ಬ್ರೇಕಿಂಗ್ ನ್ಯೂಸ್
29-09-22 05:41 pm HK News Desk ದೇಶ - ವಿದೇಶ
ನವದೆಹಲಿ, ಸೆ.29: ರಾಜಸ್ಥಾನ ರಾಜಕೀಯದಲ್ಲಿ ಉಂಟಾಗಿದ್ದ ರಾಜಕೀಯ ಅಸ್ಥಿರತೆ ಕೊನೆಗೂ ಅಂತ್ಯ ಕಂಡಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು ಹೇಳುವುದರೊಂದಿಗೆ ಗೊಂದಲಕ್ಕೆ ತೆರೆಬಿದ್ದಿದೆ.
ಗೆಹ್ಲೋಟ್ ಸಿಎಂ ಸ್ಥಾನ ತ್ಯಜಿಸಿದರೆ ಹೊಸ ಸಿಎಂ ಯಾರಾಗುತ್ತಾರೆಂಬ ವಿಚಾರದಲ್ಲಿ ಗೊಂದಲ ಎದ್ದಿತ್ತು. ಸಚಿನ್ ಪೈಲಟ್ ಸಿಎಂ ಆದಲ್ಲಿ ತಾವು ರಾಜಿನಾಮೆ ನೀಡುತ್ತೇವೆಂದು 90 ರಷ್ಟು ಶಾಸಕರು ಬೆದರಿಕೆ ಹಾಕಿದ್ದರು. ಇದರಿಂದ ಹೈಕಮಾಂಡ್ ಕಡೆಯಿಂದ ಬಂದಿದ್ದ ವೀಕ್ಷಕರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು. ಕೊನೆಗೆ, ರಾಜಸ್ಥಾನ ಕಾಂಗ್ರೆಸ್ ಇಬ್ಭಾಗವಾಗುವುದನ್ನು ತಪ್ಪಿಸಲು ಗೆಹ್ಲೋಟ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದೇ ಹಿಂದೆ ಸರಿಯಲೇಬೇಕಾಗಿತ್ತು.


ಈಗೇನಿದ್ದರೂ ಸಂಸದರಾದ ಶಶಿ ತರೂರ್ ಮತ್ತು ದಿಗ್ವಿಜಯ ಸಿಂಗ್ ಮಧ್ಯೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ನಡೆಯಲಿದೆ ಎನ್ನಲಾಗುತ್ತಿದೆ. ಎರಡು ದಶಕಗಳ ಬಳಿಕ ಗಾಂಧಿಯೇತರ ಅಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಯಲಿದ್ದು ಮಧ್ಯೆ ಸೆಣಸಾಟ ಇರಲಿದೆ ಎಂದು ಸೆ.30 ರ ಸಂಜೆ ವೇಳೆಗೆ ಖಚಿತವಾಗಲಿದೆ.
'ರಾಜಸ್ಥಾನದಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ನಾನು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿಯುತ್ತಿದ್ದೇನೆ. ರಾಜ್ಯದಲ್ಲಿ ನಡೆದ ಘಟನೆಗಳಿಂದ ನನಗೆ ತೀವ್ರ ನೋವಾಗಿದೆ. ಈ ನೋವನ್ನು ನನ್ನ ಜೀವನದ ಉದ್ದಕ್ಕೂ ನಾನು ಅನುಭವಿಸುತ್ತೇನೆ' ಎಂದು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ನಂತರ ಅಶೋಕ್ ಗೆಹ್ಲೋಟ್ ಮಾಧ್ಯಮಗಳಿಗೆ ಹೇಳಿದ್ದಾರೆ.

ಈ ನಡುವೆ ಶಶಿ ತರೂರ್ ಟ್ವೀಟ್ ಮಾಡಿದ್ದು, 'ನನ್ನದು ಮತ್ತು ದಿಗ್ವಿಜಯ ಸಿಂಗ್ ಅವರ ನಡುವಿನದ್ದು ಪ್ರತಿಸ್ಪರ್ಧಿಗಳ ನಡುವೆ ನಡೆಯುವಂತಹ ಯುದ್ಧವಲ್ಲ. ಸಹೋದ್ಯೋಗಿಗಳ ನಡುವಿನ ಸೌಹಾರ್ದ ಸ್ಪರ್ಧೆ ಅಷ್ಟೇ ಎಂಬುದನ್ನು ನಾವಿಬ್ಬರೂ ಒಪ್ಪಿಕೊಂಡಿದ್ದೇವೆ. ನಮ್ಮಿಬ್ಬರ ನಡುವೆ ಯಾರೇ ಗೆದ್ದರೂ ಅದು ಭಾರತದ ಗೆಲುವಾಗಲಿದೆ' ಎಂದು ಹೇಳಿಕೊಂಡಿದ್ದು, ಒಬ್ಬರನ್ನೊಬ್ಬರು ಅಪ್ಪಿಕೊಂಡಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಂದಹಾಗೆ ಕೇರಳದಲ್ಲಿ ಶಶಿ ತರೂರ್ ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸಿಡಿದೆದ್ದಿದ್ದು, ತಮಗೆ ರಾಹುಲ್ ಗಾಂಧಿಯ ನಾಯಕತ್ವವೇ ಬೇಕು ಎಂದಿದ್ದಾರೆ.
Rajasthan Chief Minister Ashok Gehlot announced Thursday thathe will not contest the Congress presidential polls.After meeting party president Sonia Gandhi in New Delhi, Gehlot said that he apologised to Gandhi for the developments on Sunday when MLAs supporting him defied the high command and skipped the Congress Legislature Party (CLP). When asked if he will continue as chief minister, Gehlot said Sonia Gandhi would decide on the issue.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm