ಬ್ರೇಕಿಂಗ್ ನ್ಯೂಸ್
20-09-22 06:54 pm HK News Desk ದೇಶ - ವಿದೇಶ
ಮುಂಬೈ, ಸೆ.20 : ಸ್ಪೈಸ್ ಜೆಟ್ ಏರ್ವೇಸ್ ಸಂಸ್ಥೆಯು ತನ್ನ 80 ಪೈಲಟ್ಗಳನ್ನು ವೇತನವಿಲ್ಲದೆ ಮೂರು ತಿಂಗಳ ಕಾಲ ರಜೆಯಲ್ಲಿ ಕಳುಹಿಸಲು ನಿರ್ಧರಿಸಿದೆ. ಈ ಬಗ್ಗೆ ಸ್ವತಃ ಸ್ಪೈಸ್ ಜೆಟ್ ಏರ್ವೇಸ್ ಹೇಳಿಕೊಂಡಿದೆ.
ಈ ಬಗ್ಗೆ ಎಕಾನಾಮಿಕ್ ಟೈಮ್ಸ್ ವರದಿ ಮಾಡಿದ್ದು, ಕೆಲವು ಮೂಲಗಳ ಪ್ರಕಾರ ಬೋಯಿಂಗ್ 737 ವಿಭಾಗದ 40 ಪೈಲಟ್ಗಳು ಹಾಗೂ Q400 ವಿಭಾಗದ 40 ಪೈಲಟ್ಗಳು ಹೀಗೆ ಒಟ್ಟು 80 ಪೈಲಟ್ಗಳನ್ನು ಧೀರ್ಘ ರಜೆಯಲ್ಲಿ ಕಳುಹಿಸಲು ಏರ್ಲೈನ್ಸ್ ಸಿದ್ಧತೆ ನಡೆಸಿದೆ.

ದೇಶೀಯವಾಗಿ ಕಾರ್ಯ ನಿರ್ವಹಿಸುವ ವಿಮಾನಗಳಲ್ಲಿರುವ ಒಟ್ಟು 80 ಪೈಲಟ್ಗಳನ್ನು ಮೂರು ತಿಂಗಳ ವರೆಗೆ ವೇತನ ರಹಿತ ರಜೆಯ ಮೇಲೆ ಹೋಗಲು ಆದೇಶಿಸಲಾಗಿದೆ. ಡಿಸೆಂಬರ್ನಲ್ಲಿ ಏಳು ಹೊಸ ಬೋಯಿಂಗ್ 737 ಮ್ಯಾಕ್ಸ್ ಅನ್ನು ಸೇರಿಸಲು ಏರ್ಲೈನ್ಸ್ ಮುಂದಾಗಿದ್ದು, ಹೊಸ ಮಾರ್ಗದ ಹಾರಾಟ ಶುರು ಮಾಡಿದರೆ ಈ ಪೈಲಟ್ಗಳನ್ನು ವಾಪಸ್ ಕರೆಸಿಕೊಳ್ಳಲಾಗುವುದು ಎಂದು ಸಂಸ್ಥೆ ಹೇಳಿದ್ದಾಗಿ ವರದಿ ಆಗಿದೆ.
ಇದಲ್ಲದೇ ಹೊಸ ವಿಮಾನಗಳು ಬರುವವರೆಗೆ, ಕಡಿಮೆ ಸಂಖ್ಯೆಯ ಸಿಬ್ಬಂದಿ ಬಳಸಿಕೊಂಡು ವಿಮಾನ ಹಾರಾಟ ನಡೆಸಲು ಮುಂದಾಗಿದೆ. ವೆಟ್-ಲೀಸ್ಡ್ ವಿಮಾನಗಳಿಗೆ ಹೆಚ್ಚಿನ ಪೈಲಟ್ಗಳ ಅಗತ್ಯವಿಲ್ಲ. ಏಕೆಂದರೆ ಅವುಗಳನ್ನು ಬಾಡಿಗೆಗೆ ಪಡೆಯುವ ಏರ್ಲೈನ್ ಸಿಬ್ಬಂದಿ ನಿರ್ವಹಿಸುತ್ತಾರೆ. 2021 ಆರಂಭದಲ್ಲಿ ಈ ಸ್ಪೈಸ್ ಜೆಟ್ ಏರ್ಲೈನ್, 95 ವಿಮಾನಗಳನ್ನು ಹೊಂದಿತ್ತು. ಆದರೆ ಈಗ ಕೇವಲ 50 ವಿಮಾನಗಳನ್ನು ಹೊಂದಿದೆ. ಹಲವು ವಿಮಾನಗಳನ್ನು ಅದು ಲೀಸ್ ಮೇಲೆ ಬೇರೆಯವರಿಗೆ ನೀಡಿದೆ. ಮತ್ತೆ ಕೆಲವು ನಿರ್ವಹಣಾ ಕಾರಣಕ್ಕೆ ಹಾರಾಟ ನಡೆಸುತ್ತಿಲ್ಲ.
ಹೀಗಾಗಿ ಹೆಚ್ಚಿನ ಪೈಲಟ್ಗಳನ್ನು ಇರಿಸಿಕೊಂಡು ಸಂಸ್ಥೆಯನ್ನು ನಷ್ಟದಲ್ಲಿ ಮುನ್ನಡೆಸುವುದಲ್ಲಿ ಯಾವುದೇ ಅರ್ಥವಿಲ್ಲ. ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಹೊಸ ವಿಮಾನಗಳು ಆಗಮಿಸಿದ ನಂತರ ಪೈಲಟ್ಗಳನ್ನು ಮತ್ತೆ ಕರೆಸಲಾಗುವುದು ಎಂದು ಸ್ಪೈಸ್ ಜೆಟ್ ಹೇಳಿದ್ದಾಗಿ ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.
SpiceJet will send around 80 pilots on Leave Without Pay as the airline finds itself with excess pilots. Sources said that around 40 pilots from the Boeing 737 fleet and another 40 from the Q400 fleet- which the airline operates on regional routes have been asked to go on Leave Without Pay for three months.The airline will call them back gradually as it deploys new aircraft into its fleet. SpiceJet plans to add seven new Boeing 737 Max starting from December.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm