ಬ್ರೇಕಿಂಗ್ ನ್ಯೂಸ್
30-09-22 05:02 pm HK News Desk ದೇಶ - ವಿದೇಶ
ಕಾಬೂಲ್, ಸೆ.30 : ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದೆ. ಶಿಕ್ಷಣ ಕೇಂದ್ರದ ಆವರಣದಲ್ಲಿ ಬಾಂಬ್ ಸ್ಫೋಟ ಆಗಿದ್ದು 23 ಮಂದಿ ಸಾವನ್ನಪ್ಪಿದ್ದಾರೆ.
ಕಾಬೂಲ್ ಬಳಿಯ ಕಾಜ್ ಎಜುಕೇಶನ್ ಸೆಂಟರ್ ನಲ್ಲಿ ಘಟನೆ ನಡೆದಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ಹದಿಹರೆಯದ ಹೆಣ್ಮಕ್ಕಳಿದ್ದಾರೆ. ಶಿಕ್ಷಣ ಕೇಂದ್ರದಲ್ಲಿ ಶುಕ್ರವಾರ ಬೆಳಗ್ಗೆ 7.30ರ ವೇಳೆಗೆ ವಿದ್ಯಾರ್ಥಿಗಳು ಯುನಿವರ್ಸಿಟಿ ಅರ್ಹತಾ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾಗ ಆತ್ಮಹತ್ಯಾ ಬಾಂಬರ್ ತನ್ನನ್ನು ತಾನು ಸ್ಫೋಟಿಸಿದ್ದಾನೆ. 23 ಮಂದಿ ಸಾವನ್ನಪ್ಪಿದ್ದು, 36 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.




ಆತ್ಮಹತ್ಯಾ ಬಾಂಬ್ ದಾಳಿ ನಡೆಸಿರುವ ಗುಂಪು ಯಾರದ್ದು ಎನ್ನುವುದು ತಿಳಿದುಬಂದಿಲ್ಲ. ಕಾಜ್ ಎಜುಕೇಶನ್ ಸೆಂಟರ್ ನಲ್ಲಿ ಹೆಚ್ಚಿನವರು ಹಜಾರಾ ಎನ್ನುವ ಮುಸ್ಲಿಮರಲ್ಲಿ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದವರು ಕಲಿಯುತ್ತಿದ್ದರು. ಹಜಾರಾ ಕಮ್ಯುನಿಟಿಯನ್ನು ಗುರಿಯಾಗಿಸಿ ಐಸಿಸ್ ಖೊರಸಾನ್ ಉಗ್ರರು ಈ ಹಿಂದೆಯೂ ದಾಳಿ ನಡೆಸಿದ್ದರು. ಅಫ್ಘಾನಿಸ್ತಾನ ಆಡಳಿತವು ಬಾಂಬ್ ದಾಳಿ ಘಟನೆಯನ್ನು ಖಂಡಿಸಿದ್ದು ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಅಮೆರಿಕ ಕೂಡ ಘಟನೆಯನ್ನು ಖಂಡಿಸಿದ್ದು ವಿದ್ಯಾರ್ಥಿಗಳು ಕೊಠಡಿಯಲ್ಲಿರುವಾಗ ಅವರನ್ನು ಗುರಿಯಾಗಿಸಿ ಬಾಂಬ್ ದಾಳಿ ನಡೆಸುವುದು ಅತ್ಯಂತ ಹೀನಾಯ ಮತ್ತು ಘೋರ ಕೃತ್ಯ ಎಂದು ಹೇಳಿದೆ.
A suicide bomb attack on an education center in Kabul has killed at least 23 people, most of whom are believed to be young women, in the latest sign of the deteriorating security situation in the Afghan capital.The explosion took place on Friday at the Kaaj education center, in a predominantly Hazara neighborhood – an ethnic minority group that has long faced oppression.Students were taking a practice university entrance exam at 7:30 a.m., local time (11 p.m. ET) when the blast first took place, Kabul Police Spokesman Khalid Zadran told CNN.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm