ಬ್ರೇಕಿಂಗ್ ನ್ಯೂಸ್
25-09-22 09:51 pm HK News Desk ದೇಶ - ವಿದೇಶ
ತಿರುಪತಿ, ಸೆ.25 : ಕ್ಲಿನಿಕ್ನಲ್ಲಿ ಅಗ್ನಿ ಅವಘಡ ಉಂಟಾಗಿ ವೈದ್ಯರು ಹಾಗೂ ಅವರ ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ತಿರುಪತಿ ಬಳಿಯ ರೇಣಿಗುಂಟದ ವಸುಂಧರಾ ನಗರದಲ್ಲಿ ನಡೆದಿದೆ.
ಡಾ.ರವಿಶಂಕರ್ ರೆಡ್ಡಿ ಮತ್ತು ಅವರ ಇಬ್ಬರು ಮಕ್ಕಳಾದ ಸಿದ್ದು (12) ಮತ್ತು ಕಾರ್ತಿಕಾ (6) ಮೃತರು. ರೇಣಿಗುಂಟದ ವಸುಂಧರಾ ನಗರದ ಕಟ್ಟಡವೊಂದರಲ್ಲಿ ರವಿಶಂಕರ್ ರೆಡ್ಡಿ ತನ್ನ ಮನೆಯ ಜೊತೆಗೆ ಖಾಸಗಿ ಕ್ಲಿನಿಕ್ ಅನ್ನು ನಡೆಸುತ್ತಿದ್ದರು. ಭಾನುವಾರ ಮುಂಜಾನೆ 4 ಗಂಟೆ ಸುಮಾರಿಗೆ ಕ್ಲಿನಿಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಮನೆಗೂ ಆವರಿಸಿದೆ. ಮನೆಯಲ್ಲಿ ರವಿಶಂಕರ್ ರೆಡ್ಡಿ, ಅವರ ಪತ್ನಿ ಅನಂತಲಕ್ಷ್ಮಿ, ತಾಯಿ ರಾಮ ಸುಬ್ಬಮ್ಮ ಮತ್ತು ಇಬ್ಬರು ಮಕ್ಕಳಾದ ಸಿದ್ದು ಮತ್ತು ಕಾರ್ತಿಕಾ ಇದ್ದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು ನಿದ್ದೆಯಲ್ಲಿದ್ದಾಗಲೇ ಬೆಂಕಿ ಮನೆಯೆಲ್ಲಾ ಹರಡಿ ಜೀವಂತ ಸುಟ್ಟು ಹೋಗಿದ್ದಾರೆ.
ರೇಣಿಗುಂಟಾ ಪೊಲೀಸರು ಸ್ಥಳಕ್ಕೆ ಧಾವಿಸಿ ಅನಂತಲಕ್ಷ್ಮಿ, ರಾಮ ಸುಬ್ಬಮ್ಮ ಹಾಗೂ ಇಬ್ಬರು ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ವೇಳೆ ಮಕ್ಕಳಾದ ಸಿದ್ದು ಮತ್ತು ಕಾರ್ತಿಕಾ ಸಾವನ್ನಪ್ಪಿದ್ದಾರೆ. 90 ರಷ್ಟು ಸುಟ್ಟ ಗಾಯಗಳಾಗಿದ್ದ ರವಿಶಂಕರ್ ರೆಡ್ಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇತ್ತೀಚೆಗಷ್ಟೇ ತೆಲಂಗಾಣದ ಸಿಕಂದರಾಬಾದ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿತ್ತು. ಸಿಂಕಂದರಾಬಾದ್ ನಗರದ ಎಲೆಕ್ಟ್ರಿಕ್ ಬೈಕ್ ಶೋ ರೂಮ್ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಶೋ ರೂಮ್ ನಿಂದ ಅದೇ ಕಟ್ಟಡದ ಮೇಲ್ಭಾಗದ ಲಾಡ್ಜ್ನಲ್ಲಿ ಬೆಂಕಿ ಹರಡಿ ತಂಗಿದ್ದವರಲ್ಲಿ 8 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದರು. 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದರು.
A doctor and his two children died in a fire accident that took place in Tamil Nadu's Tirupati district on Sunday. An initial investigation into the matter has revealed that the fire might have been caused by a short circuit.Arohan Rao, Inspector of Renigunta Police told India Today that the fire broke out on Sunday morning at around 3 to 4 am on the first floor of the doctor's house. The incident took place at the Renigunta area of Tirupati district.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm