ಬ್ರೇಕಿಂಗ್ ನ್ಯೂಸ್
23-09-22 07:15 pm HK News Desk ದೇಶ - ವಿದೇಶ
ಲಕ್ನೋ, ಸೆ.23 : ಮಗಳು ಪ್ರಿಯಕರನ ಜೊತೆ ಓಡಿಹೋಗಿ ಮದುವೆಯಾದ ಕಾರಣಕ್ಕೆ ಮಗಳು ಮತ್ತು ಆಕೆಯ ಪತಿಯನ್ನು ಉಪಾಯದಿಂದ ಮನೆಗೆ ಕರೆಸಿ ಕೊಚ್ಚಿ ಕೊಲೆಗೈದು ಮರ್ಯಾದಾ ಹತ್ಯೆ ಮಾಡಿದ್ದ ಅಪ್ಪ- ಅಮ್ಮ ಸೇರಿದಂತೆ ನಾಲ್ವರಿಗೆ ಗಲ್ಲು ಶಿಕ್ಷೆ ವಿಧಿಸಿ ಉತ್ತರ ಪ್ರದೇಶದ ಬದೌನ್ ಕೋರ್ಟ್ ಆದೇಶ ಮಾಡಿದೆ.
2017ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಗೋವಿಂದ್ (24) ಮತ್ತು ಆಶಾ (19) ಎಂಬ ದಂಪತಿ ಬಲಿಯಾಗಿದ್ದರು. ಘಟನೆ ಬಳಿಕ ಬಂಧಿಸಲ್ಪಟ್ಟಿದ್ದ ಕುಟುಂಬಸ್ಥರಿಗೆ ಈಗ ನ್ಯಾಯಾಲಯ ಗಲ್ಲು ಶಿಕ್ಷೆ ನೀಡಿದೆ.
ಬದೌನ್ ಜಿಲ್ಲೆಯ ಉರೈನ ಗ್ರಾಮದ ನಿವಾಸಿ ಪಪ್ಪು ಸಿಂಗ್ ಎಂಬವರ ಮಗ ಗೋವಿಂದ್ ಹಾಗೂ ಕಿಶನ್ಪಾಲ್ ಎಂಬವರ ಪುತ್ರಿ ಆಶಾ ಪ್ರೀತಿಸಿದ್ದು ಮನೆಯವರ ಒಪ್ಪಿಗೆ ಸಿಗದ ಕಾರಣ ಇಬ್ಬರೂ ದೆಹಲಿಗೆ ಪರಾರಿಯಾಗಿ ಮದುವೆಯಾಗಿದ್ದರು.
ಇದರಿಂದ ಸಿಟ್ಟಾಗಿದ್ದ ಆಶಾ ಕುಟುಂಬಸ್ಥರು, ಮಗಳು ಹಾಗೂ ಆಕೆಯ ಪತಿಯನ್ನು ಮುಗಿಸುವ ಪ್ಲ್ಯಾನ್ ಹಾಕಿದ್ದರು. ಆನಂತರ, ಉಪಾಯದಿಂದ ತಾವೇ ಮುಂದೆ ನಿಂತು ಇಬ್ಬರ ಮದುವೆ ಮಾಡಿಸುವುದಾಗಿ ಹೇಳಿ ಇಬ್ಬರನ್ನೂ ಮನೆಗೆ ಕರೆಸಿಕೊಂಡಿದ್ದರು. ಇದನ್ನು ನಂಬಿ ಆಶಾ ಮತ್ತು ಗೋವಿಂದ್ ಮನೆಗೆ ವಾಪಸಾಗಿದ್ದರು. ಆದರೆ ಮನೆಯಲ್ಲಿ ಭೀಕರ ಕೊಲೆಯೇ ನಡೆದು ಹೋಗಿತ್ತು.
ಮೊದಲೇ ಹಾಕಿದ್ದ ಯೋಜನೆಯಂತೆ, ಆಶಾ ತಂದೆ ಕಿಶನ್ಪಾಲ್, ತಾಯಿ ಜಲಧಾರಾ ಹಾಗೂ ಸಹೋದರರಾದ ವಿಜಯಪಾಲ್ ಮತ್ತು ರಾಮ್ವೀರ್ ಸೇರಿ ಮೊದಲು ಗೋವಿಂದನ ಕುತ್ತಿಗೆಯನ್ನು ಹಿಂಬದಿಯಿಂದ ಹಗ್ಗದಿಂದ ಬಿಗಿದು ಆನಂತರ ಮಚ್ಚಿನಲ್ಲಿ ಹೊಡೆದು ಸಾಯಿಸಿದ್ದರು. ಇದನ್ನು ನೋಡಿ ತಪ್ಪಿಸಲು ಬಂದ ಆಶಾಳನ್ನೂ ಅದೇ ಕೊಡಲಿಯಿಂದ ಹೊಡೆದು ಸಾಯಿಸಿದ್ದರು. ಯುವಕ- ಯುವತಿ ಒಂದೇ ಜಾತಿಯವರಾಗಿದ್ದರೂ, ಯುವತಿ ಕುಟುಂಬ ಮದುವೆಗೆ ವಿರೋಧಿಸಿತ್ತು. ಕೃತ್ಯ ಎಸಗಿದ್ದಲ್ಲದೆ, ಯುವಕ- ಯುವತಿಯ ಶವವನ್ನು ತರಾತುರಿಯಲ್ಲಿ ಮನೆ ಬಳಿಯಲ್ಲೇ ಹೂತು ಹಾಕಿದ್ದರು. ಇದನ್ನು ನೆರೆಮನೆಯವರು ನೋಡಿದ್ದು ಗೋವಿಂದ್ ಹೆತ್ತವರಿಗೆ ಮಾಹಿತಿ ನೀಡಿದ್ದರು. ಈ ಕುರಿತು ಗೋವಿಂದನ ಪಾಲಕರು ಪೊಲೀಸರಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಬರ್ಬರ ಕೃತ್ಯ ಎಸಗಿದ್ದ ಐವರನ್ನು ಬಂಧಿಸಿದ್ದರು.
ಕೋರ್ಟ್ ವಿಚಾರಣೆಯಲ್ಲಿ ಆರೋಪ ಸಾಬೀತಾಗಿದ್ದರಿಂದ ಮಗಳನ್ನು ಕೊಂದ ಹೆತ್ತವರು ಸೇರಿ ಆಕೆಯ ಸೋದರರಿಗೆ ನ್ಯಾಯಾಧೀಶ ಪಂಕಜ್ ಅಗರವಾಲ್ ಮರಣದಂಡನೆ ವಿಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಬೇರೆ ಜಾತಿಯ ಯುವಕರನ್ನು ಪ್ರೀತಿಸಿ ಮದುವೆಯಾದಲ್ಲಿ ಈ ರೀತಿಯ ಮರ್ಯಾದಾ ಹತ್ಯೆ ನಡೆಯುವುದು ಕಾಮನ್ ಆಗಿದ್ದು ಹೆತ್ತವರೇ ಮಗಳು ಎನ್ನುವ ಕರುಣೆ ತೋರದೆ ಹೀನಾಯವಾಗಿ ಹೊಡೆದು ಕೊಂದ ಘೋರ ಕೃತ್ಯದ ಬಗ್ಗೆ ಘೋರ ಶಿಕ್ಷೆಯನ್ನೇ ನೀಡಿದ್ದಾರೆ.
A district court has sentenced parents to death for killing their daughter and her boyfriend.District judge Pankaj Kumar Agrawal awarded capital punishment to four people, including the mother and father of the girl who was murdered along with her boyfriend, in the Wazirganj area of Uttar Pradesh’s Badaun in 2017.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm