ಬ್ರೇಕಿಂಗ್ ನ್ಯೂಸ್
22-09-22 11:05 pm HK News Desk ದೇಶ - ವಿದೇಶ
ನವದೆಹಲಿ, ಸೆ.22 : ಅಖಿಲ ಭಾರತ ಇಮಾಮ್ ಸಂಘಟನೆ ಮುಖ್ಯಸ್ಥ ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು 'ರಾಷ್ಟ್ರಪಿತ' ಎಂದು ಬಣ್ಣಿಸಿದ್ದಾರೆ. ದೇಶದಲ್ಲಿ ಸೌಹಾರ್ದತೆ ನೆಲೆಸುವ ಪ್ರಯತ್ನದ ಭಾಗವಾಗಿ ಮುಸ್ಲಿಂ ನಾಯಕರನ್ನು ಭೇಟಿ ಮಾಡುತ್ತಿರುವ ಮೋಹನ್ ಭಾಗವತ್, ದೆಹಲಿಯಲ್ಲಿ ಗುರುವಾರ ಪ್ರಮುಖ ಮುಸ್ಲಿಂ ಧಾರ್ಮಿಕ ಮುಖಂಡರನ್ನು ಭೇಟಿ ಮಾಡಿದ್ದಾರೆ.
ಮೋಹನ್ ಭಾಗವತ್ ಅವರು ನನ್ನ ಆಹ್ವಾನದಂತೆ ಇಂದು ಭೇಟಿ ಮಾಡಿದ್ದರು. ಅವರು 'ರಾಷ್ಟ್ರಪಿತ' ಮತ್ತು ರಾಷ್ಟ್ರ ಋಷಿ'. ಅವರ ಭೇಟಿಯಿಂದಾಗಿ ಹೊರಗೆ ಉತ್ತಮ ಸಂದೇಶ ರವಾನೆಯಾಗಲಿದೆ. ನಾವು ದೇವರನ್ನು ಆರಾಧಿಸುವ ಮಾರ್ಗ ಬೇರೆ. ಆದರೆ ಅತಿ ದೊಡ್ಡ ಧರ್ಮವೆಂದರೆ ಅದು ಮಾನವೀಯತೆ. ದೇಶ ಮೊದಲು ಎಂಬುದರಲ್ಲಿ ನಾವು ನಂಬಿಕೆ ಇರಿಸಿದ್ದೇವೆ ಎಂದು ಉಮರ್ ಅಹ್ಮದ್ ಇಲ್ಯಾಸಿ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ದೆಹಲಿಯಲ್ಲಿ ಮಸೀದಿ ಮತ್ತು ಮದರಸಾಕ್ಕೆ ಭೇಟಿ ನೀಡಿದ ಮೋಹನ್ ಭಾಗವತ್, ಅಖಿಲ ಭಾರತ ಇಮಾಮ್ ಸಂಘಟನೆ ಮುಖ್ಯಸ್ಥರ ಜತೆ ಮಾತುಕತೆ ನಡೆಸಿದರು. ರಾಜಧಾನಿಯ ಕಸ್ತೂರ್ಬಾ ಗಾಂಧಿ ರಸ್ತೆಯಲ್ಲಿನ ಮಸೀದಿಗೆ ತೆರಳಿದ ಅವರು, ನಂತರ ಉತ್ತರ ದಿಲ್ಲಿಯ ಅಜಾದ್ಪುರದಲ್ಲಿನ ಮದರಸ ತಾಜವೀದುಲ್ ಖುರಾನ್ಗೆ ಭೇಟಿ ನೀಡಿದರು. ಕಳೆದ ಒಂದು ತಿಂಗಳಿನಿಂದ ಮುಸ್ಲಿಂ ಬುದ್ದಿಜೀವಿಗಳ ಜತೆ ಆರೆಸ್ಸೆಸ್ ಮುಖ್ಯಸ್ಥರು ನಡೆಸುತ್ತಿರುವ ಎರಡನೇ ಭೇಟಿ ಇದಾಗಿದೆ. ಇದಕ್ಕೂ ಮುನ್ನ ಅವರು ಕೋಮು ಸೌಹಾರ್ದ ಬಲಪಡಿಸುವ ಸಂಬಂಧ ಐವರು ಮುಸ್ಲಿಂ ಬುದ್ದಿಜೀವಿಗಳನ್ನು ಭೇಟಿ ಮಾಡಿದ್ದರು.
Rashtriya Swayamsevak Sangh (RSS) chief Mohan Bhagwat met Imam Umar Ahmed Ilyasi, head of ‘All India Imam Sangathan’, at a mosque in Delhi on Thursday. The assembly befell in a closed room on the Kasturba Gandhi Marg mosque for greater than an hour. The workplace of All India Imam Group is situated right here.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm