ಬ್ರೇಕಿಂಗ್ ನ್ಯೂಸ್
29-09-22 05:41 pm HK News Desk ದೇಶ - ವಿದೇಶ
ನವದೆಹಲಿ, ಸೆ.29: ರಾಜಸ್ಥಾನ ರಾಜಕೀಯದಲ್ಲಿ ಉಂಟಾಗಿದ್ದ ರಾಜಕೀಯ ಅಸ್ಥಿರತೆ ಕೊನೆಗೂ ಅಂತ್ಯ ಕಂಡಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು ಹೇಳುವುದರೊಂದಿಗೆ ಗೊಂದಲಕ್ಕೆ ತೆರೆಬಿದ್ದಿದೆ.
ಗೆಹ್ಲೋಟ್ ಸಿಎಂ ಸ್ಥಾನ ತ್ಯಜಿಸಿದರೆ ಹೊಸ ಸಿಎಂ ಯಾರಾಗುತ್ತಾರೆಂಬ ವಿಚಾರದಲ್ಲಿ ಗೊಂದಲ ಎದ್ದಿತ್ತು. ಸಚಿನ್ ಪೈಲಟ್ ಸಿಎಂ ಆದಲ್ಲಿ ತಾವು ರಾಜಿನಾಮೆ ನೀಡುತ್ತೇವೆಂದು 90 ರಷ್ಟು ಶಾಸಕರು ಬೆದರಿಕೆ ಹಾಕಿದ್ದರು. ಇದರಿಂದ ಹೈಕಮಾಂಡ್ ಕಡೆಯಿಂದ ಬಂದಿದ್ದ ವೀಕ್ಷಕರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು. ಕೊನೆಗೆ, ರಾಜಸ್ಥಾನ ಕಾಂಗ್ರೆಸ್ ಇಬ್ಭಾಗವಾಗುವುದನ್ನು ತಪ್ಪಿಸಲು ಗೆಹ್ಲೋಟ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದೇ ಹಿಂದೆ ಸರಿಯಲೇಬೇಕಾಗಿತ್ತು.
ಈಗೇನಿದ್ದರೂ ಸಂಸದರಾದ ಶಶಿ ತರೂರ್ ಮತ್ತು ದಿಗ್ವಿಜಯ ಸಿಂಗ್ ಮಧ್ಯೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ನಡೆಯಲಿದೆ ಎನ್ನಲಾಗುತ್ತಿದೆ. ಎರಡು ದಶಕಗಳ ಬಳಿಕ ಗಾಂಧಿಯೇತರ ಅಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಯಲಿದ್ದು ಮಧ್ಯೆ ಸೆಣಸಾಟ ಇರಲಿದೆ ಎಂದು ಸೆ.30 ರ ಸಂಜೆ ವೇಳೆಗೆ ಖಚಿತವಾಗಲಿದೆ.
'ರಾಜಸ್ಥಾನದಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ನಾನು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿಯುತ್ತಿದ್ದೇನೆ. ರಾಜ್ಯದಲ್ಲಿ ನಡೆದ ಘಟನೆಗಳಿಂದ ನನಗೆ ತೀವ್ರ ನೋವಾಗಿದೆ. ಈ ನೋವನ್ನು ನನ್ನ ಜೀವನದ ಉದ್ದಕ್ಕೂ ನಾನು ಅನುಭವಿಸುತ್ತೇನೆ' ಎಂದು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ನಂತರ ಅಶೋಕ್ ಗೆಹ್ಲೋಟ್ ಮಾಧ್ಯಮಗಳಿಗೆ ಹೇಳಿದ್ದಾರೆ.
ಈ ನಡುವೆ ಶಶಿ ತರೂರ್ ಟ್ವೀಟ್ ಮಾಡಿದ್ದು, 'ನನ್ನದು ಮತ್ತು ದಿಗ್ವಿಜಯ ಸಿಂಗ್ ಅವರ ನಡುವಿನದ್ದು ಪ್ರತಿಸ್ಪರ್ಧಿಗಳ ನಡುವೆ ನಡೆಯುವಂತಹ ಯುದ್ಧವಲ್ಲ. ಸಹೋದ್ಯೋಗಿಗಳ ನಡುವಿನ ಸೌಹಾರ್ದ ಸ್ಪರ್ಧೆ ಅಷ್ಟೇ ಎಂಬುದನ್ನು ನಾವಿಬ್ಬರೂ ಒಪ್ಪಿಕೊಂಡಿದ್ದೇವೆ. ನಮ್ಮಿಬ್ಬರ ನಡುವೆ ಯಾರೇ ಗೆದ್ದರೂ ಅದು ಭಾರತದ ಗೆಲುವಾಗಲಿದೆ' ಎಂದು ಹೇಳಿಕೊಂಡಿದ್ದು, ಒಬ್ಬರನ್ನೊಬ್ಬರು ಅಪ್ಪಿಕೊಂಡಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಂದಹಾಗೆ ಕೇರಳದಲ್ಲಿ ಶಶಿ ತರೂರ್ ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸಿಡಿದೆದ್ದಿದ್ದು, ತಮಗೆ ರಾಹುಲ್ ಗಾಂಧಿಯ ನಾಯಕತ್ವವೇ ಬೇಕು ಎಂದಿದ್ದಾರೆ.
Rajasthan Chief Minister Ashok Gehlot announced Thursday thathe will not contest the Congress presidential polls.After meeting party president Sonia Gandhi in New Delhi, Gehlot said that he apologised to Gandhi for the developments on Sunday when MLAs supporting him defied the high command and skipped the Congress Legislature Party (CLP). When asked if he will continue as chief minister, Gehlot said Sonia Gandhi would decide on the issue.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm