ಬ್ರೇಕಿಂಗ್ ನ್ಯೂಸ್
27-09-22 05:37 pm HK News Desk ದೇಶ - ವಿದೇಶ
ಹೈದರಾಬಾದ್, ಸೆ.27: ಚರ್ಚ್ ಆವರಣದಲ್ಲಿ ಮೇರಿ ಮೂರ್ತಿ ಮತ್ತು ನವರಾತ್ರಿ ಹಿನ್ನೆಲೆಯಲ್ಲಿ ಪ್ರತಿಷ್ಠೆ ಮಾಡಿದ್ದ ದುರ್ಗಾ ಮಾತೆಯ ಪ್ರತಿಮೆಗೆ ಹಾನಿ ಮಾಡಲು ಯತ್ನಿಸಿದ್ದಾರೆಂಬ ಆರೋಪದಲ್ಲಿ ಇಬ್ಬರು ಬುರ್ಖಾಧಾರಿ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ನಗರದ ಖೈರತಾಬಾದ್ ಎಂಬಲ್ಲಿ ಘಟನೆ ನಡೆದಿದ್ದು, ಪೊಲೀಸರು ಮಹಿಳೆಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಹಿಳೆಯರ ಬಳಿಯಿಂದ ಚೂರಿ ಇನ್ನಿತರ ಶಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಬೆನ್ನಲ್ಲೇ ಪೊಲೀಸ್ ಠಾಣೆ ಮುಂಭಾಗದಲ್ಲಿ ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಹಿಳೆಯರು ಪಿಎಫ್ಐ ಬೆಂಬಲಿಗರು ಎನ್ನುವ ವದಂತಿಯನ್ನು ಪೊಲೀಸರು ತಳ್ಳಿಹಾಕಿದ್ದಾರೆ.

ಮೊದಲಿಗೆ ಚರ್ಚ್ ಬಳಿಗೆ ತೆರಳಿದ್ದ ಮಹಿಳೆಯರು ಅಲ್ಲಿದ್ದ ಮೇರಿ ಮೂರ್ತಿಗೆ ಹಾನಿ ಮಾಡಲು ಯತ್ನಿಸಿದ್ದಾರೆ. ಆನಂತರ, ಅಲ್ಲಿಯೇ ಸಮೀಪದಲ್ಲಿ ನವರಾತ್ರಿ ಉತ್ಸವಕ್ಕೆಂದು ದುರ್ಗಾ ಮಾತೆಯ ಪೆಂಡಾಲ್ ಗೆ ಹಾನಿ ಮಾಡಲು ಮುಂದಾಗಿದ್ದಾರೆ. ಈ ವೇಳೆ, ಸ್ಥಳೀಯರು ಮಹಿಳೆಯರನ್ನು ಹಿಡಿದಿದ್ದು, ಪೊಲೀಸರನ್ನು ಸ್ಥಳಕ್ಕೆ ಕರೆಸಿದ್ದಾರೆ. ಮಹಿಳೆಯರು ಕೈಯಲ್ಲಿ ಸ್ಪಾನರ್ ಹಿಡಿದುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ದುರ್ಗಾ ಮಾತೆಯ ಪ್ರತಿಮೆಗೆ ಸ್ವಲ್ಪ ಹಾನಿಯಾಗಿದ್ದು, ಅದನ್ನು ಅಲ್ಲಿನ ಪ್ರತಿನಿಧಿಗಳು ಸರಿಪಡಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಮಹಿಳೆಯರು ವಿಚಾರಣೆ ವೇಳೆ ತಮ್ಮ ಹೆಸರು ತಿಳಿಸುತ್ತಿಲ್ಲ. ಯಾಕಾಗಿ ಈ ಕೃತ್ಯ ಎಸಗಲು ಮುಂದಾಗಿದ್ದಾರೆ ಎನ್ನುವ ಬಗ್ಗೆ ವಿಚಾರಣೆಗೆ ಸ್ಪಂದಿಸುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Two burqa-clad women were taken into custody after they were allegedly seen vandalising a statue of Virgin Mary and also a Durga idol in Khairatabad area of Hyderabad on Tuesday. Police ruled out any links of the women with PFI as the incident comes amid a mega crackdown on the radical outfit and said that the women, a sister duo, were found to be mentally unstable.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm