ಬ್ರೇಕಿಂಗ್ ನ್ಯೂಸ್
25-09-22 09:51 pm HK News Desk ದೇಶ - ವಿದೇಶ
ತಿರುಪತಿ, ಸೆ.25 : ಕ್ಲಿನಿಕ್ನಲ್ಲಿ ಅಗ್ನಿ ಅವಘಡ ಉಂಟಾಗಿ ವೈದ್ಯರು ಹಾಗೂ ಅವರ ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ತಿರುಪತಿ ಬಳಿಯ ರೇಣಿಗುಂಟದ ವಸುಂಧರಾ ನಗರದಲ್ಲಿ ನಡೆದಿದೆ.
ಡಾ.ರವಿಶಂಕರ್ ರೆಡ್ಡಿ ಮತ್ತು ಅವರ ಇಬ್ಬರು ಮಕ್ಕಳಾದ ಸಿದ್ದು (12) ಮತ್ತು ಕಾರ್ತಿಕಾ (6) ಮೃತರು. ರೇಣಿಗುಂಟದ ವಸುಂಧರಾ ನಗರದ ಕಟ್ಟಡವೊಂದರಲ್ಲಿ ರವಿಶಂಕರ್ ರೆಡ್ಡಿ ತನ್ನ ಮನೆಯ ಜೊತೆಗೆ ಖಾಸಗಿ ಕ್ಲಿನಿಕ್ ಅನ್ನು ನಡೆಸುತ್ತಿದ್ದರು. ಭಾನುವಾರ ಮುಂಜಾನೆ 4 ಗಂಟೆ ಸುಮಾರಿಗೆ ಕ್ಲಿನಿಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಮನೆಗೂ ಆವರಿಸಿದೆ. ಮನೆಯಲ್ಲಿ ರವಿಶಂಕರ್ ರೆಡ್ಡಿ, ಅವರ ಪತ್ನಿ ಅನಂತಲಕ್ಷ್ಮಿ, ತಾಯಿ ರಾಮ ಸುಬ್ಬಮ್ಮ ಮತ್ತು ಇಬ್ಬರು ಮಕ್ಕಳಾದ ಸಿದ್ದು ಮತ್ತು ಕಾರ್ತಿಕಾ ಇದ್ದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು ನಿದ್ದೆಯಲ್ಲಿದ್ದಾಗಲೇ ಬೆಂಕಿ ಮನೆಯೆಲ್ಲಾ ಹರಡಿ ಜೀವಂತ ಸುಟ್ಟು ಹೋಗಿದ್ದಾರೆ.

ರೇಣಿಗುಂಟಾ ಪೊಲೀಸರು ಸ್ಥಳಕ್ಕೆ ಧಾವಿಸಿ ಅನಂತಲಕ್ಷ್ಮಿ, ರಾಮ ಸುಬ್ಬಮ್ಮ ಹಾಗೂ ಇಬ್ಬರು ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ವೇಳೆ ಮಕ್ಕಳಾದ ಸಿದ್ದು ಮತ್ತು ಕಾರ್ತಿಕಾ ಸಾವನ್ನಪ್ಪಿದ್ದಾರೆ. 90 ರಷ್ಟು ಸುಟ್ಟ ಗಾಯಗಳಾಗಿದ್ದ ರವಿಶಂಕರ್ ರೆಡ್ಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇತ್ತೀಚೆಗಷ್ಟೇ ತೆಲಂಗಾಣದ ಸಿಕಂದರಾಬಾದ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿತ್ತು. ಸಿಂಕಂದರಾಬಾದ್ ನಗರದ ಎಲೆಕ್ಟ್ರಿಕ್ ಬೈಕ್ ಶೋ ರೂಮ್ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಶೋ ರೂಮ್ ನಿಂದ ಅದೇ ಕಟ್ಟಡದ ಮೇಲ್ಭಾಗದ ಲಾಡ್ಜ್ನಲ್ಲಿ ಬೆಂಕಿ ಹರಡಿ ತಂಗಿದ್ದವರಲ್ಲಿ 8 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದರು. 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದರು.
A doctor and his two children died in a fire accident that took place in Tamil Nadu's Tirupati district on Sunday. An initial investigation into the matter has revealed that the fire might have been caused by a short circuit.Arohan Rao, Inspector of Renigunta Police told India Today that the fire broke out on Sunday morning at around 3 to 4 am on the first floor of the doctor's house. The incident took place at the Renigunta area of Tirupati district.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm