ಬ್ರೇಕಿಂಗ್ ನ್ಯೂಸ್
27-09-22 05:37 pm HK News Desk ದೇಶ - ವಿದೇಶ
ಹೈದರಾಬಾದ್, ಸೆ.27: ಚರ್ಚ್ ಆವರಣದಲ್ಲಿ ಮೇರಿ ಮೂರ್ತಿ ಮತ್ತು ನವರಾತ್ರಿ ಹಿನ್ನೆಲೆಯಲ್ಲಿ ಪ್ರತಿಷ್ಠೆ ಮಾಡಿದ್ದ ದುರ್ಗಾ ಮಾತೆಯ ಪ್ರತಿಮೆಗೆ ಹಾನಿ ಮಾಡಲು ಯತ್ನಿಸಿದ್ದಾರೆಂಬ ಆರೋಪದಲ್ಲಿ ಇಬ್ಬರು ಬುರ್ಖಾಧಾರಿ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ನಗರದ ಖೈರತಾಬಾದ್ ಎಂಬಲ್ಲಿ ಘಟನೆ ನಡೆದಿದ್ದು, ಪೊಲೀಸರು ಮಹಿಳೆಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಹಿಳೆಯರ ಬಳಿಯಿಂದ ಚೂರಿ ಇನ್ನಿತರ ಶಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಬೆನ್ನಲ್ಲೇ ಪೊಲೀಸ್ ಠಾಣೆ ಮುಂಭಾಗದಲ್ಲಿ ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಹಿಳೆಯರು ಪಿಎಫ್ಐ ಬೆಂಬಲಿಗರು ಎನ್ನುವ ವದಂತಿಯನ್ನು ಪೊಲೀಸರು ತಳ್ಳಿಹಾಕಿದ್ದಾರೆ.

ಮೊದಲಿಗೆ ಚರ್ಚ್ ಬಳಿಗೆ ತೆರಳಿದ್ದ ಮಹಿಳೆಯರು ಅಲ್ಲಿದ್ದ ಮೇರಿ ಮೂರ್ತಿಗೆ ಹಾನಿ ಮಾಡಲು ಯತ್ನಿಸಿದ್ದಾರೆ. ಆನಂತರ, ಅಲ್ಲಿಯೇ ಸಮೀಪದಲ್ಲಿ ನವರಾತ್ರಿ ಉತ್ಸವಕ್ಕೆಂದು ದುರ್ಗಾ ಮಾತೆಯ ಪೆಂಡಾಲ್ ಗೆ ಹಾನಿ ಮಾಡಲು ಮುಂದಾಗಿದ್ದಾರೆ. ಈ ವೇಳೆ, ಸ್ಥಳೀಯರು ಮಹಿಳೆಯರನ್ನು ಹಿಡಿದಿದ್ದು, ಪೊಲೀಸರನ್ನು ಸ್ಥಳಕ್ಕೆ ಕರೆಸಿದ್ದಾರೆ. ಮಹಿಳೆಯರು ಕೈಯಲ್ಲಿ ಸ್ಪಾನರ್ ಹಿಡಿದುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ದುರ್ಗಾ ಮಾತೆಯ ಪ್ರತಿಮೆಗೆ ಸ್ವಲ್ಪ ಹಾನಿಯಾಗಿದ್ದು, ಅದನ್ನು ಅಲ್ಲಿನ ಪ್ರತಿನಿಧಿಗಳು ಸರಿಪಡಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಮಹಿಳೆಯರು ವಿಚಾರಣೆ ವೇಳೆ ತಮ್ಮ ಹೆಸರು ತಿಳಿಸುತ್ತಿಲ್ಲ. ಯಾಕಾಗಿ ಈ ಕೃತ್ಯ ಎಸಗಲು ಮುಂದಾಗಿದ್ದಾರೆ ಎನ್ನುವ ಬಗ್ಗೆ ವಿಚಾರಣೆಗೆ ಸ್ಪಂದಿಸುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Two burqa-clad women were taken into custody after they were allegedly seen vandalising a statue of Virgin Mary and also a Durga idol in Khairatabad area of Hyderabad on Tuesday. Police ruled out any links of the women with PFI as the incident comes amid a mega crackdown on the radical outfit and said that the women, a sister duo, were found to be mentally unstable.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm