ಬ್ರೇಕಿಂಗ್ ನ್ಯೂಸ್
20-09-22 03:33 pm HK News Desk ದೇಶ - ವಿದೇಶ
ನವದೆಹಲಿ, ಸೆ.20: ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡಿದ್ದನ್ನು ವಿರೋಧಿಸಿ, ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಬೇಕೆಂದು ಪಟ್ಟು ಹಿಡಿಯುವಂತಾಗಲು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಎನ್ನುವ ಮೂಲಭೂತವಾದಿ ಸಂಘಟನೆ ಕಾರಣ. ಸಂಘಟನೆಯ ಪ್ರೇರಣೆಯಂತೆ ಉಡುಪಿ ಸರಕಾರಿ ಕಾಲೇಜಿನ ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು ಎಂದು ಕರ್ನಾಟಕ ಸರಕಾರದ ಪರವಾಗಿ ಸುಪ್ರೀಂ ಕೋರ್ಟಿಗೆ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದಾರೆ.
ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠದ ಮುಂದೆ ಹಿಜಾಬ್ ನಿಷೇಧ ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆ ನಡೆಯುತ್ತಿದ್ದು, ಹಿಜಾಬ್ ಪರ ವಕೀಲರು ಮತ್ತು ಕರ್ನಾಟಕ ಸರಕಾರದ ಪರ ವಕೀಲರು ವಾದ ಮಂಡನೆ ಮಾಡುತ್ತಿದ್ದಾರೆ. ಉಡುಪಿ ಸರಕಾರಿ ಹೆಣ್ಮಕ್ಕಳ ಪಿಯು ಕಾಲೇಜಿನಲ್ಲಿ 2013ರ ಮೇ 29ರಂದು ಸಮವಸ್ತ್ರ ಕಡ್ಡಾಯ ಎಂದು ನಿಮಯ ಮಾಡಲಾಗಿತ್ತು. ಹಿಜಾಬ್ ಸೇರಿದಂತೆ ಯಾವುದೇ ಇತರ ವಸ್ತ್ರಗಳ ಧಾರಣೆಗೆ ಅವಕಾಶ ಇರಲಿಲ್ಲ. ಕಾಲೇಜು ರೂಪಿಸುವ ಸಮವಸ್ತ್ರ ಅಷ್ಟೇ ಧರಿಸಬೇಕೆಂದು ನಿಯಮ ಮಾಡಲಾಗಿತ್ತು. ಕೋರ್ಟಿನಲ್ಲಿ ಪ್ರಶ್ನೆ ಮಾಡಿರುವ ಇದೇ ವಿದ್ಯಾರ್ಥಿನಿಯರು 2021ರಲ್ಲಿ ಕಾಲೇಜಿನ ನಿಯಮಕ್ಕೆ ಬದ್ಧರಾಗಿ ಪ್ರವೇಶ ಪಡೆದುಕೊಂಡಿದ್ದರು. 2022ರ ಆರಂಭದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಸೋಶಿಯಲ್ ಮೀಡಿಯಾದಲ್ಲಿ ಮುಸ್ಲಿಮರ ಹಕ್ಕುಗಳ ಹೆಸರಲ್ಲಿ ಭಾವನೆ ಕೆದಕುವ ಅಭಿಯಾನ ನಡೆಸಿತ್ತು.

ಉಡುಪಿ ಕಾಲೇಜಿನಲ್ಲಿ ಒಂದಷ್ಟು ವಿದ್ಯಾರ್ಥಿನಿಯರು ದಿಢೀರ್ ಆಗಿ ಹಿಜಾಬ್ ಬೇಕೆಂದು ಪ್ರತಿಭಟನೆ ನಡೆಸಿದ್ದರ ಹಿಂದೆ ಷಡ್ಯಂತ್ರ ಅಡಗಿತ್ತು. ವಿದ್ಯಾರ್ಥಿನಿಯರು ಪಿಎಫ್ಐ ಪ್ರೇರಣೆಯಿಂದ ಆ ರೀತಿ ಮಾಡಿದ್ದರು. ಅದೊಂದು ವ್ಯವಸ್ಥಿತ ರೀತಿಯ ತಂತ್ರಗಾರಿಕೆ. ಉಡುಪಿ ಕಾಲೇಜಿನ ಬೆಳವಣಿಗೆ ಗಮನಿಸಿ ಕರ್ನಾಟಕ ಸರಕಾರ ಫೆಬ್ರವರಿ 5ರಂದು ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶ ನೀಡಿತ್ತು. ಕಾಲೇಜು ಒಳಗೆ ಗಲಾಟೆ ಆಗಬಾರದು, ಶಾಂತಿ ಕದಡುವ ಕೆಲಸ ಆಗಬಾರದೆಂದು ಆ ರೀತಿ ಆದೇಶ ಮಾಡಲಾಗಿತ್ತು. ಹಾಗೆ ಮಾಡದೇ ಇರುತ್ತಿದ್ದರೆ, ಮತ್ತಷ್ಟು ವಿವಾದ, ಸಂಘರ್ಷಕ್ಕೆ ಕಾರಣವಾಗುತ್ತಿತ್ತು ಎಂದು ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್ ಗಮನಕ್ಕೆ ತಂದಿದ್ದಾರೆ.
ಹಿಜಾಬ್ ಬಗ್ಗೆ ಸರಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದರು. ಮಾರ್ಚ್ 15ರಂದು ವಿದ್ಯಾರ್ಥಿನಿಯರ ಅರ್ಜಿ ವಜಾ ಮಾಡಿದ್ದ ಕೋರ್ಟ್, ಹಿಜಾಬ್ ಧರಿಸುವುದು ಇಸ್ಲಾಮಿನಲ್ಲಿ ಅವಿಭಾಜ್ಯ ಅಂಗವಲ್ಲ ಎಂದಿತ್ತು. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗಿತ್ತು.
The Karnataka government has told the Supreme Court that the student petitioners who challenged the hijab ban in the state government institutions were influenced by the radical outfit Popular Front of India (PFI).
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm