ಬ್ರೇಕಿಂಗ್ ನ್ಯೂಸ್
25-09-22 09:51 pm HK News Desk ದೇಶ - ವಿದೇಶ
ತಿರುಪತಿ, ಸೆ.25 : ಕ್ಲಿನಿಕ್ನಲ್ಲಿ ಅಗ್ನಿ ಅವಘಡ ಉಂಟಾಗಿ ವೈದ್ಯರು ಹಾಗೂ ಅವರ ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ತಿರುಪತಿ ಬಳಿಯ ರೇಣಿಗುಂಟದ ವಸುಂಧರಾ ನಗರದಲ್ಲಿ ನಡೆದಿದೆ.
ಡಾ.ರವಿಶಂಕರ್ ರೆಡ್ಡಿ ಮತ್ತು ಅವರ ಇಬ್ಬರು ಮಕ್ಕಳಾದ ಸಿದ್ದು (12) ಮತ್ತು ಕಾರ್ತಿಕಾ (6) ಮೃತರು. ರೇಣಿಗುಂಟದ ವಸುಂಧರಾ ನಗರದ ಕಟ್ಟಡವೊಂದರಲ್ಲಿ ರವಿಶಂಕರ್ ರೆಡ್ಡಿ ತನ್ನ ಮನೆಯ ಜೊತೆಗೆ ಖಾಸಗಿ ಕ್ಲಿನಿಕ್ ಅನ್ನು ನಡೆಸುತ್ತಿದ್ದರು. ಭಾನುವಾರ ಮುಂಜಾನೆ 4 ಗಂಟೆ ಸುಮಾರಿಗೆ ಕ್ಲಿನಿಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಮನೆಗೂ ಆವರಿಸಿದೆ. ಮನೆಯಲ್ಲಿ ರವಿಶಂಕರ್ ರೆಡ್ಡಿ, ಅವರ ಪತ್ನಿ ಅನಂತಲಕ್ಷ್ಮಿ, ತಾಯಿ ರಾಮ ಸುಬ್ಬಮ್ಮ ಮತ್ತು ಇಬ್ಬರು ಮಕ್ಕಳಾದ ಸಿದ್ದು ಮತ್ತು ಕಾರ್ತಿಕಾ ಇದ್ದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು ನಿದ್ದೆಯಲ್ಲಿದ್ದಾಗಲೇ ಬೆಂಕಿ ಮನೆಯೆಲ್ಲಾ ಹರಡಿ ಜೀವಂತ ಸುಟ್ಟು ಹೋಗಿದ್ದಾರೆ.
ರೇಣಿಗುಂಟಾ ಪೊಲೀಸರು ಸ್ಥಳಕ್ಕೆ ಧಾವಿಸಿ ಅನಂತಲಕ್ಷ್ಮಿ, ರಾಮ ಸುಬ್ಬಮ್ಮ ಹಾಗೂ ಇಬ್ಬರು ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ವೇಳೆ ಮಕ್ಕಳಾದ ಸಿದ್ದು ಮತ್ತು ಕಾರ್ತಿಕಾ ಸಾವನ್ನಪ್ಪಿದ್ದಾರೆ. 90 ರಷ್ಟು ಸುಟ್ಟ ಗಾಯಗಳಾಗಿದ್ದ ರವಿಶಂಕರ್ ರೆಡ್ಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇತ್ತೀಚೆಗಷ್ಟೇ ತೆಲಂಗಾಣದ ಸಿಕಂದರಾಬಾದ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿತ್ತು. ಸಿಂಕಂದರಾಬಾದ್ ನಗರದ ಎಲೆಕ್ಟ್ರಿಕ್ ಬೈಕ್ ಶೋ ರೂಮ್ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಶೋ ರೂಮ್ ನಿಂದ ಅದೇ ಕಟ್ಟಡದ ಮೇಲ್ಭಾಗದ ಲಾಡ್ಜ್ನಲ್ಲಿ ಬೆಂಕಿ ಹರಡಿ ತಂಗಿದ್ದವರಲ್ಲಿ 8 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದರು. 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದರು.
A doctor and his two children died in a fire accident that took place in Tamil Nadu's Tirupati district on Sunday. An initial investigation into the matter has revealed that the fire might have been caused by a short circuit.Arohan Rao, Inspector of Renigunta Police told India Today that the fire broke out on Sunday morning at around 3 to 4 am on the first floor of the doctor's house. The incident took place at the Renigunta area of Tirupati district.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm