ಬ್ರೇಕಿಂಗ್ ನ್ಯೂಸ್
08-10-20 07:31 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 8: ಸುಶಾಂತ್ ಸಿಂಗ್ ಸಾವಿನ ಬಗ್ಗೆ ಆತ್ಮಹತ್ಯೆಯಲ್ಲ, ಕೊಲೆಯೆಂದು ಸುದ್ದಿ ಮಾಡಿ ಮುಖಭಂಗಕ್ಕೀಡಾಗಿರುವ ರಿಪಬ್ಲಿಕ್ ಟಿವಿ ವಿರುದ್ಧ ಮುಂಬೈ ಪೊಲೀಸರೇ ತಿರುಗಿ ಬಿದ್ದಿದ್ದಾರೆ. ರಿಪಬ್ಲಿಕ್ ಸೇರಿದಂತೆ ಮೂರು ಟಿವಿ ವಾಹಿನಿಗಳು ಟಿಆರ್ ಪಿ ಹೆಚ್ಚಿಸಿಕೊಂಡು ಆದಾಯ ಪಡೆದುಕೊಳ್ಳುವುದಕ್ಕಾಗಿ ತಂತ್ರ ಹೂಡಿದ್ದರು. ಮೋಸದ ಜಾಲದ ಮೂಲಕ ಮನೆ, ಮನೆಗೆ ತಮ್ಮ ಎಕ್ಸಿಕ್ಯೂಟಿವ್ ಗಳನ್ನು ಕಳಿಸಿ ಬಡವರಿಗೆ ಹಣಕೊಟ್ಟು ಟಿಆರ್ ಪಿ ಹೆಚ್ಚಿಸಿಕೊಳ್ಳುತ್ತಿದ್ದರು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಮುಂಬೈ ಪೊಲೀಸ್ ಕಮಿಷನರ್ ಪರಮ್ ವೀರ್ ಸಿಂಗ್, ಅರ್ನಾಬ್ ಗೋಸ್ವಾಮಿ ಒಡೆತನದ ರಿಪಬ್ಲಿಕ್ ಟಿವಿ, ಮರಾಠಿ ಭಾಷೆಯ ಫ್ಯಾಕ್ಟ್ ಮರಾಠಿ ಮತ್ತು ಬಾಕ್ಸ್ ಸಿನಿಮಾ ವಾಹಿನಿಗಳ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಮರಾಠಿ ಟಿವಿ ವಾಹಿನಿಗಳ ಇಬ್ಬರು ಮಾಲೀಕರನ್ನು ಬಂಧಿಸಲಾಗಿದೆ. ರಿಪಬ್ಲಿಕ್ ಟಿವಿ ಡೈರೆಕ್ಟರ್ ಒಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸುಳ್ಳು ಸುದ್ದಿಗಳನ್ನು ಪ್ರಚಾರ ನೀಡುವುದಕ್ಕಾಗಿ ಮತ್ತು ತಮ್ಮದೇ ಚಾನೆಲ್ ಹಾಕುವಂತೆ ಬಡ ಮನೆಗಳ ಮಂದಿಗೆ ಹಣ ಕೊಟ್ಟು ಪ್ರೇರಿಸುತ್ತಿದ್ದರು. ಈ ಮೂಲಕ ಟಿಆರ್ ಪಿ ಹೆಚ್ಚಿರುವುದಾಗಿ ತೋರಿಸಿಕೊಂಡು ಹೆಚ್ಚು ಆದಾಯ ಬರುವ ಜಾಹೀರಾತು ಪಡೆಯುತ್ತಿದ್ದರು. ಈ ಮೂಲಕ ಹೆಚ್ಚು ಪಡೆದಿದ್ದು ತನಿಖೆಯಲ್ಲಿ ದೃಢ ಪಟ್ಟರೆ ವಾಹಿನಿಗಳ ಖಾತೆಯನ್ನು ಸೀಝ್ ಮಾಡುವುದಾಗಿ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ, ಮುಂಬೈ ಪೊಲೀಸ್ ಕಮಿಷನರ್ ಸುಳ್ಳು ಮಾಹಿತಿಗಳನ್ನು ಹೇಳುತ್ತಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.
Fake TRP racket busted! Names republic TV as one of the 3 channels under scanner. People paid off to manipulate viewership numbers. 2 Accused arrested
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm