ಬ್ರೇಕಿಂಗ್ ನ್ಯೂಸ್
23-09-22 10:44 pm HK News Desk ದೇಶ - ವಿದೇಶ
ನವದೆಹಲಿ, ಸೆ.23 : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧ ಎನ್ಐಎ ದಾಳಿಯನ್ನು ಉತ್ತರ ಭಾರತದ ಬಹುತೇಕ ಮುಸ್ಲಿಂ ಸಂಘಟನೆಗಳು ಬೆಂಬಲಿಸಿವೆ. ಇವುಗಳಲ್ಲಿ ಸೂಫಿ ಖಾನ್ಖಾಹ್ ಅಸೋಸಿಯೇಷನ್ ಮತ್ತು ಆಲ್ ಇಂಡಿಯಾ ಪಾಸ್ಮಾಂಡಾ ಮುಸ್ಲಿಂ ಮಹಾಜ್ ಕೂಡ ಸೇರಿವೆ.
ಸೂಫಿ ಖಾನ್ಬಾಹ್ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಕೌಸರ್ ಹಸನ್ ಮಜಿದಿ ಪಿಎಫ್ಐ ನಿಷೇಧಿಸುವಂತೆ ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಬರೆದ ಪತ್ರದಲ್ಲಿ ಪಿಎಫ್ಐ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ, ಆದ್ದರಿಂದ ಅದನ್ನು ನಿಷೇಧಿಸಬೇಕು ಎಂದು ಹೇಳಿದ್ದಾರೆ. ಪಿಎಫ್ಐ ದೇಶದ ಯುವಕರನ್ನ ತಪ್ಪು ದಾರಿಗೆಳೆಯುತ್ತಿದೆ ಮತ್ತು ಅವರನ್ನ ಭಯೋತ್ಪಾದಕರನ್ನಾಗಿ ಮಾಡುತ್ತಿದೆ ಮತ್ತು ಕಳೆದ ಎರಡು ವರ್ಷಗಳಿಂದ, ಅದು ದೇಶದ ವಿರುದ್ಧ ಹೋರಾಡಲು ಐಸಿಸ್ಗೆ ಹೋರಾಟಗಾರರನ್ನ ನೇಮಕ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಅಲ್ಲದೆ, ಪಿಎಫ್ಐ ಸಂಘಟನೆಯ ಸಿದ್ಧಾಂತವು ದೇಶದ ಹಿತಾಸಕ್ತಿಗೆ ಸಂಬಂಧಿಸಿದ್ದಲ್ಲ ಎಂದು ಕೌಸರ್ ಹಸನ್ ಮಜಿದಿ ಹೇಳಿದ್ದಾರೆ. ಇದು ದೇಶದಲ್ಲಿ ಶಾಂತಿ ಕೆಡಿಸಲು ಕೆಲಸ ಮಾಡುತ್ತಿದೆ. ದೇಶದ ವಿರುದ್ಧವಾದ ಸಿದ್ಧಾಂತವನ್ನ ಹೊಂದಿರುವ ಸಂಘಟನೆಯನ್ನ ನಿಷೇಧಿಸುವುದು ಒಳ್ಳೆಯದು. 'ನಿಷೇಧವು ಹಳೆಯ ಬೇಡಿಕೆಯಾಗಿದೆ, ಆದರೆ ನಿಷೇಧವು ಮಾತ್ರ ಏನನ್ನೂ ಮಾಡುವುದಿಲ್ಲ. ಅಂತಹ ಸಿದ್ಧಾಂತದ ವಿರುದ್ಧ ದೃಢವಾದ ಕ್ರಮಗಳನ್ನ ತೆಗೆದುಕೊಳ್ಳಬೇಕು' ಎಂದು ಅವರು ಹೇಳಿದ್ದಾರೆ.
ಭಾರತ ಸರ್ಕಾರದ ರಾಷ್ಟ್ರೀಯ ಭದ್ರತಾ ಸಂಸ್ಥೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ವಿರುದ್ಧ ಅನುಮಾನಾಸ್ಪದ ಚಟುವಟಿಕೆಗಳ ಆಧಾರದ ಮೇಲೆ ಪ್ರಕರಣ ದಾಖಲಿಸಿದೆ ಮತ್ತು ಅದರ ಹಲವಾರು ಕಾರ್ಯಕರ್ತರನ್ನ ಬಂಧಿಸಿದೆ' ಎಂದು ಅಖಿಲ ಭಾರತ ಪಾಸ್ಮಾಂಡಾ ಮುಸ್ಲಿಂ ಮಹಾಜ್ ರಾಷ್ಟ್ರೀಯ ಅಧ್ಯಕ್ಷ ಪರ್ವೇಜ್ ಹನೀಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಖಿಲ ಭಾರತ ಪಾಸ್ಮಾಂಡ ಮುಸ್ಲಿಂ ಮಹಾಜ್ ದಾಳಿ ನಡೆಸುವ ಸರ್ಕಾರದ ನಿರ್ಧಾರವನ್ನು ಬೆಂಬಲಿಸುತ್ತದೆ. ಇದು ದೇಶದ ಹಿತದೃಷ್ಟಿಯಿಂದ ಉತ್ತಮ ನಡೆ. ನಮ್ಮ ಸಂಸ್ಥೆ ಭಾರತೀಯ ಸಂವಿಧಾನವನ್ನ ಸಂಪೂರ್ಣವಾಗಿ ಬೆಂಬಲಿಸುತ್ತದೆ ಎಂದಿದ್ದಾರೆ.
Sufi body seeks PFI ban, writes letter to PM Modi. All India Sufi Sajjadanashin Council (AISSC), a Muslim body set up four years ago, has now written letter to PM Modi for banning the Popular Front of India (PFI) and any religious organisation involved in radicalism or incidents in India.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm