ಬ್ರೇಕಿಂಗ್ ನ್ಯೂಸ್
09-10-20 01:36 pm Headline Karnataka News Network ದೇಶ - ವಿದೇಶ
ಬೆಂಗಳೂರು, ಅಕ್ಟೋಬರ್ 09: ರಾಜ್ಯದಲ್ಲಿ ಒಂದೆಡೆ ಶಾಲೆ ಆರಂಭಿಸಲು ತಯಾರಿ ನಡೆಯುತ್ತಿದ್ದರೆ, ಇದೇ ವೇಳೆ ರಾಜ್ಯಾದ್ಯಂತ 100ಕ್ಕೂ ಹೆಚ್ಚು ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಹತ್ತು ಮಂದಿ ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಬಳ್ಳಾರಿ ನಗರ ಭಾಗದಲ್ಲಿ ಐದು ಮತ್ತು ಗ್ರಾಮಾಂತರ ಭಾಗದಲ್ಲಿ ಐದು ಮಂದಿ ಸೋಂಕಿನಿಂದ ಸಾವು ಕಂಡಿರುವುದನ್ನು ಅಲ್ಲಿನ ಶಿಕ್ಷಣಾಧಿಕಾರಿಗಳು ದೃಢಪಡಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದ ಬಳ್ಳಾರಿ ಜಿಲ್ಲೆಯಲ್ಲಿ ವಿದ್ಯಾಗಮ ಯೋಜನೆಯಡಿ ಶಿಕ್ಷಣ ಇಲಾಖೆಯಿಂದ ವಠಾರ ಶಾಲೆ ಆರಂಭಿಸಲಾಗಿತ್ತು.
ಇನ್ನು ಬಾಗಲಕೋಟೆ ಜಿಲ್ಲೆಯಲ್ಲೂ 17 ಜನ ಶಿಕ್ಷಕರು ಹೆಮ್ಮಾರಿಗೆ ಬಲಿಯಾಗಿದ್ದಾರೆ. ವಿದ್ಯಾಗಮ ಯೋಜನೆಯಡಿ ವಠಾರ ಶಾಲೆ ಆರಂಭದ ನಂತರ ಆರು ಶಿಕ್ಷಕರು ಬಲಿಯಾಗಿದ್ದಾರೆ. ಯೋಜನೆ ಆರಂಭಕ್ಕೂ ಮುನ್ನ 11 ಜನ ಶಿಕ್ಷಕರು ಬಲಿಯಾಗಿದ್ದಾರೆ. ಐವತ್ತಕ್ಕೂ ಹೆಚ್ಚು ಮಂದಿ ಸೋಂಕಿಗೆ ಒಳಗಾಗಿ ಗುಣಮುಖರಾಗಿದ್ದಾರೆ ಎಂದು ಶಿಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.


ಇನ್ನು ಬೆಳಗಾವಿಯಲ್ಲಿ ಕೊರೊನಾ ಸೋಂಕಿನಿಂದ 40ಕ್ಕೂ ಹೆಚ್ಚು ಶಿಕ್ಷಕರು ಬಲಿಯಾಗಿದ್ದಾರೆಂದು ಅಲ್ಲಿನ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಬೆಳಗಾವಿ ಶೈಕ್ಷಣಿಕ ವಿಭಾಗದಲ್ಲಿ 21 ಹಾಗೂ ಚಿಕ್ಕೋಡಿ ವಿಭಾಗದಲ್ಲಿ 19 ಮಂದಿ ಬಲಿಯಾಗಿದ್ದಾರೆ. ಒಟ್ಟು 120 ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಬಹುಪಾಲು ಶಿಕ್ಷಕರು ಗುಣಮುಖರಾಗಿದ್ದಾರೆ ಎಂದು ಬೆಳಗಾವಿ ಡಿಡಿಪಿಐ ಪುಂಡಲೀಕ್ ಮರಾಠೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಕಲಬುರಗಿಯಲ್ಲಿ 11 ಶಿಕ್ಷಕರು ಬಲಿಯಾಗಿದ್ದಾರೆಂದು ಶಿಕ್ಷಣ ಇಲಾಖೆಯಿಂದ ಮಾಹಿತಿ ಲಭಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಯಾವುದೇ ಶಿಕ್ಷಕರು ಬಲಿಯಾಗಿಲ್ಲ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಜಿ. ಮಲ್ಲೇಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಉಡುಪಿಯಲ್ಲಿ ಓರ್ವ ಶಿಕ್ಷಕಿ ಬಲಿಯಾಗಿದ್ದರೆ, ಕೋಲಾರದಲ್ಲಿ ಇಬ್ಬರು ಬಲಿಯಾಗಿದ್ದಾರೆ. ವಿದ್ಯಾಗಮ ಯೋಜನೆಯಡಿ ಶಿಕ್ಷಕರು ಆಸುಪಾಸಿನ ಪ್ರದೇಶಗಳಿಗೆ ತೆರಳಿ, ಪರಿಸರದ ವಿದ್ಯಾರ್ಥಿಗಳನ್ನು ಸೇರಿಸಿ ಪಾಠ ಮಾಡಲು ಸೂಚಿಸಲಾಗಿತ್ತು. ಗ್ರಾಮಾಂತರ ಪ್ರದೇಶದ ಸರಕಾರಿ ಶಾಲೆಗಳಲ್ಲಿ ಇಂಥ ಯೋಜನೆ ಜಾರಿಯಾಗಿತ್ತು. ಇದೇ ಈಗ ಮುಳುವಾಯಿತಾ ಎನ್ನುವ ಲೆಕ್ಕಾಚಾರ ನಡೆದಿದೆ. ಆದರೆ, ಉತ್ತರ ಕರ್ನಾಟಕಕ್ಕೆ ಹೋಲಿಸಿದರೆ ದಕ್ಷಿಣ ಕರ್ನಾಟಕದಲ್ಲಿ ಶಿಕ್ಷಕರು ಬಲಿಯಾಗಿದ್ದು ಕಡಿಮೆ.
100 Teachers have been dead so far after being tested positive to Coronavirus. The death rate is higher in Uttar Karnataka substantiates report.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am