ಬ್ರೇಕಿಂಗ್ ನ್ಯೂಸ್
27-09-22 05:37 pm HK News Desk ದೇಶ - ವಿದೇಶ
ಹೈದರಾಬಾದ್, ಸೆ.27: ಚರ್ಚ್ ಆವರಣದಲ್ಲಿ ಮೇರಿ ಮೂರ್ತಿ ಮತ್ತು ನವರಾತ್ರಿ ಹಿನ್ನೆಲೆಯಲ್ಲಿ ಪ್ರತಿಷ್ಠೆ ಮಾಡಿದ್ದ ದುರ್ಗಾ ಮಾತೆಯ ಪ್ರತಿಮೆಗೆ ಹಾನಿ ಮಾಡಲು ಯತ್ನಿಸಿದ್ದಾರೆಂಬ ಆರೋಪದಲ್ಲಿ ಇಬ್ಬರು ಬುರ್ಖಾಧಾರಿ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ನಗರದ ಖೈರತಾಬಾದ್ ಎಂಬಲ್ಲಿ ಘಟನೆ ನಡೆದಿದ್ದು, ಪೊಲೀಸರು ಮಹಿಳೆಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಹಿಳೆಯರ ಬಳಿಯಿಂದ ಚೂರಿ ಇನ್ನಿತರ ಶಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಬೆನ್ನಲ್ಲೇ ಪೊಲೀಸ್ ಠಾಣೆ ಮುಂಭಾಗದಲ್ಲಿ ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಹಿಳೆಯರು ಪಿಎಫ್ಐ ಬೆಂಬಲಿಗರು ಎನ್ನುವ ವದಂತಿಯನ್ನು ಪೊಲೀಸರು ತಳ್ಳಿಹಾಕಿದ್ದಾರೆ.

ಮೊದಲಿಗೆ ಚರ್ಚ್ ಬಳಿಗೆ ತೆರಳಿದ್ದ ಮಹಿಳೆಯರು ಅಲ್ಲಿದ್ದ ಮೇರಿ ಮೂರ್ತಿಗೆ ಹಾನಿ ಮಾಡಲು ಯತ್ನಿಸಿದ್ದಾರೆ. ಆನಂತರ, ಅಲ್ಲಿಯೇ ಸಮೀಪದಲ್ಲಿ ನವರಾತ್ರಿ ಉತ್ಸವಕ್ಕೆಂದು ದುರ್ಗಾ ಮಾತೆಯ ಪೆಂಡಾಲ್ ಗೆ ಹಾನಿ ಮಾಡಲು ಮುಂದಾಗಿದ್ದಾರೆ. ಈ ವೇಳೆ, ಸ್ಥಳೀಯರು ಮಹಿಳೆಯರನ್ನು ಹಿಡಿದಿದ್ದು, ಪೊಲೀಸರನ್ನು ಸ್ಥಳಕ್ಕೆ ಕರೆಸಿದ್ದಾರೆ. ಮಹಿಳೆಯರು ಕೈಯಲ್ಲಿ ಸ್ಪಾನರ್ ಹಿಡಿದುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ದುರ್ಗಾ ಮಾತೆಯ ಪ್ರತಿಮೆಗೆ ಸ್ವಲ್ಪ ಹಾನಿಯಾಗಿದ್ದು, ಅದನ್ನು ಅಲ್ಲಿನ ಪ್ರತಿನಿಧಿಗಳು ಸರಿಪಡಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಮಹಿಳೆಯರು ವಿಚಾರಣೆ ವೇಳೆ ತಮ್ಮ ಹೆಸರು ತಿಳಿಸುತ್ತಿಲ್ಲ. ಯಾಕಾಗಿ ಈ ಕೃತ್ಯ ಎಸಗಲು ಮುಂದಾಗಿದ್ದಾರೆ ಎನ್ನುವ ಬಗ್ಗೆ ವಿಚಾರಣೆಗೆ ಸ್ಪಂದಿಸುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Two burqa-clad women were taken into custody after they were allegedly seen vandalising a statue of Virgin Mary and also a Durga idol in Khairatabad area of Hyderabad on Tuesday. Police ruled out any links of the women with PFI as the incident comes amid a mega crackdown on the radical outfit and said that the women, a sister duo, were found to be mentally unstable.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm