಂಗಾನಂದ ವಿರುದ್ಧ ಆಲಿಗಢ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಆಲಿಗಢದಲ್ಲಿ ಹಿಂದು ಮಹಾಸಭಾ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಯತಿ ನರಸಿಂಗಾನಂದ ಈ ಹೇಳಿಕೆ ನೀಡಿದ್ದಾರೆ. ಚೀನಾದಲ್ಲಿ ಯಾವ ರೀತಿ ಮದ್ರಸಾಗಳನ್ನು ಬಾಂಬ್ ಇಟ್ಟು ಸ್ಫೋಟ ಮಾಡಲಾಗುತ್ತಿದೆಯೋ ಅದೇ ರೀತಿ ತೆರವು ಮಾಡಬೇಕು. ಅಲ್ಲದೆ ಆಲಿಗಢ ಮುಸ್ಲಿಂ ವಿವಿಯನ್ನೂ ಮದ್ರಸಾಗಳ ರೀತಿಯಲ್ಲೇ ಸ್ಫೋಟಿಸಬೇಕು. ಅಲ್ಲಿ ಕಲಿಯುವ ಮಕ್ಕಳನ್ನು ನಿಗಾ ಕೇಂದ್ರಕ್ಕೆ ಕಳುಹಿಸಿ ಅಲ್ಲಿ ಅವರ ಮೆದುಳನ್ನು ಪರೀಕ್ಷೆಗೊಡ್ಡಬೇಕು. ತಲೆಯಲ್ಲಿ ತುಂಬಿರುವ ವೈರಸನ್ನು ತೆಗೆಸಬೇಕು ಎಂದು ಹೇಳಿದ್ದಾರೆ.

ಕಳೆದ ಬಾರಿ ಹರಿದ್ವಾರದಲ್ಲಿ ನರಸಿಂಗಾನಂದ ಇದೇ ರೀತಿ ದ್ವೇಷದ ಹೇಳಿಕೆ ನೀಡಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದರು. ಇತ್ತೀಚೆಗೆ ಗಾಂಧೀಜಿ ಬಗ್ಗೆಯೂ ಅವಹೇಳನಕಾರಿ ಮಾತನಾಡಿದ್ದರು. ದೇಶ ವಿಭಜನೆ ಸಂದರ್ಭದಲ್ಲಿ ಒಂದು ಕೋಟಿ ಹಿಂದುಗಳು ಕೊಲ್ಲಲ್ಪಟ್ಟ ಘಟನೆಗೆ ಮಹಾತ್ಮ ಗಾಂಧಿಯೇ ಹೊಣೆಗಾರ ಎಂದು ಹೇಳಿಕೆ ನೀಡಿ ವಿವಾದಕ್ಕೊಳಗಾಗಿದ್ದರು. ಆ ಬಗ್ಗೆಯೂ ಪೊಲೀಸರು ಕೇಸು ದಾಖಲಿಸಿದ್ದಾರೆ.

ಆಲಿಗಢ್ ಕಾರ್ಯಕ್ರಮದಲ್ಲಿ ಸ್ವಾಮೀಜಿ, ಭಾರತ್ ಜೋಡೊ ನಡೆಸುತ್ತಿರುವ ರಾಹುಲ್ ಗಾಂಧಿಯ ಬಗ್ಗೆಯೂ ಟೀಕಿಸಿದ್ದು ಆತನೊಬ್ಬ ಜೋಕರ್ ಎಂದಿದ್ದಾರೆ. ರಾಹುಲ್ ಗಾಂಧಿಗೆ ಉತ್ತರ ಪ್ರದೇಶದಲ್ಲಿ ಗೆಲ್ಲಲಿಕ್ಕಾಗದೆ ಕೇರಳದ ವಯನಾಡಿಗೆ ತೆರಳಿದ್ದಾರೆ. ಆತ ಜಿಹಾದಿಗಳ ಜೊತೆ ಸೇರಿ ಯಾತ್ರೆ ನಡೆಸುತ್ತಿದ್ದಾರೆ ಎಂದು ಹೇಳಿದ್ದರು. ರಾಹುಲ್ ಗಾಂಧಿ ಭಾರತವನ್ನು ಜೋಡಿಸಬೇಕೆಂದಿದ್ದರೆ ಮೊದಲು ಪಾಕಿಸ್ಥಾನ ಮತ್ತು ಬಾಂಗ್ಲಾಕ್ಕೆ ಹೋಗಿ ಅದನ್ನು ಭಾರತದ ಜೊತೆ ಜೋಡಿಸಬೇಕು. ಅದನ್ನು ವಿಭಜಿಸಿದ್ದು ಮಹಾತ್ಮ ಗಾಂಧಿ. ಅವನ್ನು ಮತ್ತೆ ಜೋಡಿಸಿದರೆ ನಾವೆಲ್ಲ ರಾಹುಲ್ ಗಾಂಧಿ ಜೊತೆ ಕೈಜೋಡಿಸುತ್ತೇವೆ ಎಂದು ಹೇಳಿದ್ದಾರೆ.
Controversial preacher Yati Narsinghanand Saraswati has been booked for a statement where he allegedly called for the demolition of madrasas and the Aligarh Muslim University using "gunpowder".
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 12:19 pm
Mangalore Correspondent
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
23-02-26 04:30 pm
Mangalore Correspondent
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am
ಶಿವಮೊಗ್ಗದಿಂದ ಕೇರಳಕ್ಕೆ ಗೋಸಾಗಣೆ ; ಮಂಗಳೂರಿನಲ್ಲಿ...
22-02-26 10:43 pm
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm