ಬ್ರೇಕಿಂಗ್ ನ್ಯೂಸ್
25-09-22 06:03 pm HK News Desk ದೇಶ - ವಿದೇಶ
ವಡೋದರಾ, ಸೆ.25: 'ಕಮಲ'ದ ಸುತ್ತ ಸಾಕಷ್ಟು 'ಕೆಸರು' ಮೆತ್ತಿಕೊಂಡಿದೆ. ಆ ಕೆಸರನ್ನು “ಕೈ”ಯಿಂದ ಸ್ವಚ್ಛಗೊಳಿಸಲು ಸಾಧ್ಯವಿಲ್ಲ. ಅದಕ್ಕೆ ಪೊರಕೆಯೇ ಬೇಕು ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಿಜೆಪಿ ಮತ್ತು ಕಾಂಗ್ರೆಸಿಗೆ ಪರೋಕ್ಷ ಟಾಂಗ್ ನೀಡಿದ್ದಾರೆ.
ಗುಜರಾತ್ ಚುನಾವಣೆಗೆ ಪ್ರಚಾರ ನಡೆಸುತ್ತಿರುವ ಕೇಜ್ರಿವಾಲ್, ಟೌನ್ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುಜರಾತ್ ಯುವ ಸಮುದಾಯದೊಂದಿಗೆ ಸಂವಾದ ನಡೆಸಿದರು. ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಗುಜರಾತ್ನಲ್ಲಿ 80 ಶೇ. ಖಾಸಗಿ ಉದ್ಯೋಗಗಳನ್ನು ಗುಜರಾತಿಗಳಿಗೆ ಮೀಸಲು ಮಾಡುತ್ತೇವೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
.png?Dofme_wuENtXyYij2NqgVlMsRLzd2FGi&size=770:433)
ಇದೇ ವೇಳೆ, ಬಿಜೆಪಿ ಆಡಳಿತದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, 'ಕಮಲ'ದ ಸುತ್ತ ಸಾಕಷ್ಟು 'ಕೆಸರು' ಬಿದ್ದಿದೆ. ಆ ಕೆಸರನ್ನು ಬರೀಯ “ಕೈ”ಯಿಂದ ಸ್ವಚ್ಛಗೊಳಿಸಲು ಸಾಧ್ಯವಿಲ್ಲ. ಅದನ್ನು “ಪೊರಕೆ ” ಹಿಡಿದೇ ಸ್ವಚ್ಛ ಮಾಡಬೇಕಾಗುತ್ತದೆ. ಹೀಗೆಂದು ನಾನು ಹೇಳುತ್ತಿಲ್ಲ. ಬಿಜೆಪಿ ಸಚಿವರೊಬ್ಬರು ತಮ್ಮ ಕಾರ್ಯಕರ್ತರಿಗೆ ವಾಟ್ಸಾಪ್ ಸಂದೇಶ ಕಳುಹಿಸಿದ್ದಾರೆ ಎಂದು ಅದನ್ನು ತೋರಿಸಿದರು.

ಕಳೆದ ವಾರ ನಾವು ವಡೋದರಾದಲ್ಲಿ ಶಿಕ್ಷಣದ ಬಗ್ಗೆ ಸಂವಾದ ನಡೆಸಿದ್ದೇವೆ. ಬಿಜೆಪಿಯವರು ನಮಗೆ 13 ಹಾಲ್ಗಳನ್ನು ಸಿಗದಂತೆ ಮಾಡಿದ್ದಾರೆ. ಆಗ ನವನೀತ್ ಕಾಕಾ ಧೈರ್ಯವಾಗಿ ತಮ್ಮ ಸಭಾಂಗಣವನ್ನು ನಮಗೆ ನೀಡಿದ್ದರು. ನಿನ್ನೆ ಈ ಜನರು ಬುಲ್ಡೋಜರ್ ತೆಗೆದುಕೊಂಡು ನವನೀತ್ ಕಾಕಾ ಅವರ ಸಭಾಂಗಣವನ್ನು ಒಡೆಯಲು ಬಂದಿದ್ದರು. ಇದಕ್ಕಿಂತ ದೊಡ್ಡ ಅಪರಾಧ ಇನ್ನೇನಿದೆ? ಎಂದು ಕೇಜ್ರಿವಾಲ್ ಪ್ರಶ್ನಿಸಿದರು. ಪಂಜಾಬ್ ಸಿಎಂ ಭಗವಂತ್ ಮಾನ್ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
A group of people, mostly youths, greeted Delhi Chief Minister Arvind Kejriwal with chants of “Modi-Modi” outside Gujarat’s Vadodara airport as he landed earlier this week for a daylong campaign for his Aam Aadmi Party in the BJP-ruled state where polls are due later this year.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm